AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ. ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ […]

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 02, 2020 | 7:20 PM

Share

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ.

ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ ಲಡಾಕ್​ನತ್ತ ಭಾರತ ಸಹ ಯುದ್ಧ ಸಾಮಾಗ್ರಿಗಳ ಜಮಾವಣೆಯಲ್ಲಿ ತೊಡಗಿದೆ ಎಂದು ಸೇನಾ ಮೂಲಗಳನ್ನು ಉಲ್ಲೇಖಿಸಿ, ವರದಿಗಳು ತಿಳಿಸಿವೆ.

ಗಲ್ವಾನ್ ಕಣಿವೆಯಲ್ಲಿ ಡರ್ಬಾಕ್ ಗ್ರಾಮಸ್ಥರು ದಿನಾ ರಾತ್ರಿ ವೇಳೆ ಭಾರತೀಯ ಸೇನಾ ತುಕಡಿಗಳ ಸಂಚಾರವನ್ನು ಕಣ್ಣಾರೆ ನೋಡುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಆದ್ರೆ ಚಳಿಗಾಲದಲ್ಲಿ ಇಂತಹ ಸಿದ್ಧತೆಗಳು ಸಾಮಾನ್ಯ. ಈ ಬಾರಿ ಬೇಸಿಗೆ ಕಾಲದಲ್ಲಿ ಕೊರೊನಾ ಸೋಂಕಿನ ಹಾವಳಿ ಇದ್ದಿದ್ದರಿಂದ ಲಡಾಕ್ ಭಾಗದಲ್ಲಿ ಸೇನಾ ಚಟುವಟಿಕೆಗಳು ಕುಗ್ಗಿದ್ದವು. ಅದನ್ನು ಸರಿದೂಗಿಸಲು ಈಗ ವೇಗ ಪಡೆದುಕೊಂಡಿದೆ. ಕೊರೊನಾ ಹಾವಳಿ ಇದ್ದಾಗ ಚೀನಾ ಸಮರ ಸಿದ್ಧತೆಯಲ್ಲಿ ತೊಡಗಿರುವುದು ಬೆನ್ನಿಗೆ ಚೂರಿ ಹಾಕಿದಂತಿದೆ ಎಂದೂ ಉನ್ನತಾಧಿಕಾರಿಯೊಬ್ಬರು ವಿವರಿಸಿದ್ದಾರೆ.

ಈ ಮಧ್ಯೆ, ಗಲ್ವಾನ್ ಕಣಿವೆಯಲ್ಲಿ ಭಾರತ ಸೇನಾ ಚಟುವಟಿಕೆಗಳನ್ನು ಕೈಗೊಂಡಿರುವುದರಿಂದ ಟ್ಯಾಂಕ್​ಗಳು, ಹೆಲಿಕಾಪ್ಟರ್​ಗಳು, ಅತ್ಯಾಧುನಿಕ ಡ್ರೋನ್​ಗಳನ್ನು ಚೀನಾ ಜಮಾವಣೆ ಮಾಡುತ್ತಿದೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾದ ಗ್ಲೋಬಲ್ ಟೈಮ್ಸ್ ಹೇಳಿಕೊಂಡಿದೆ.

Published On - 3:08 pm, Tue, 2 June 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ