AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬಂಧನದ ತೂಗುಗತ್ತಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬಂಧನದ ತೂಗುಗತ್ತಿ ನೇತಾಡುತ್ತಿದೆ. ಚುನಾವಣಾ ಆಯೋಗದ ಹೊರಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕಾರಣ ಬಂಧನ ಭೀತಿ ಎದುರಾಗಿದೆ.

Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬಂಧನದ ತೂಗುಗತ್ತಿ
ಇಮ್ರಾನ್ ಖಾನ್ ನಿವಾಸದೆದುರು ಬೆಂಬಲಿಗರು
ನಯನಾ ರಾಜೀವ್
|

Updated on: Feb 17, 2023 | 7:57 AM

Share

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬಂಧನದ ತೂಗುಗತ್ತಿ ನೇತಾಡುತ್ತಿದೆ. ಚುನಾವಣಾ ಆಯೋಗದ ಹೊರಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕಾರಣ ಬಂಧನ ಭೀತಿ ಎದುರಾಗಿದೆ. ಕಳೆದ ವರ್ಷ ನವೆಂಬರ್​ನಲ್ಲಿ ನಡೆದ ರ್ಯಾಲಿಯಲ್ಲಿ ವಜೀರಾಬಾದ್​ನಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡಿದ್ದ ಇಮ್ರಾನ್ ಖಾನ್, ವೈದ್ಯಕೀಯ ಕಾರಣಗಳಿಂದಾಗಿ ಜಾಮೀನು ಪಡೆದಿದ್ದರು.

ಇದೀಗ ತೀರ್ಪು ಪ್ರಕಟವಾಗಿದ್ದು, ಇಮ್ರಾನ್​ ಖಾನ್ ಬಂಧನಕ್ಕೆ ಒಳಗಾಗಬಹುದು ಎಂದು ವರದಿಗಳು ಹೇಳಿವೆ. ಪಾಕಿಸ್ತಾನದಲ್ಲಿ ರಾಜಕೀಯ ಕಲಹ ಹೆಚ್ಚುತ್ತಿದೆ. ಏತನ್ಮಧ್ಯೆ, ಲಾಹೋರ್ ಪೊಲೀಸರು ಭಾರೀ ಲವಲಷ್ಕರ್ ಜೊತೆಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮನೆಗೆ ತಲುಪಿದ್ದಾರೆ. ಮತ್ತೊಂದೆಡೆ, ಇಮ್ರಾನ್ ಖಾನ್ ಬೆಂಬಲಿಗರು ಜಮಾಯಿಸಿದ್ದಾರೆ.

ಲಾಹೋರ್​ನ ಜಮಾನ್ ಪಾರ್ಕ್​ಗೆ ಭಾರಿ ಪೊಲೀಸ್ ಪಡೆ ತಲುಪಿದೆ. ಹೀಗಿರುವಾಗ ಇಮ್ರಾನ್ ಖಾನ್​ಗೆ ಬಂಧನ ಭೀತಿ ಎದುರಾಗಿದೆ, ಇಮ್ರಾನ್ ಖಾನ್ ಬಂಧನದ ನಂತರ ಪಾಕಿಸ್ತಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: Russia Ukraine War: ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭಾರತದಂತೆ ಪಾಕಿಸ್ತಾನವೂ ತಟಸ್ಥವಾಗಿರಬೇಕಿತ್ತು: ಇಮ್ರಾನ್ ಖಾನ್

ಇಮ್ರಾನ್​ ಖಾನ್​ ಅವರನ್ನು ಲಾಹೋರ್ ಹೈಕೋರ್ಟ್​ಗೆ ಹಾಜರುಪಡಿಸದಿದ್ದರೆ ಬಂಧಿಸಲು ಪೊಲೀಸರು ಯೋಜಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಇಮ್ರಾನ್​ ಖಾನ್​ರನ್ನು ಯಾವಾಗ ಬೇಕಾದರೂ ಬಂಧಿಸಬಹುದು ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಇಮ್ರಾನ್ ಖಾನ್ ಚುನಾವಣಾ ಆಯೋಗದ ಹೊರಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಫೆ.20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಲಾಹೋರ್ ನ್ಯಾಯಾಲಯ ಹೇಳಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ