AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಶ್ರೀಲಂಕಾ ಅಧ್ಯಕ್ಷರದ್ದು ಖಾಸಗಿ ಭೇಟಿ, ನಾವು ಆಶ್ರಯ ನೀಡಿಲ್ಲ: ಸಿಂಗಾಪುರ

ಖಾಸಗಿ ಭೇಟಿಯಲ್ಲಿ ಶ್ರೀಲಂಕಾ ಅಧ್ಯಕ್ಷರು, ಆಶ್ರಯ ನೀಡಿಲ್ಲ ಎಂದು ಸಿಂಗಾಪುರ ಹೇಳಿದೆ.

BIG NEWS: ಶ್ರೀಲಂಕಾ ಅಧ್ಯಕ್ಷರದ್ದು ಖಾಸಗಿ ಭೇಟಿ, ನಾವು ಆಶ್ರಯ ನೀಡಿಲ್ಲ: ಸಿಂಗಾಪುರ
Sri Lankan President
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 6:48 PM

Share

ಶ್ರೀಲಂಕಾದ (Sri Lanka) ಅಧ್ಯಕ್ಷ  ಗೊಟಬಯ ರಾಜಪಕ್ಸ(Gotabaya Rajapaksa)  ಅವರನ್ನು ಖಾಸಗಿ ಭೇಟಿಗಾಗಿ ನಮ್ಮ ದೇಶಕ್ಕೆ ಅನುಮತಿಸಲಾಗಿದೆ ಎಂದು ಸಿಂಗಾಪುರ (Singapore) ಸರ್ಕಾರ ಗುರುವಾರ ಹೇಳಿದೆ. ಅವರು ಆಶ್ರಯಕ್ಕಾಗಿ ನಮ್ಮಲ್ಲಿ ಕೇಳಿಲ್ಲ, ನಾವು ಆಶ್ರಯ ನೀಡುವುದಾಗಿ ಅನುಮತಿಸಿಲ್ಲ. ಸಿಂಗಾಪುರ  ಸಾಮಾನ್ಯವಾಗಿ ಆಶ್ರಯದ ಮನವಿ ಸ್ವೀಕರಿಸುವುದಿಲ್ಲ ಎಂದು ಸಿಂಗಾಪುರದ ವಿದೇಶಾಂಗ ಸಚಿವಾಲಯ ಹೇಳಿದೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಹಿನ್ನಲೆಯಲ್ಲಿ ಜನಾಕ್ರೋಶ ಸಿಡಿದೆದ್ದಾಗ ಗೊಟಬಯ ಶ್ರೀಲಂಕಾದಿಂದ ಪಲಾಯನ ಮಾಡಿ ಮಾಲ್ಡೀವ್ಸ್ ನಲ್ಲಿ ನೆಲೆಸಿದ್ದರು. ರಾಜಪಕ್ಸ ಅವರು ಮಾಲ್ಡೀವ್ಸ್ ನಿಂದ ಸೌದಿ ಏರ್ ಲೈನ್ ವಿಮಾನ ಎಸ್ ವಿ788ನಲ್ಲಿ ಸಿಂಗಾಪುರಕ್ಕೆ ಹೋಗಿದ್ದಾರೆ. 73ರ ಹರೆಯದ ಗೊಟಬಯ ದೇಶದಿಂದ ಪಲಾಯನ ಮಾಡಿದ ಮೇಲೆ ಬುಧವಾರದಂದು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಸದ್ಯ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಮುಂದಿನ ಅಧ್ಯಕ್ಷರ ಆಯ್ಕೆ ವರೆಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗೊಟಬಯ ಅವರು ಬುಧವಾರ ಸೌದಿ ಏರ್ ಲೈನ್ಸ್ ವಿಮಾನ ಹತ್ತಿದ್ದು, ಅವರು ಸಿಂಗಾಪುರಕ್ಕೆ ಹೋಗಲಿದ್ದಾರೆ. ಅಲ್ಲಿಂದ ಅವರು ಜೆದ್ದಾ ನಂತರ ಸೌದಿ ಅರೇಬಿಯಾಕ್ಕೆ ಹೋಗಲಿದ್ದಾರೆ ಎಂದು ಹೆಸರು ಹೇಳಲು ಬಯಸದ ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳು ಹೇಳಿದ್ದರು.

ರಾಜಪಕ್ಸ ಅವರು ಗುರುವಾರ ಮಧ್ಯಾಹ್ನ   ಸೌದಿಯಾ ಏರ್ ಲೈನ್ಸ್  ವಿಮಾನದಲ್ಲಿ ಬಂದಿಳಿದಿದ್ದಾರೆ. ಲಂಕಾ ಅಧ್ಯಕ್ಷರು ಮಂಗಳವಾರ ಸಂಜೆ ಕೊಲಂಬೊದಿಂದ ಮಾಲ್ಡೀನ್ಸ್  ಗೆ ಪ್ರಯಾಣ ಬೆಳೆಸಿದ್ದರು.

ರಾಜಪಕ್ಸ ಅವರು ಗುರುವಾರ ಮಧ್ಯಾಹ್ನ ಸೌದಿಯಾ ಏರ್ ಲೈನ್ಸ್ ವಿಮಾನದಲ್ಲಿ ಬಂದಿಳಿದಿದ್ದಾರೆ. ಲಂಕಾ ಅಧ್ಯಕ್ಷರು ಮಂಗಳವಾರ ಸಂಜೆ ಕೊಲಂಬೊದಿಂದ ಮಾಲ್ಡೀನ್ಸ್ ಗೆ ಪ್ರಯಾಣ ಬೆಳೆಸಿದ್ದರು. ನಿನ್ನೆ ರಾತ್ರಿ ಅವರು ಮಾಲ್ಡೀವ್ಸ್ ಸರ್ಕಾರಕ್ಕೆ ಮನವಿ ಮಾಡಿ ಸಿಂಗಾಪುರಕ್ಕೆ ಹೋಗಲು ಖಾಸಗಿ ವಿಮಾನ ವ್ಯವಸ್ಥೆ ಮಾಡುವಂತೆ ಕೇಳಿದ್ದರು ಎಂದು ಮೂಲಗಳು ಹೇಳಿವೆ. ಕೊಲಂಬೊದಿಂದ ಹೊರ ಹೋಗುವಾಗ ಅವರು ಬುಧವಾರ ರಾತ್ರಿಯೊಳಗೆ ರಾಜೀನಾಮೆ ಸಲ್ಲಿಸುತ್ತೇನ ಎಂದು ಹೇಳಿದ್ದರು. ಆದರೆ ಅವರು ಇಲ್ಲಿಯವರೆಗೆ ರಾಜೀನಾಮೆ ಸಲ್ಲಿಸಿಲ್ಲ.

ಇದನ್ನೂ ಓದಿ
Image
ನನ್ನ ವಿರುದ್ಧ ಮಾಡಿರುವ ಲೈಂಗಿಕ ಅತ್ಯಾಚಾರದ ಆರೋಪಗಳು ಸುಳ್ಳು, ನಾನು ಅಮಾಯಕ: ಕೆವಿನ್ ಸ್ಪೇಸಿ, ಖ್ಯಾತ ಹಾಲಿವುಡ್ ನಟ
Image
Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ
Image
Shocking Video: ಫೋಟೋ ಆಸೆಯಿಂದ ಸಮುದ್ರದಲ್ಲಿ ಕೊಚ್ಚಿ ಹೋದ ಕುಟುಂಬ; ಶಾಕಿಂಗ್ ವಿಡಿಯೋ ವೈರಲ್

ರಾಜೀನಾಮೆ ನೀಡಿ ಇಲ್ಲವೇ ನಾವು ಬೇರೆ ಆಯ್ಕೆ ಕಂಡುಕೊಳ್ಳುತ್ತೇವೆ: ಸ್ಪೀಕರ್

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಲಂಕಾ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಆದಷ್ಟು ಬೇಗ ರಾಜೀನಾಮೆ ಸಲ್ಲಿಸಿ ಇಲ್ಲವೇ ನಾವು ನಿಮ್ಮನ್ನು ಹುದ್ದೆಯಿಂದ ಕಿತ್ತು ಹಾಕುವ ಆಯ್ಕೆ ಪರಿಗಣಿಸುತ್ತೇವೆ ಎಂದು ಹೇಳಿರುವುದಾಗಿ ನ್ಯೂಸ್ ಫಸ್ಟ್ ಲಂಕಾ ವರದಿ ಮಾಡಿದೆ.

Published On - 6:25 pm, Thu, 14 July 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು