AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toronto: ಭಾರತೀಯ ದೂತವಾಸ ಕಚೇರಿ ಎದುರು ಖಲಿಸ್ತಾನಿಗಳ ಪ್ರತಿಭಟನೆ: ತ್ರಿವರ್ಣ ಧ್ವಜ ಬೀಸುವ ಮೂಲಕ ತಕ್ಕ ಉತ್ತರ ನೀಡಿದ ಭಾರತೀಯರು

ಕೆನಡಾದ ಒಂಟಾರಿಯೋ ರಾಜಧಾನಿ ಟೊರೊಂಟೊ(Toronto)ದಲ್ಲಿ ಭಾರತೀಯ ದೂತವಾಸ ಕಚೇರಿ ಎದುರು ಖಲಿಸ್ತಾನಿ(Khalistani) ಬೆಂಬಲಿಗರು ಪ್ರತಿಭಟನೆ ನಡೆಸಿದರು.

Toronto: ಭಾರತೀಯ ದೂತವಾಸ ಕಚೇರಿ ಎದುರು ಖಲಿಸ್ತಾನಿಗಳ ಪ್ರತಿಭಟನೆ: ತ್ರಿವರ್ಣ ಧ್ವಜ ಬೀಸುವ ಮೂಲಕ ತಕ್ಕ ಉತ್ತರ ನೀಡಿದ ಭಾರತೀಯರು
ಪ್ರತಿಭಟನೆImage Credit source: Free Press Journal
ನಯನಾ ರಾಜೀವ್
|

Updated on: Jul 09, 2023 | 11:21 AM

Share

ಕೆನಡಾದ ಒಂಟಾರಿಯೋ ರಾಜಧಾನಿ ಟೊರೊಂಟೊ(Toronto)ದಲ್ಲಿ ಭಾರತೀಯ ದೂತವಾಸ ಕಚೇರಿ ಎದುರು ಖಲಿಸ್ತಾನಿ(Khalistani) ಬೆಂಬಲಿಗರು ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ಭಾರತೀಯರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಭಯೋತ್ಪಾದಕ ಹರ್ದೀಪ್​ ಸಿಂಗ್ ನಿಜ್ಜರ್ ಹತ್ಯೆಯ ನಂತರ ಜುಲೈ 8ರಂದು ಖಲಿಸ್ತಾನಿ ಬೆಂಬಲಿಗರು ವಿದೇಶದಲ್ಲಿ ಕಿಲ್ ಇಂಡಿಯಾ ರ್ಯಾಲಿ ಆಯೋಜಿಸಿದ್ದರು.

ಎಎನ್​ಐ ಸುದ್ದಿ ಸಂಸ್ಥೆಯ ಮಾಹಿತಿ ಪ್ರಕಾರ, ಖಲಿಸ್ತಾನಿ ಬೆಂಬಲಿಗರು ಟೊರೊಂಟೊದಲ್ಲಿರುವ ಭಾರತೀಯ ದೂತವಾಸದ ಹೊರಗೆ ಹಳದಿ ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು. ರಸ್ತೆಯ ಇನ್ನೊಂದು ಬದಿಯಲ್ಲಿ ಭಾರತೀಯ ಸಮುದಾಯವು ತ್ರಿವರ್ಣ ಧ್ವಜವನ್ನು ಬೀಸುತ್ತಿದ್ದರು.

ಮತ್ತೊಂದೆಡೆ, ಖಲಿಸ್ತಾನಿ ಬೆಂಬಲಿಗರು ಪ್ರತಿಭಟಿಸುವ ನಿರೀಕ್ಷೆ ಇರುವ ಕಾರಣ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಎದುರು ಭದ್ರತೆ ಹೆಚ್ಚಿಸಲಾಗಿದೆ.

ಇದಕ್ಕೂ ಮೊದಲು ಜುಲೈ 2 ರಂದು ಖಲಿಸ್ತಾನಿ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಕ್ಯಾಲಿಫೋರ್ನಿಯಾದಲ್ಲಿರುವ ಭಾರತೀಯ ದೂತವಾಸ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು.

ಮತ್ತಷ್ಟು ಓದಿ: Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

ಯುಎಸ್ ಸ್ಟೇಟ್ ಡಿಪಾರ್ಟ್​ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಟ್ವೀಟ್​ನಲ್ಲಿ ಖಲಿಸ್ತಾನಿ ಬೆಂಬಲಿಗರ ನಡೆಯನ್ನು ಬಲವಾಗಿ ಖಂಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರು ಭಾರತ ವಿರೋಧಿ ಪೋಸ್ಟರ್​ಗಳನ್ನು ಅಂಟಿಸಿ ಭಾರತೀಯ ರಾಜತಾಂತ್ರಿಕರಿಗೆ ಬೆದರಿಕೆ ಹಾಕಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ