AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinzo Abe Funeral ಶಿಂಜೊ ಅಬೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಾಳೆ ಜಪಾನ್‌ಗೆ ನರೇಂದ್ರ ಮೋದಿ ಭೇಟಿ

PM Narendra Modi: ಜುಲೈ 8 ರಂದು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಅಬೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮುಕ್ತ ಇಂಡೋ ಪೆಸಿಫಿಕ್ ಪ್ರದೇಶದ ದೃಷ್ಟಿಕೋನವನ್ನು ಉತ್ತೇಜಿಸುವುದರ ಜೊತೆಗೆ, ಜಪಾನ್‌ನ ಸುದೀರ್ಘ ಸೇವೆ...

Shinzo Abe Funeral ಶಿಂಜೊ ಅಬೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಾಳೆ ಜಪಾನ್‌ಗೆ ನರೇಂದ್ರ ಮೋದಿ ಭೇಟಿ
ನರೇಂದ್ರ ಮೋದಿ
TV9 Web
| Updated By: Digi Tech Desk|

Updated on:Sep 26, 2022 | 1:20 PM

Share

ಜಪಾನ್​​ನ ಮಾಜಿ ಪ್ರಧಾನಿ ಶಿಂಜೋ ಅಬೆ (Shinzo Abe)ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಾಳೆ (ಸೆಪ್ಟೆಂಬರ್ 27) ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಜಪಾನ್‌ಗೆ ತೆರಳಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ  ಪ್ರಕಟಣೆಯ ಪ್ರಕಾರ, ಮೋದಿ ಅವರು  ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ. ಒಂದು ದಿನಕ್ಕಿಂತ ಹೆಚ್ಚು ದಿನ ಮೋದಿ ಜಪಾನ್​​ನಲ್ಲಿರುವುದಿಲ್ಲ. ಅಬೆ ಅವರ ಪತ್ನಿಯನ್ನು ಭೇಟಿ ಮಾಡಲಿರುವ ವಿಶ್ವ ನಾಯಕರಲ್ಲಿ ಮೋದಿ ಕೂಡ ಒಬ್ಬರು ಎಂದು ಮೂಲಗಳು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಜುಲೈ 8 ರಂದು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಅಬೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮುಕ್ತ ಇಂಡೋ ಪೆಸಿಫಿಕ್ ಪ್ರದೇಶದ ದೃಷ್ಟಿಕೋನವನ್ನು ಉತ್ತೇಜಿಸುವುದರ ಜೊತೆಗೆ, ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ್ದ ಅಬೆ ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಯುಎಸ್ ಅನ್ನು ಒಟ್ಟುಗೂಡಿಸುವ ಚತುರ್ಭುಜ ಭದ್ರತಾ ಸಂವಾದ ಕ್ವಾಡ್ ರಚನೆಯಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು.

ಜಪಾನ್ ಸ್ನೇಹಪರ ರಾಷ್ಟ್ರ ಮತ್ತು ಅತ್ಯಗತ್ಯ ಪಾಲುದಾರರಾಗಿರುವ ಕಾರಣ ಪ್ರಧಾನಿ ಮೋದಿಯವರು ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹೋಗಿ ರಾಜ್ಯದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿರುವುದು ಉತ್ತಮ ಕಾರ್ಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಮೋದಿ ಅವರು ಜಪಾನ್‌ನ ಮಾಜಿ ಪ್ರಧಾನಿಯೊಂದಿಗೆ “ವೈಯಕ್ತಿಕ ಸಂಪರ್ಕ” ಹೊಂದಿದ್ದರು ಎಂದಿದ್ದಾರೆ ಬಾಗ್ಚಿ.

ಜುಲೈನಲ್ಲಿ ಅಬೆಯ ಹತ್ಯೆಯ ನಂತರ, ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್‌ಡಿಪಿ) ಮತ್ತು ಯುನಿಫಿಕೇಶನ್ ಚರ್ಚ್‌ನ ರಾಜಕಾರಣಿಗಳ ನಡುವಿನ ಸಂಪರ್ಕಗಳ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ.

ವಿಷಾದ ವ್ಯಕ್ತಪಡಿಸುವ ಮೂಲಕ ಮತ್ತು 1950 ರ ದಶಕದಲ್ಲಿ ದಕ್ಷಿಣ ಕೊರಿಯಾದಲ್ಲಿ ಸ್ಥಾಪಿಸಲಾದ ಚರ್ಚ್‌ ಜತೆಗೆ ಎಲ್​​ಡಿಪಿ ಸಂಬಂಧಗಳನ್ನು ಕಡಿತಗೊಳಿಸುವ ಭರವಸೆ ನೀಡುವ  ಮೂಲಕ ಕಿಶಿದಾ ಹಾನಿಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದಾಗ್ಯೂ, ಪಕ್ಷ ಮತ್ತು ಅವರ ಆಡಳಿತದ ಪರಿಣಾಮಗಳು ತೀವ್ರವಾಗಿವೆ.

ಅಬೆ ಅವರ ಹಂತಕ ತನ್ನ ಕುಟುಂಬವನ್ನು ಚರ್ಚ್ ನೋಯಿಸುವಂತೆ ಮಾಡಿದೆ ಎಂದಿದ್ದಾನೆ . ಹತ್ಯೆಯ ಮೊದಲು, ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಈ ಗುಂಪಿಗೆ ಅಬೆ ಸಹಾಯ ಮಾಡಿದ್ದಾರೆ ಎಂದು ಆತ ಆರೋಪ ಮಾಡಿದ್ದ. ಅಬೆ ಅವರನ್ನು ಗೌರವಿಸಲು, ಭಾರತವು ರಾಷ್ಟ್ರೀಯ ಶೋಕಾಚರಣೆಯ ದಿನವನ್ನು ಘೋಷಿಸಿತು. ಜಪಾನಿನ ನಾಯಕನ ಮರಣದ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ, ಮೋದಿ ಅವರು ಅಬೆ ಅವರನ್ನು “ಉನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಮತ್ತು ಗಮನಾರ್ಹ ಆಡಳಿತಗಾರ” ಎಂದು ಬಣ್ಣಿಸಿದರು.

Published On - 12:37 pm, Mon, 26 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ