AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾಡ್​ ಶಕ್ತಿಯಿಂದ ಇಂಡೊ ಪೆಸಿಫಿಕ್ ವಲಯದಲ್ಲಿ ಸುಧಾರಣೆ: ಟೊಕಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಶಯ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಮತ್ತು ಆಸ್ಟ್ರೇಲಿಯಾದ ನೂತನ ಪ್ರಧಾನಿ ಅಂತೋನಿ ಅಲ್​ಬೆನೀಸ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಕ್ವಾಡ್​ ಶಕ್ತಿಯಿಂದ ಇಂಡೊ ಪೆಸಿಫಿಕ್ ವಲಯದಲ್ಲಿ ಸುಧಾರಣೆ: ಟೊಕಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಶಯ
ಜಪಾನ್​ನ ಟೋಕಿಯೊದಲ್ಲಿ ನಡೆಯುತ್ತಿರುವ ಕ್ವಾಡ್ ಸಮಾವೇಶದಲ್ಲಿ ಪಾಲ್ಗೊಂಡಿರುವ ನಾಯಕರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 24, 2022 | 8:44 AM

Share

ಟೋಕಿಯೊ: ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟೋಕಿಯೊದಲ್ಲಿ ಇಂದು ಎರಡನೇ ಬಾರಿಗೆ ಮಾತುಕತೆ ನಡೆಸಿದರು. ಕ್ವಾಡ್ ಸಮಾವೇಶದಲ್ಲಿ (Quad Summit) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದಸ್ಯ ರಾಷ್ಟ್ರಗಳು ಪರಸ್ಪರ ನಂಬಿಕೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಪ್ರಜಾಪ್ರಭುತ್ವಕ್ಕೆ ಹೊಸ ಬಲ ಸಿಗುತ್ತದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಮತ್ತು ಆಸ್ಟ್ರೇಲಿಯಾದ ನೂತನ ಪ್ರಧಾನಿ ಅಂತೋನಿ ಅಲ್​ಬೆನೀಸ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಕೊವಿಡ್-19ರ ಕಾರಣದಿಂದ ಉಂಟಾದ ಹಲವು ಸಂಕಷ್ಟಗಳ ನಡುವೆಯೂ ಸದಸ್ಯ ರಾಷ್ಟ್ರಗಳು ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೆಚ್ಚಿಸಿದವು. ಲಸಿಕೆಗಳ ವಿತರಣೆ, ಹವಾಮಾನ ವೈಪರಿತ್ಯದ ಪರಿಣಾಮ ಕಡಿಮೆ ಮಾಡುವುದು, ಪೂರೈಕೆ ಸರಪಳಿಯನ್ನು ಸುಸ್ಥಿರವಾಗಿ ಕಾಪಾಡುವುದು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸದಸ್ಯ ರಾಷ್ಟ್ರಗಳು ಗಮನಾರ್ಹ ಕೊಡುಗೆ ನೀಡಿದವು. ಈ ಉಪಕ್ರಮಗಳು ಇಂಡೊ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನೆರವಾದವು ಎಂದು ಮೋದಿ ಹೇಳಿದರು.

ಬಿಡೆನ್, ಕಿಶಿದಾ ಮತ್ತು ಅಲ್​ಬೆನೀಸ್ ಅವರೊಂದಿಗೆ ಮೋದಿ ಅವರು ಪ್ರತ್ಯೇಕವಾಗಿ ಮಾತುಕತೆಗಳನ್ನು ನಡೆಸಲಿದ್ದಾರೆ. ಚೀನಾ ಮತ್ತು ಇತರ ಕ್ವಾಡ್ ಸದಸ್ಯ ರಾಷ್ಟ್ರಗಳೊಂದಿಗೆ ಸಂಬಂಧ ಹದಗೆಡುತ್ತಿರುವ ಹೊತ್ತಿನಲ್ಲಿ ನಡೆಯುತ್ತಿರುವ ಸಭೆಯು ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ. ಚೀನಾ ದೇಶವು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ವ್ಯಾಪಾರ ವಹಿವಾಟಿನ ರೀತಿಗಳಿಗೆ ಹಲವು ಬಾರಿ ಸವಾಲು ಹಾಕಿದೆ.

ಭಾರತ, ಅಮೆರಿಕ ಮತ್ತು ಇತರ ಹಲವು ಜಾಗತಿಕ ಶಕ್ತಿಗಳು ವ್ಯಾಪಾರ ಮತ್ತು ವಹಿವಾಟಿಗೆ ಮುಕ್ತ ಅವಕಾಶ ಇರಬೇಕು ಎಂದು ಪ್ರತಿಪಾದಿಸುತ್ತಿವೆ. ಇಂಡೊ-ಪೆಸಿಫಿಕ್ ವಲಯದಲ್ಲಿ ಚೀನಾದ ಮಿಲಿಟರಿ ಶಕ್ತಿ ಮತ್ತು ದಬ್ಬಾಳಿಕೆ ಮನೋಭಾವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕ್ವಾಡ್ ಸಮಾವೇಶಕ್ಕೆ ಮಹತ್ವ ಬಂದಿದೆ.

Published On - 8:44 am, Tue, 24 May 22

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ