AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ ಇಸ್ಲಾಂ ಧರ್ಮಕ್ಕೆ ವಿರುದ್ಧ ಎಂದು ಮಾಲ್ಡೀವ್ಸ್​​ನಲ್ಲಿ ಭಾರತೀಯ ಹೈಕಮಿಷನ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದ ಮೇಲೆ ದಾಳಿ

ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ 150 ಕ್ಕೂ ಹೆಚ್ಚು ಜನರು ಭಾಗವಹಿಸುತ್ತಿದ್ದ ಕ್ರೀಡಾಂಗಣಕ್ಕೆ ಗುಂಪೊಂದು ನುಗ್ಗಿ ಅಲ್ಲಿರುವವರ ಮೇಲೆ ದಾಳಿ ಮಾಡಿದರು

ಯೋಗ ಇಸ್ಲಾಂ ಧರ್ಮಕ್ಕೆ ವಿರುದ್ಧ ಎಂದು ಮಾಲ್ಡೀವ್ಸ್​​ನಲ್ಲಿ ಭಾರತೀಯ ಹೈಕಮಿಷನ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದ ಮೇಲೆ ದಾಳಿ
ಮಾಲ್ಡೀವ್ಸ್ ನಲ್ಲಿ ಯೋಗ
TV9 Web
| Edited By: |

Updated on:Jun 21, 2022 | 8:45 PM

Share

ಮಾಲೆ:  ಮಂಗಳವಾರ ಬೆಳಗ್ಗೆ ಮಾಲ್ಡೀವ್ಸ್ (Maldives) ರಾಜಧಾನಿ ಮಾಲೆಯಲ್ಲಿ (Male) ಭಾರತೀಯ ಹೈಕಮಿಷನ್ (Indian High Commission) ಆಯೋಜಿಸಿದ್ದ ಯೋಗ (Yoga) ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಜನರ ಗುಂಪನ್ನು ನಿಯಂತ್ರಿಸಲು ಮಾಲ್ಡೀವ್ಸ್‌ನ ಪೊಲೀಸರು ಅಶ್ರುವಾಯು ಮತ್ತು ಪೆಪ್ಪರ್ ಸ್ಪ್ರೇ ಬಳಸಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ 150 ಕ್ಕೂ ಹೆಚ್ಚು ಜನರು ಭಾಗವಹಿಸುತ್ತಿದ್ದ ಕ್ರೀಡಾಂಗಣಕ್ಕೆ ಗುಂಪೊಂದು ನುಗ್ಗಿ ಅಲ್ಲಿರುವವರ ಮೇಲೆ ದಾಳಿ ಮಾಡಿದರು  ಎಂದು ಹೆಸರು ಹೇಳಲು ಇಚ್ಛಿಸದ ಸಂಘಟಕರಲ್ಲಿ ಒಬ್ಬರು ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಇದಕ್ಕೂ ಮುನ್ನ ಪ್ರತಿಭಟನಾಕಾರರು ಯೋಗ ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿದೆ ಎಂಬ ಭಿತ್ತಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಸುಮಾರು ಅರ್ಧ ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಹಿಂದೂ ಮಹಾಸಾಗರದ ದ್ವೀಪಗಳ ಗುಂಪು ಆಗಿರುವ ಮಾಲ್ಡೀವ್ಸ್‌ನಲ್ಲಿ ಇಸ್ಲಾಂ ರಾಜ್ಯ ಧರ್ಮವಾಗಿದೆ.

ಪೊಲೀಸರು ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಪ್ರದೇಶವನ್ನು ರಕ್ಷಿಸಲು ಪೆಪ್ಪರ್ ಸ್ಪ್ರೇ ಮತ್ತು ಅಶ್ರುವಾಯು ಬಳಸಿದರು ಎಂದು ಪೊಲೀಸ್ ಅಧೀಕ್ಷಕ ಫತ್ಮತ್ ನಶ್ವಾ ರಾಯಿಟರ್ಸ್ ಗೆ ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ನಶ್ವಾ ತಿಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸ್ ತನಿಖೆ ಆರಂಭವಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಹೇಳಿದ್ದಾರೆ. “ಇದನ್ನು ಗಂಭೀರ ಕಾಳಜಿಯ ವಿಷಯವಾಗಿ ಪರಿಗಣಿಸಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಶೀಘ್ರವಾಗಿ ಕಾನೂನಿನ ಮುಂದೆ ತರಲಾಗುವುದು” ಎಂದು ಸೋಲಿಹ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:23 pm, Tue, 21 June 22

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!