AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು

ಬಾಂಗ್ಲಾದೇಶದಲ್ಲಿ ಅವಾಮಿ ಲೀಗ್‌ನ ಹಿಂದೂ ನಾಯಕ ಪ್ರೊಲೋಯ್ ಚಾಕಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಕುಟುಂಬ ವೈದ್ಯಕೀಯ ನಿರ್ಲಕ್ಷ್ಯ ಆರೋಪಿಸಿದ್ದು, ಆರೋಗ್ಯ ಸಮಸ್ಯೆಗಳೇ ಕಾರಣವೆಂದು ಜೈಲು ಅಧಿಕಾರಿಗಳು ಸಮರ್ಥಿಸಿದ್ದಾರೆ. ಈ ಘಟನೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳ ಸರಣಿಯ ಸಂದರ್ಭದಲ್ಲಿ ನಡೆದಿದ್ದು, ಕಸ್ಟಡಿ ಸಾವು, ವೈದ್ಯಕೀಯ ಆರೈಕೆ ಕೊರತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು
ಪ್ರಳಯ್Image Credit source: NDTV
ನಯನಾ ರಾಜೀವ್
|

Updated on: Jan 13, 2026 | 11:26 AM

Share

ಢಾಕಾ, ಜನವರಿ 13: ಬಾಂಗ್ಲಾದೇಶ(Bangladesh)ದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ ಜಿಲ್ಲಾ ಘಟಕದ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು, ಜೈಲು ಕಸ್ಟಡಿಯಲ್ಲಿದ್ದಾಗ ರಾಜ್‌ಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ವರದಿ ಮಾಡಿದೆ.

ಪಬ್ನಾ ಜೈಲಿನ ಸೂಪರಿಂಟೆಂಡೆಂಟ್ ಎಂಡಿ ಒಮೋರ್ ಫಾರೂಕ್ ಮಾತನಾಡಿ, ಚಾಕಿ ಮಧುಮೇಹ ಮತ್ತು ಹೃದ್ರೋಗ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದಾಗಿ, ಜೈಲು ವೈದ್ಯರು ಮೊದಲು ಅವರನ್ನು ಪಬ್ನಾ ಸದರ್ ಆಸ್ಪತ್ರೆಗೆ ಕಳುಹಿಸಲಾಗಿತ್ತು, ಮತ್ತು ಅಲ್ಲಿಂದ ಶುಕ್ರವಾರ ರಾತ್ರಿ ಅವರನ್ನು ರಾಜಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಬ್ನಾ ಜಿಲ್ಲಾ ಜೈಲಿನ ಸೂಪರಿಂಟೆಂಡೆಂಟ್ ಓಮೋರ್ ಫಾರೂಕ್ ಹೇಳಿದರು.

ಅವರು ಭಾನುವಾರ ರಾತ್ರಿ 9 ಗಂಟೆಯ ನಂತರ ರಾಜಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ಫಾರೂಕ್ ಹೇಳಿದರು. ಪ್ರಸಿದ್ಧ ಗಾಯಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಪಬ್ನಾದ ಶ್ರೀ ಶ್ರೀ ರಾಮ ಕೃಷ್ಣ ಸೇವಾಶ್ರಮದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ಆ ಸಮಯದಲ್ಲಿ ಯಾವುದೇ ಪ್ರಕರಣದಲ್ಲಿ ಹೆಸರಿಲ್ಲದಿದ್ದರೂ ಅವರ ತಂದೆಯನ್ನು ಬಂಧಿಸಲಾಗಿದೆ ಎಂದು ಅವರ ಮಗ ಸೋನಿ ಚಾಕಿ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಆಗಸ್ಟ್ 4 ರ ಹಿಂಸಾಚಾರಕ್ಕೆ ಸಂಬಂಧಿಸಿದ ಸ್ಫೋಟಕ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ನಂತರ ತೋರಿಸಲಾಗಿದೆ ನನ್ನ ತಂದೆ ಬಹಳ ದಿನಗಳಿಂದ ಮಧುಮೇಹ ಮತ್ತು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಜೈಲಿನಲ್ಲಿ ಅವರ ಸ್ಥಿತಿ ಹದಗೆಟ್ಟಿತು, ಆದರೆ ಅಧಿಕಾರಿಗಳು ನಮಗೆ ಅಧಿಕೃತವಾಗಿ ಮಾಹಿತಿ ನೀಡಲಿಲ್ಲ ಎಂದು ಸೋನಿ ಆರೋಪಿಸಿದ್ದಾರೆ.

ಇತರರು ತಿಳಿಸಿದ ನಂತರ ನಾವು ಆಸ್ಪತ್ರೆಗೆ ಹೋದೆವು, ಆದರೆ ಅವರಿಗೆ ಸರಿಯಾದ ಚಿಕಿತ್ಸೆ ಸಿಗಲಿಲ್ಲ, ಅದು ಅವರ ಸಾವಿಗೆ ಕಾರಣವಾಯಿತು. ಆರೋಪಗಳನ್ನು ತಿರಸ್ಕರಿಸಿದ ಫಾರೂಕ್, ಚೌಕಿಯ ವೈದ್ಯಕೀಯ ದಾಖಲೆಗಳ ಆಧಾರದ ಮೇಲೆ ಅವರಿಗೆ ಔಷಧಿಗಳನ್ನು ನೀಡಲಾಗಿದೆ ಎಂದು ಒತ್ತಿ ಹೇಳಿದರು. ಅವರ ಸ್ಥಿತಿ ಗಂಭೀರವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದರು. ಕಳೆದ ಕೆಲವು ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಹಿಂಸಾಚಾರದ ಸರಣಿ ನಡೆದಿದೆ.

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್