AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Egypt Visit: ಈಜಿಪ್ಟ್​​ನ ಕೈರೋಗೆ ಬಂದಿಳಿದ ಪ್ರಧಾನಿ ಮೋದಿ, 2 ದಿನಗಳ ಪ್ರವಾಸದಲ್ಲಿ ಮಹತ್ವ ವಿಚಾರಗಳ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ, ಮೊದಲೇ ನಿಗದಿಯಾಗಿರುವಂತೆ ಈಜಿಪ್ಟ್ ದೇಶಕ್ಕೆ ಭೇಟಿ ನೀಡಿದ್ದಾರೆ, ಇದೀಗ ಮೋದಿ ಈಜಿಪ್ಟ್​​ನ ರಾಜಧಾನಿ ಕೈರೋಗೆ ಬಂದಿಳಿದಿದ್ದಾರೆ.

Modi Egypt Visit: ಈಜಿಪ್ಟ್​​ನ ಕೈರೋಗೆ ಬಂದಿಳಿದ ಪ್ರಧಾನಿ ಮೋದಿ, 2 ದಿನಗಳ ಪ್ರವಾಸದಲ್ಲಿ ಮಹತ್ವ ವಿಚಾರಗಳ ಕುರಿತು ಚರ್ಚೆ
ಪ್ರಧಾನಿ ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jun 24, 2023 | 6:30 PM

Share

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ, ಮೊದಲೇ  ನಿಗದಿಯಾಗಿರುವಂತೆ ಈಜಿಪ್ಟ್ ದೇಶಕ್ಕೆ ಭೇಟಿ ನೀಡಿದ್ದಾರೆ, ಇದೀಗ ಮೋದಿ ಈಜಿಪ್ಟ್​​ನ ರಾಜಧಾನಿ ಕೈರೋಗೆ ಬಂದಿಳಿದಿದ್ದಾರೆ. ಮೋದಿ ಈಜಿಪ್ಟ್​​ನಲ್ಲಿ ಎರಡು ದಿನಗಳ ಕಾಲ ಪ್ರವಾಸ ಮಾಡಲಿದ್ದು.  26 ವರ್ಷಗಳ ನಂತರ ಈಜಿಪ್ಟ್​​ಗೆ ಭಾರತದ ಪ್ರಧಾನಿ ದ್ವಿಪಕ್ಷೀಯ ಭೇಟಿ ನೀಡುತ್ತಿರುವುದು ಮೊದಲು ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಅವರನ್ನು ಈಜಿಪ್ಟ್ ಅಧ್ಯಕ್ಷ ಅಬ್ದುಲ್​​ ಫತ್ತಾಹ್ ಎಲ್-ಸಿಸಿ ಅವರು ತನ್ನ ದೇಶಕ್ಕೆ ಆಹ್ವಾನಿಸಿದ್ದು, ಅವರೊಂದಿಗೆ ಮೋದಿ ಎರಡು ಪ್ರಮುಖ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಬಗ್ಗೆ ಮತ್ತು ದ್ವಿಪಕ್ಷೀಯ ಸಂಬಂಧಗಳು, ಹಲವು ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ, ಇಬ್ಬರು ನಾಯಕರು ನಾಳೆ (ಜೂ.24) ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ನಂತರ ಶನಿವಾರ ಈಜಿಪ್ಟ್‌ಗೆ ಬಂದಿದ್ದು,  ಮೋದಿ ಟ್ವಿಟರ್​​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಈಜಿಪ್ಟ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ,  ಕಾಮನ್‌ವೆಲ್ತ್ ಸ್ಥಾಪಿಸಿದ ಸ್ಮರಣಾರ್ಥ ಸ್ಥಳವಾದ ಹೆಲಿಯೊಪೊಲಿಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ಸ್ಮಾರಕವು ಮೊದಲು ವಿಶ್ವ ಯುದ್ಧದ ಸಮಯದಲ್ಲಿ ಈಜಿಪ್ಟ್‌ನಲ್ಲಿ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ 3,799 ಭಾರತೀಯ ಸೈನಿಕರನ್ನು ಇಲ್ಲಿ ವಿಶೇಷವಾಗಿ ಗೌರವಿಸಲಾಗಿದೆ.

ಪ್ರಧಾನಿ ಮೋದಿ ಅವರು 11ನೇ ಶತಮಾನದ ಐತಿಹಾಸಿಕ ಮಸೀದಿ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ. ದಾವೂದಿ ಬೊಹ್ರಾ ಸಮುದಾಯದ ಬೆಂಬಲದೊಂದಿಗೆ ಈ ಮಸೀದಿಯನ್ನು ಪುನಃಸ್ಥಾಪಿಸಲಾಗಿದೆ. ಇದಲ್ಲದೆ, ಮೋದಿ ಅವರು ತಮ್ಮ ಭೇಟಿಯ ಸಮಯದಲ್ಲಿ ಈಜಿಪ್ಟ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭೇಟಿ ಮಾಡಲಿದ್ದು, ಅವರ ಜತೆಗೆ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 6:18 pm, Sat, 24 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು