AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Visit: ‘ಜಾಗತಿಕ ಶಾಂತಿ ಸ್ಥಾಪನೆಗಾಗಿ ಕ್ವಾಡ್​ ಕೆಲಸ ಮಾಡಲಿದೆ ಎಂಬ ನಂಬಿಕೆಯಿದೆ‘-ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು

Quad summit: ನಿನ್ನೆ ನಡೆದ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಯೋಶಿಹಿದೆ ಸುಗಾ, ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ. 

PM Modi US Visit: ‘ಜಾಗತಿಕ ಶಾಂತಿ ಸ್ಥಾಪನೆಗಾಗಿ ಕ್ವಾಡ್​ ಕೆಲಸ ಮಾಡಲಿದೆ ಎಂಬ ನಂಬಿಕೆಯಿದೆ‘-ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು
ಕ್ವಾಡ್​ ಶೃಂಗಸಭೆ
Follow us
TV9 Web
| Updated By: Lakshmi Hegde

Updated on:Sep 25, 2021 | 8:54 AM

ಇಂಡೋ-ಫೆಸಿಫಿಕ್​ ಪ್ರದೇಶ ಸೇರಿ, ಇಡೀ ಜಗತ್ತಿನಾದ್ಯಂತ ಶಾಂತಿ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ. ಅವರು ಶುಕ್ರವಾರ ವಾಷಿಂಗ್ಟನ್​ ಡಿಸಿಯ ಶ್ವೇತಭವನದಲ್ಲಿ ನಡೆದ, ಅಮೆರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್​ ರಾಷ್ಟ್ರನಾಯಕರನ್ನೊಳಗೊಂಡ ಕ್ವಾಡ್​ ಶೃಂಗಸಭೆ (Quad Summit)ಯಲ್ಲಿ ಮಾತನಾಡಿದರು.  ಸದ್ಯ ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಅಮೆರಿಕ ಪ್ರವಾಸ (PM Modi US Visit)ದಲ್ಲಿದ್ದಾರೆ. ನಿನ್ನೆ ನಡೆದ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಯೋಶಿಹಿದೆ ಸುಗಾ, ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ.  

2004ರಲ್ಲಿ ಇಂಡೋ-ಫೆಸಿಫಿಕ್​​ ಪ್ರದೇಶದಲ್ಲಿ ಸುನಾಮಿ ಎದ್ದಿತ್ತು. ಆಗ ಅವರಿಗೆ ಸಹಾಯ ಮಾಡಲು ನಮ್ಮ ಕ್ವಾಡ್​​ ರಾಷ್ಟ್ರಗಳು ಒಂದಾಗಿದ್ದವು. ಅದಾದ ಮೇಲೆ ಇದೇ ಮೊದಲ ಬಾರಿಗೆ ನಾವು ಒಗ್ಗಟ್ಟಾಗುತ್ತಿದ್ದೇವೆ. ಇಡೀ ಜಗತ್ತೇ ಕೊವಿಡ್​ 19 ವಿರುದ್ಧ ಹೋರಾಡುತ್ತಿರುವಾಗ ನಾವು ಮನುಕುಲದ ಕಲ್ಯಾಣಕ್ಕಾಗಿ ಮತ್ತೊಮ್ಮೆ ಒಂದಾಗಿದ್ದೇವೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಹಾಗೇ, ನಮ್ಮ ಸಾಮಾನ್ಯ ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ಕ್ವಾಡ್​ ಸಕಾರಾತ್ಮಕ ಚಿಂತನೆಯ ಮೂಲಕ ಮುಂದುವರಿಯಲು ನಿರ್ಧರಿಸಿದೆ.  ಇದೀಗ ಕ್ವಾಡ್​ ಶೃಂಗಸಭೆಯಲ್ಲಿ ಪೂರೈಕೆ ಸರಪಳಿ, ಜಾಗತಿಕ ಭದ್ರತೆ, ಹವಾಮಾನ ಬದಲಾವಣೆ ವಿರುದ್ಧ ಕ್ರಮ, ಕೊವಿಡ್ 19 ವಿರುದ್ಧ ಹೋರಾಟ, ತಂತ್ರಜ್ಞಾನದಲ್ಲಿ ಸಹಕಾರದ ಬಗ್ಗೆ ಕ್ವಾಡ್​ ಸದಸ್ಯರೊಂದಿಗೆ ಚರ್ಚಿಸಿದ್ದು ನನಗೆ ತೃಪ್ತಿಕೊಟ್ಟಿದೆ ಎಂದಿದ್ದಾರೆ.  ಕ್ವಾಡ್​​ ಮೂಲಕ ನಾವು ಜಗತ್ತಿನಲ್ಲಿ ಶಾಂತಿ ಮತ್ತು ಸಮೃದ್ಧಿ ಸ್ಥಾಪಿಸುತ್ತೇವೆ ಎಂಬ ಆತ್ಮವಿಶ್ವಾಸ ಇದೆ ಎಂದೂ ಭರವಸೆ ವ್ಯಕ್ತಪಡಿಸಿದ್ದಾರೆ. ಕ್ವಾಡ್​ ವತಿಯಿಂದ ಹಮ್ಮಿಕೊಳ್ಳುತ್ತಿರುವ ಕೊವಿಡ್​ 19 ಲಸಿಕೆ ಸಹಕಾರದ ಬಗ್ಗೆ ಮಾತನಾಡಿದ ಮೋದಿ, ಇದು ಖಂಡಿತವಾಗಿಯೂ ಇಂಡೋ-ಫೆಸಿಪಿಕ್​ ರಾಷ್ಟ್ರಗಳಿಗೆ ತುಂಬ ಸಹಾಯ ಮಾಡಲಿದೆ ಎಂದಿದ್ದಾರೆ.

ಸವಾಲುಗಳನ್ನು ಎದುರಿಸುತ್ತೇವೆ ಅಮರಿಕ ಅಧ್ಯಕ್ಷ ಜೋ ಬೈಡೆನ್​ ಮಾತನಾಡಿ, ಕೊವಿಡ್​ 19ನಿಂದ ಹವಾಮಾನ ವೈಪರೀತ್ಯದವರೆಗಿನ ಸಮಸ್ಯೆಗಳನ್ನು ಬಗೆಹರಿಸಲು ನಾಲ್ಕು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಯುಎಸ್​, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್​ಗಳು ಮುಂದೆ ಬಂದಿವೆ. ನಾವೆಲ್ಲ ಒಂದಾಗಿ ಖಂಡಿತ ಸವಾಲುಗಳನ್ನು ಎದುರಿಸುತ್ತೇವೆ ಎಂದಿದ್ದಾರೆ.  ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​ ಮಾತನಾಡಿ, ಇಂಡೋ-ಫೆಸಿಫಿಕ್​​ ಅನೇಕ ಸವಾಲುಗಳನ್ನು ಹೊಂದಿದೆ. ಈ ಪ್ರದೇಶವನ್ನು ದಬ್ಬಾಳಿಕೆಯಿಂದ ಮುಕ್ತ ಮಾಡಬೇಕಿದೆ. ಇಲ್ಲಿನ ಅಭಿವೃದ್ಧಿಗಾಗಿ ನಾವೆಲ್ಲ ಒಟ್ಟಾಗಲೇಬೇಕು ಎಂದು ಹೇಳಿದರು.

ಇದನ್ನೂ ಓದಿ:ದಾವಣಗೆರೆಯಲ್ಲಿ ಮೊಬೈಲ್ ಟವರ್ ಜನರೇಟರ್​ಗೆ ಆಕಸ್ಮಿಕ ಬೆಂಕಿ! ಭಾರಿ ಪ್ರಮಾಣದಲ್ಲಿ ಆವರಿಸಿದ ಹೊಗೆ 

Virat Kohli: ತಂಡದ ಸೋಲಿಗೆ ವಿರಾಟ್ ಕೊಹ್ಲಿ ನೇರವಾಗಿ ದೂರಿದ್ದು ಯಾರನ್ನ ಗೊತ್ತಾ?

(Quad would act as a force for global good Says PM Narendra Modi at Quad summit In US)

Published On - 8:41 am, Sat, 25 September 21

ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್