ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ. ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ […]

ಗಲ್ವಾನ್ ಕಣಿವೆಯಲ್ಲಿ ಚೀನಾ ಕಾಲ್ಕೆರೆತ: ಪ್ರತ್ಯುತ್ತರಕ್ಕೆ ಭಾರತ ಯುದ್ಧೋಪಾದಿಯಲ್ಲಿ ಸಜ್ಜು!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 02, 2020 | 7:20 PM

ಚೀನಾ ಕಾಲ್ಕೆರೆತ ಆಗಾಗ ನಡೆಯುತ್ತಲೇ ಇರುತ್ತದೆ. ಆದ್ರೆ ಪ್ರತ್ಯುತ್ತರ ನೀಡಲು ಹಿಂದೆಮುಂದೆ ನೋಡದ ಭಾರತ ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿರುತ್ತದೆ. ಎರಡು ವರ್ಷದ ಹಿಂದೆ ದೊಕ್ಲಾಮ್ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಿಸಿದ್ದ ಚೀನಾ ಕೊನೆಗೆ ಬಂದ ದಾರಿಗೆ ಸುಂಕವಿಲ್ಲದಂತೆ ಮರಳಿತ್ತು. ಈಗ, ಮೊದಲು ಕೊರೊನಾ ಛೂಬಿಟ್ಟ ಚೀನಾ ಅದರ ಮಧ್ಯೆಯೇ ಭಾರತದ ಗಡಿಯಲ್ಲಿ ತಂಟೆ ತೆಗೆದಿದೆ.

ಗಡಿಯಲ್ಲಿ ನಿಶ್ಚಿತವಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ 28 ದಿನಗಳಿಂದ ಕಾಲು ಕೆರೆದುಕೊಂಡು ಯುದ್ಧೋನ್ಮಾದದಲ್ಲಿರುವ ಚೀನಾಕ್ಕೆ ಪ್ರತ್ಯುತ್ತರ ನೀಡಲು ಗಲ್ವಾನ್ ಕಣಿವೆಯಲ್ಲಿ ಲಡಾಕ್​ನತ್ತ ಭಾರತ ಸಹ ಯುದ್ಧ ಸಾಮಾಗ್ರಿಗಳ ಜಮಾವಣೆಯಲ್ಲಿ ತೊಡಗಿದೆ ಎಂದು ಸೇನಾ ಮೂಲಗಳನ್ನು ಉಲ್ಲೇಖಿಸಿ, ವರದಿಗಳು ತಿಳಿಸಿವೆ.

ಗಲ್ವಾನ್ ಕಣಿವೆಯಲ್ಲಿ ಡರ್ಬಾಕ್ ಗ್ರಾಮಸ್ಥರು ದಿನಾ ರಾತ್ರಿ ವೇಳೆ ಭಾರತೀಯ ಸೇನಾ ತುಕಡಿಗಳ ಸಂಚಾರವನ್ನು ಕಣ್ಣಾರೆ ನೋಡುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಆದ್ರೆ ಚಳಿಗಾಲದಲ್ಲಿ ಇಂತಹ ಸಿದ್ಧತೆಗಳು ಸಾಮಾನ್ಯ. ಈ ಬಾರಿ ಬೇಸಿಗೆ ಕಾಲದಲ್ಲಿ ಕೊರೊನಾ ಸೋಂಕಿನ ಹಾವಳಿ ಇದ್ದಿದ್ದರಿಂದ ಲಡಾಕ್ ಭಾಗದಲ್ಲಿ ಸೇನಾ ಚಟುವಟಿಕೆಗಳು ಕುಗ್ಗಿದ್ದವು. ಅದನ್ನು ಸರಿದೂಗಿಸಲು ಈಗ ವೇಗ ಪಡೆದುಕೊಂಡಿದೆ. ಕೊರೊನಾ ಹಾವಳಿ ಇದ್ದಾಗ ಚೀನಾ ಸಮರ ಸಿದ್ಧತೆಯಲ್ಲಿ ತೊಡಗಿರುವುದು ಬೆನ್ನಿಗೆ ಚೂರಿ ಹಾಕಿದಂತಿದೆ ಎಂದೂ ಉನ್ನತಾಧಿಕಾರಿಯೊಬ್ಬರು ವಿವರಿಸಿದ್ದಾರೆ.

ಈ ಮಧ್ಯೆ, ಗಲ್ವಾನ್ ಕಣಿವೆಯಲ್ಲಿ ಭಾರತ ಸೇನಾ ಚಟುವಟಿಕೆಗಳನ್ನು ಕೈಗೊಂಡಿರುವುದರಿಂದ ಟ್ಯಾಂಕ್​ಗಳು, ಹೆಲಿಕಾಪ್ಟರ್​ಗಳು, ಅತ್ಯಾಧುನಿಕ ಡ್ರೋನ್​ಗಳನ್ನು ಚೀನಾ ಜಮಾವಣೆ ಮಾಡುತ್ತಿದೆ ಎಂದು ಚೀನಾ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾದ ಗ್ಲೋಬಲ್ ಟೈಮ್ಸ್ ಹೇಳಿಕೊಂಡಿದೆ.

Published On - 3:08 pm, Tue, 2 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us