AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ 3 ಹೆಣ್ಣುಮಕ್ಕಳ ತಾಯಿಯ ತಲೆಗೆ ಮೊಳೆ ಹೊಡೆದ ಚಿಕಿತ್ಸಕ; ಇಕ್ಕಳದಿಂದ ತೆಗೆಯಲು ಯತ್ನಿಸಿ ಆಸ್ಪತ್ರೆ ಸೇರಿದ ಗರ್ಭಿಣಿ

ಆಸ್ಪತ್ರೆಗೆ ದಾಖಲಾದ ಆಕೆಗೆ ಎಕ್ಸ್​ ರೇ ಮಾಡಲಾಯಿತು. ಆಗ ಅವಳ ತಲೆಯಲ್ಲಿ ಸುಮಾರು 2 ಇಂಚು ಉದ್ದದ ಮೊಳೆಯನ್ನು ಆಕೆಯ ಹಣೆಗಿಂತ ಸ್ವಲ್ಪ ಮೇಲ್ಭಾಗದಲ್ಲಿ ತಲೆಗೆ ಸೇರಿಸಿದ್ದು ಗೊತ್ತಾಯಿತು.

ಪಾಕಿಸ್ತಾನದಲ್ಲಿ 3 ಹೆಣ್ಣುಮಕ್ಕಳ ತಾಯಿಯ ತಲೆಗೆ ಮೊಳೆ ಹೊಡೆದ ಚಿಕಿತ್ಸಕ; ಇಕ್ಕಳದಿಂದ ತೆಗೆಯಲು ಯತ್ನಿಸಿ ಆಸ್ಪತ್ರೆ ಸೇರಿದ ಗರ್ಭಿಣಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 09, 2022 | 4:23 PM

Share

ಗರ್ಭಿಣಿ ಮಹಿಳೆಯೊಬ್ಬಳ ತಲೆಗೆ ಮೊಳೆ ಹೊಡೆದ ವಿಚಿತ್ರ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ಬಗ್ಗೆ ವೈದ್ಯರೊಬ್ಬರು ಮಾಹಿತಿ ನೀಡಿದ್ದು, ಮಹಿಳೆಗೆ ಗಂಡು ಮಗು ಹುಟ್ಟಲಿ ಎಂಬ ಹೆಬ್ಬಯಕೆಯಿಂದ ಮಹಿಳೆ, ನಿಗೂಢ ತಂತ್ರಗಳನ್ನು ಬಳಸಿ ಚಿಕಿತ್ಸೆ ನೀಡುವ ವೈದ್ಯನೊಬ್ಬನಿಂದ ತಲೆಗೆ ಮೊಳೆ ಹೊಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.  ಇಂಥ ಶೋಷಣೆ, ಮೂಢನಂಬಿಕೆ ಪಾಕಿಸ್ತಾನದಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅತೀಂದ್ರಿಯ ಸೂಫಿ ಸಿದ್ಧಾಂತದ ಆಚರಣೆಗಳನ್ನು ಅಭ್ಯಸಿಸಿರುವ ಈ  ಚಿಕಿತ್ಸಕರು ಅದೆಷ್ಟೋ ವಿರೋಧದ ಮಧ್ಯೆಯೂ ಈ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಅಲ್ಲಿನ ಕೆಲವು ಮಾಧ್ಯಮಗಳೇ ವರದಿ ಮಾಡಿವೆ. 

ಈ ಮಹಿಳೆ ಪಾಕಿಸ್ತಾನದ ಪೇಶಾವರದ ಆಸ್ಪತ್ರೆಗೆ ದಾಖಲಾಗಿದ್ದಳು. ಅತೀಂದ್ರಿಯ ಸೂಫಿ ಚಿಕಿತ್ಸಕ ತನ್ನ ತಲೆಗೆ ಹೊಡೆದ ಮೊಳೆಯನ್ನು ಇಕ್ಕಳದ ಸಹಾಯದಿಂದ ಆಕೆ ತೆಗೆಯಲು ಯತ್ನಿಸಿದ್ದಳು. ಆಕೆಗೆ ಎಚ್ಚರವಿದ್ದರೂ, ಕೂಡ ತಡೆಯಲಾಗದಷ್ಟು ನೋವಿನಿಂದ ಬಳಲುತ್ತಿದ್ದಳು.  ಈಗಾಗಲೇ ಮೂರು ಹೆಣ್ಣುಮಕ್ಕಳ ತಾಯಿಯಾಗಿರುವ ಮಹಿಳೆ ಇದೀಗ ಮತ್ತೆ ಗರ್ಭಿಣಿ ಎಂದು ವೈದ್ಯ ಹೈದರ್​ ಖಾನ್​ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಮೊಳೆಯನ್ನು ಆಕೆಯ ತಲೆಯಿಂದ ತೆಗೆದು ಚಿಕಿತ್ಸೆ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾದ ಆಕೆಗೆ ಎಕ್ಸ್​ ರೇ ಮಾಡಲಾಯಿತು. ಆಗ ಅವಳ ತಲೆಯಲ್ಲಿ ಸುಮಾರು 2 ಇಂಚು ಉದ್ದದ ಮೊಳೆಯನ್ನು ಆಕೆಯ ಹಣೆಗಿಂತ ಸ್ವಲ್ಪ ಮೇಲ್ಭಾಗದಲ್ಲಿ ತಲೆಗೆ ಸೇರಿಸಿದ್ದು ಗೊತ್ತಾಯಿತು. ಅದೃಷ್ಟವೆಂದರೆ ಆ ಮೊಳೆ ಮಹಿಳೆಯ ಮಿದುಳಿಗೆ ತಗುಲಿರಲಿಲ್ಲ. ಮೊಳೆಯನ್ನು ತಲೆಗೆ ಸೇರಿಸಲು ಸುತ್ತಿಗೆ ಅಥವಾ ಇನ್ಯಾವುದೋ ದೊಡ್ಡದಾದ ವಸ್ತುವನ್ನೇ ಬಳಸಲಾಗಿದೆ ಎಂದೂ ಖಾನ್​ ಮಾಹಿತಿ ನೀಡಿದ್ದಾರೆ.  ಈ ಬಗ್ಗೆ ಕೇಳಿದಾಗ ಮೊದಲು ಆಕೆ ಸರಿಯಾಗಿ ಉತ್ತರ ನೀಡಲಿಲ್ಲ. ಗಂಡು ಮಗುವಿನ ಆಸೆಗೆ ಒಬ್ಬ ವಾಮಾಚಾರಿ ಚಿಕಿತ್ಸಕನ ಬಳಿ ಹೋಗಿದ್ದೆವು. ಅವರ ಸಲಹೆಯಂತೆ ನಾನು ನನ್ನ ತಲೆಗೆ ಮೊಳೆ ಹೊಡೆದುಕೊಂಡೆ ಎಂದು ಹೇಳಿದ್ದಳು. ಆದರೆ ನಂತರ ಗಟ್ಟಿಯಾಗಿ ವಿಚಾರಣೆ ಮಾಡಿದಾಗ, ಆ ಚಿಕಿತ್ಸಕನೇ ಖುದ್ದಾಗಿ ಮೊಳೆ ಹೊಡೆದಿದ್ದಾನೆ ಎಂದು ಸತ್ಯ ಬಾಯ್ಬಿಟ್ಟಿದ್ದಾಳೆ.  ಈ ಬಗ್ಗೆ ಸದ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆರೋಪಿಯನ್ನು ಹಿಡಿದು ವಿಚಾರಣೆಗೆ ಒಳಪಡಿಸಲು ಸಿದ್ಧವಾಗಿದ್ದಾರೆ. ಅದಕ್ಕೂ ಮೊದಲು ಮಹಿಳೆಯನ್ನು ವಿಚಾರಣೆಗೆ ಒಳಪಡಿಸುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  Karnataka Hijab Row: ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ಜಾರಿ; ಧರಣಿ, ಪ್ರತಿಭಟನೆ ನಡೆಸುವಂತಿಲ್ಲ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ