AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ನೋಡಲೆಂದು ಕೆನಡಾಗೆ ಹೋಗಿ ಪತ್ನಿ ಕೊಂದು, ತನ್ನ ತಾಯಿಗೆ ವಿಡಿಯೋ ಕಳುಹಿಸಿದ ಪಂಜಾಬ್ ವ್ಯಕ್ತಿ

ಮಗಳ ನೋಡಲೆಂದು ಕೆನಡಾಗೆ ಹೋದ ಪಂಜಾಬ್​ನ ವ್ಯಕ್ತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಗಳ ನೋಡಲೆಂದು ಕೆನಡಾಗೆ ಹೋಗಿ ಪತ್ನಿ ಕೊಂದು, ತನ್ನ ತಾಯಿಗೆ ವಿಡಿಯೋ ಕಳುಹಿಸಿದ ಪಂಜಾಬ್ ವ್ಯಕ್ತಿ
ಪೊಲೀಸ್​
ನಯನಾ ರಾಜೀವ್
|

Updated on: Mar 19, 2024 | 10:14 AM

Share

ಮಗಳ ನೋಡಲೆಂದು ಕೆನಡಾಗೆ ಹೋದವನು ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಗಳು ತಂದೆಯನ್ನು ನೋಡಬೇಕೆಂದು ಆತ ಭಾರತದಿಂದ ಕೆನಡಾಗೆ ಹೋಗಿದ್ದ, ಬಳಿಕ ಪತ್ನಿಯನ್ನು ಹತ್ಯೆ ಮಾಡಿ ತನ್ನ ತಾಯಿಗೆ ವಿಡಿಯೋ ಕಳುಹಿಸಿದ್ದಾನೆ. ಮೃತ ಮಹಿಳೆಯನ್ನು ಬಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ, ಕೃತ್ಯದ ಬಳಿಕ ಅದನ್ನು ವಿಡಿಯೋ ಮಾಡಿ ಲೂಧಿಯಾನದಲ್ಲಿರುವ ತನ್ನ ತಾಯಿಗೆ ಕಳುಹಿಸಿದ್ದಾನೆ.

ಕೆನಡಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಲೂಧಿಯಾನದ ಪಖೋವಾಲ್ ರಸ್ತೆಯ ನಿವಾಸಿ ಜಗಪ್ರೀತ್ ಸಿಂಗ್ ಅಲಿಯಾಸ್ ರಾಜು ಎಂದು ಗುರುತಿಸಲಾಗಿದೆ. ಮೃತನ ತಂದೆ ಹಿಮ್ಮತ್ ಸಿಂಗ್ ಅವರು ತಮ್ಮ ಮಗಳು ಬಲ್ವಿಂದರ್ ಕೌರ್ (41) 2000 ರಲ್ಲಿ ಲುಧಿಯಾನದ ಪಕ್ಹೋವಲ್ ರಸ್ತೆಯ ನಿವಾಸಿ ಜಗಪ್ರೀತ್ ಸಿಂಗ್ ಅಲಿಯಾಸ್ ರಾಜು ಅವರನ್ನು ವಿವಾಹವಾಗಿದ್ದರು.

ಮದುವೆಯ ಸಮಯದಲ್ಲಿ ಹುಡುಗನ ಮನೆಯವರ ಪ್ರತಿಯೊಂದು ಬೇಡಿಕೆಯನ್ನು ಈಡೇರಿಸಲಾಗಿತ್ತು. ಆದರೂ ಅತ್ತೆ-ಮಾವ ವರದಕ್ಷಿಣೆಗಾಗಿ ಮಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು ಎಂದು ಮೃತರ ಪೋಷಕರು ಹೇಳಿದ್ದಾರೆ. ತನಗೆ ನಾಲ್ವರು ಹೆಣ್ಣು ಮಕ್ಕಳಿದ್ದು, ಈ ಕಾರಣದಿಂದ ಅಳಿಯನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ತಮ್ಮ ಮಗಳಿಗೆ ಹರ್ನೂರ್‌ಪ್ರೀತ್ ಕೌರ್ ಮತ್ತು ಗುರ್ನೂರ್ ಸಿಂಗ್ ಎಂಬ ಇಬ್ಬರು ಮಕ್ಕಳಿದ್ದಾರೆ ಎಂದು ಅವರು ಹೇಳಿದರು. 2020 ರಲ್ಲಿ ಐಇಎಲ್ಟಿಎಸ್ ಮಾಡಿದ ನಂತರ ಹರ್ನೂರ್ಪ್ರೀತ್ ಕೌರ್ ಅವರನ್ನು ಕೆನಡಾದಲ್ಲಿ ಅಧ್ಯಯನ ಮಾಡಲು ಕಳುಹಿಸಲಾಗಿದೆ.

ಜನವರಿ 2022 ರಲ್ಲಿ, ಬಲ್ವಿಂದರ್ ಕೌರ್ ತನ್ನ ಮಗಳನ್ನು ಭೇಟಿಯಾಗಲು ಕೆನಡಾಕ್ಕೆ ಹೋಗಿದ್ದಳು. ಆತನನ್ನು ಕೆನಡಾಕ್ಕೆ ಏಕೆ ಕರೆದಿಲ್ಲ ಎಂದು ಜಗಳವಾಡಿದ್ದ. ಜಗ್‌ಪ್ರೀತ್ ಸಿಂಗ್ ತನ್ನ ಮಗಳಿಗೆ ಪದೇ ಪದೇ ಕರೆ ಮಾಡಿ ಶೀಘ್ರದಲ್ಲೇ ಕೆನಡಾಕ್ಕೆ ಕರೆಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ.

ಆರೋಪಿಗಳು ಒಂದು ವಾರದ ಹಿಂದೆ ಮಾರ್ಚ್ 11 ರಂದು ಕೆನಡಾಗೆ ಹೋಗಿದ್ದ. ನಡಾ ತಲುಪಿದ ಐದು ದಿನಗಳ ನಂತರ ಆತ ತನ್ನ ಪತ್ನಿ ಬಲ್ವಿಂದರ್ ಕೌರ್ ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ವಿಡಿಯೋವನ್ನು ತನ್ನ ತಾಯಿಗೆ ಕಳುಹಿಸಿದ್ದ, ಆ ವಿಡಿಯೋ ನೋಡಿ ಬೆಚ್ಚಿಬಿದ್ದ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡಿತ್ತು. ಆದಷ್ಟು ಬೇಗ ಮಗಳ ಮೃತದೇಹವನ್ನು ಭಾರತಕ್ಕೆ ತರಲು ಪಂಜಾಬ್ ಮತ್ತು ಕೇಂದ್ರ ಸರ್ಕಾರ ಸಹಾಯ ಮಾಡುವಂತೆ ಕುಟುಂಬ ಮನವಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?