AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ. ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ […]

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 02, 2020 | 7:20 PM

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ.

ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ ಲಡಾಕ್​ನತ್ತ ಭಾರತ ಸಹ ಯುದ್ಧ ಸಾಮಾಗ್ರಿಗಳ ಜಮಾವಣೆಯಲ್ಲಿ ತೊಡಗಿದೆ ಎಂದು ಸೇನಾ ಮೂಲಗಳನ್ನು ಉಲ್ಲೇಖಿಸಿ, ವರದಿಗಳು ತಿಳಿಸಿವೆ.

ಗಲ್ವಾನ್ ಕಣಿವೆಯಲ್ಲಿ ಡರ್ಬಾಕ್ ಗ್ರಾಮಸ್ಥರು ದಿನಾ ರಾತ್ರಿ ವೇಳೆ ಭಾರತೀಯ ಸೇನಾ ತುಕಡಿಗಳ ಸಂಚಾರವನ್ನು ಕಣ್ಣಾರೆ ನೋಡುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಆದ್ರೆ ಚಳಿಗಾಲದಲ್ಲಿ ಇಂತಹ ಸಿದ್ಧತೆಗಳು ಸಾಮಾನ್ಯ. ಈ ಬಾರಿ ಬೇಸಿಗೆ ಕಾಲದಲ್ಲಿ ಕೊರೊನಾ ಸೋಂಕಿನ ಹಾವಳಿ ಇದ್ದಿದ್ದರಿಂದ ಲಡಾಕ್ ಭಾಗದಲ್ಲಿ ಸೇನಾ ಚಟುವಟಿಕೆಗಳು ಕುಗ್ಗಿದ್ದವು. ಅದನ್ನು ಸರಿದೂಗಿಸಲು ಈಗ ವೇಗ ಪಡೆದುಕೊಂಡಿದೆ. ಕೊರೊನಾ ಹಾವಳಿ ಇದ್ದಾಗ ಚೀನಾ ಸಮರ ಸಿದ್ಧತೆಯಲ್ಲಿ ತೊಡಗಿರುವುದು ಬೆನ್ನಿಗೆ ಚೂರಿ ಹಾಕಿದಂತಿದೆ ಎಂದೂ ಉನ್ನತಾಧಿಕಾರಿಯೊಬ್ಬರು ವಿವರಿಸಿದ್ದಾರೆ.

ಈ ಮಧ್ಯೆ, ಗಲ್ವಾನ್ ಕಣಿವೆಯಲ್ಲಿ ಭಾರತ ಸೇನಾ ಚಟುವಟಿಕೆಗಳನ್ನು ಕೈಗೊಂಡಿರುವುದರಿಂದ ಟ್ಯಾಂಕ್​ಗಳು, ಹೆಲಿಕಾಪ್ಟರ್​ಗಳು, ಅತ್ಯಾಧುನಿಕ ಡ್ರೋನ್​ಗಳನ್ನು ಚೀನಾ ಜಮಾವಣೆ ಮಾಡುತ್ತಿದೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾದ ಗ್ಲೋಬಲ್ ಟೈಮ್ಸ್ ಹೇಳಿಕೊಂಡಿದೆ.

Published On - 3:08 pm, Tue, 2 June 20

ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!