AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ. ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ […]

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 7:20 PM

Share

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ.

ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ ಲಡಾಕ್​ನತ್ತ ಭಾರತ ಸಹ ಯುದ್ಧ ಸಾಮಾಗ್ರಿಗಳ ಜಮಾವಣೆಯಲ್ಲಿ ತೊಡಗಿದೆ ಎಂದು ಸೇನಾ ಮೂಲಗಳನ್ನು ಉಲ್ಲೇಖಿಸಿ, ವರದಿಗಳು ತಿಳಿಸಿವೆ.

ಗಲ್ವಾನ್ ಕಣಿವೆಯಲ್ಲಿ ಡರ್ಬಾಕ್ ಗ್ರಾಮಸ್ಥರು ದಿನಾ ರಾತ್ರಿ ವೇಳೆ ಭಾರತೀಯ ಸೇನಾ ತುಕಡಿಗಳ ಸಂಚಾರವನ್ನು ಕಣ್ಣಾರೆ ನೋಡುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಆದ್ರೆ ಚಳಿಗಾಲದಲ್ಲಿ ಇಂತಹ ಸಿದ್ಧತೆಗಳು ಸಾಮಾನ್ಯ. ಈ ಬಾರಿ ಬೇಸಿಗೆ ಕಾಲದಲ್ಲಿ ಕೊರೊನಾ ಸೋಂಕಿನ ಹಾವಳಿ ಇದ್ದಿದ್ದರಿಂದ ಲಡಾಕ್ ಭಾಗದಲ್ಲಿ ಸೇನಾ ಚಟುವಟಿಕೆಗಳು ಕುಗ್ಗಿದ್ದವು. ಅದನ್ನು ಸರಿದೂಗಿಸಲು ಈಗ ವೇಗ ಪಡೆದುಕೊಂಡಿದೆ. ಕೊರೊನಾ ಹಾವಳಿ ಇದ್ದಾಗ ಚೀನಾ ಸಮರ ಸಿದ್ಧತೆಯಲ್ಲಿ ತೊಡಗಿರುವುದು ಬೆನ್ನಿಗೆ ಚೂರಿ ಹಾಕಿದಂತಿದೆ ಎಂದೂ ಉನ್ನತಾಧಿಕಾರಿಯೊಬ್ಬರು ವಿವರಿಸಿದ್ದಾರೆ.

ಈ ಮಧ್ಯೆ, ಗಲ್ವಾನ್ ಕಣಿವೆಯಲ್ಲಿ ಭಾರತ ಸೇನಾ ಚಟುವಟಿಕೆಗಳನ್ನು ಕೈಗೊಂಡಿರುವುದರಿಂದ ಟ್ಯಾಂಕ್​ಗಳು, ಹೆಲಿಕಾಪ್ಟರ್​ಗಳು, ಅತ್ಯಾಧುನಿಕ ಡ್ರೋನ್​ಗಳನ್ನು ಚೀನಾ ಜಮಾವಣೆ ಮಾಡುತ್ತಿದೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾದ ಗ್ಲೋಬಲ್ ಟೈಮ್ಸ್ ಹೇಳಿಕೊಂಡಿದೆ.

Published On - 3:08 pm, Tue, 2 June 20

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!