AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಶ್ರೀಲಂಕಾದ ಕೊಲಂಬೊದಲ್ಲಿರುವ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು ಬೆಂಕಿ ಹಚ್ಚಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ NDTV ವರದಿ ಮಾಡಿದೆ.

Sri Lanka Crisis: ಶ್ರೀಲಂಕಾ ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ರನಿಲ್ ವಿಕ್ರಮಸಿಂಘೆ
TV9 Web
| Edited By: |

Updated on:Jul 09, 2022 | 10:50 PM

Share

ಶ್ರೀಲಂಕಾ: ಶ್ರೀಲಂಕಾದ ಕೊಲಂಬೊದಲ್ಲಿರುವ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಪ್ರತಿಭಟನಾಕಾರರು ಇಂದು (ಜುಲೈ 9) ಬೆಂಕಿ ಹಚ್ಚಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ NDTV ವರದಿ ಮಾಡಿದೆ. ಶ್ರೀಲಂಕಾದ ಪ್ರಧಾನಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಬೆಳವಣಿಗೆಗಳು ನಡೆದಿವೆ ಎನ್ನಲಾಗುತ್ತವೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸಿತ್ತಿರುವ ಹಿನ್ನೆಲೆ ಅಲ್ಲಿನ ಪ್ರಜೆಗಳು ಉಗ್ರ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ  ರಾಜೀನಾಮೆ ನೀಡಲು ತೀರ್ಮಾನಿಸಿದ್ದರು. ಈ ಸಂಬಂಧ ಸಂಸದರ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಕೂಡ ಘೋಷಣೆ ಮಾಡಿದ್ದರು. ಸಂಸದರ ಸಭೆ ನಂತರ ರನಿಲ್ ವಿಕ್ರಮಸಿಂಘೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಅವರು ಹೊಸ ಸರ್ಕಾರ ಬರುವವರೆಗೆ ಹಾಲಿ ಸರ್ಕಾರ ಮುಂದುವರಿಯುತ್ತೆ. ಲಂಕಾ ಜನರ ಸುರಕ್ಷತೆಗೆ ಮೊದಲ ಆದ್ಯತೆಯಾಗಿದೆ. ಪಕ್ಷದ ನಾಯಕರ ಶಿಫಾರಸ್ಸನ್ನು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳು ಸೇರಿ ಸರ್ಕಾರ ರಚಿಸಲು ಅನುವು ಮಾಡಿಕೊಡಲು ನಾನು ರಾಜಿನಾಮೆ ನೀಡುತ್ತೀದ್ದೇನೆ ಎಂದು ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಗೋತಬಯ ರಾಜಪಕ್ಸೆ ಮನೆಯನ್ನು ಸುತ್ತುವರೆದ್ದಿದ್ದರು. ಆಗ  ಅಧ್ಯಕ್ಷ ಗೋತಬಯ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದರು  ಎಂದು ಖಾಸಗಿ ಸುದ್ದಿ ಸಂಸ್ಥೆ AFP ವರದಿ ಮಾಡಿತ್ತು.

ಗೋತಬಯ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಅವರ ನಿವಾಸದೊಳಗೆ ನುಗ್ಗುತ್ತಿರುವುದನ್ನು ಶ್ರೀಲಂಕಾದ ದೂರದರ್ಶನದಲ್ಲಿ ಪ್ರಸಾರಗೊಳ್ಳುತ್ತಿವೆ.  ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಬೇರೆ ಕಡೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.  ಪ್ರತಿಭಟನಾಕಾರರು ಅಧ್ಯಕ್ಷರ ಭವನವನ್ನು ಪ್ರವೇಶಿಸದಂತೆ ಸೈನಿಕರು ಅಶ್ರುವಾಯು ಸಿಡಿಸಿದರು.

ಪ್ರತಿಭಟನೆಯನ್ನು ಹತ್ತಿಕ್ಕಲು  ಶ್ರೀಲಂಕಾದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಮಧ್ಯಾಹ್ನ 3.30ರಿಂದ ನಿಷೇಧಾಜ್ಞೆ ಜಾರಿಯಾಗಿದ್ದು, ಜನರು ಮನೆಯೊಳಗೇ ಇರಲು ಆದೇಶಿಸಲಾಗಿದೆ.

Published On - 10:33 pm, Sat, 9 July 22

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು