AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ; ಪೂಜೆ ಮಾಡಿ ಕುಣಿದು ಕುಪ್ಪಳಿಸಿದ ಅನಿವಾಸಿ ಕನ್ನಡಿಗರು

ಆಸ್ಟ್ರೇಲಿಯಾದಲ್ಲೂ ಕೂಡ ಅನಿವಾಸಿ ಕನ್ನಡಿಗರು ಶ್ರೀ ಗುರು ರಾಘವೇಂದ್ರ ರಾಯರ ಆರಾಧನ ಮಹೋತ್ಸವವನ್ನ ಆಸ್ಟ್ರೇಲಿಯಾದ ಪರ್ಥ್‌ನಲ್ಲಿ ಆಚರಣೆ ಮಾಡಿದ್ದಾರೆ. ಪರ್ಥ್‌ನ ಶ್ರೀ ಗುರು ರಾಘವೇಂದ್ರ ಸೇವ ಸಮಿತಿಯಿಂದ 11 ನೇ ಆರಾಧನ ಮಹೋತ್ಸವ ಜರುಗಿದೆ. ರಾಯರ ಆರಾಧನ ಮಹೋತ್ಸವದಲ್ಲಿ ಪ್ರಹ್ಲಾದ ರಾಯರು, ರಾಮ ಸೀತೆ, ಲಕ್ಷ್ಮಣ ಹನುಮನ ವಿಗ್ರಹಗಳಿಗೆ ಪೂಜೆ ಮತ್ತು ಅಭಿಷೇಕ ನೇರವೆರಿಸಲಾಗಿದೆ.

TV9 Web
| Edited By: |

Updated on: Sep 03, 2023 | 9:42 AM

Share

16ನೇ ಶತಮಾನದ ಸಂತ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ(Raghavendra Aradhana Mahotsava 2023) ಹಿನ್ನೆಲೆ ಮಂತ್ರಾಲಯ ಸೇರಿದಂತೆ ಪ್ರಪಂಚದಾದ್ಯಂತ ಬೃಂದಾವನಗಳಲ್ಲಿ ರಾಯರ ಆರಾಧನೆ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲೂ ಕೂಡ ಅನಿವಾಸಿ ಕನ್ನಡಿಗರು ಶ್ರೀ ಗುರು ರಾಘವೇಂದ್ರ(Sri Guru Raghavendra Swamy) ರಾಯರ ಆರಾಧನ ಮಹೋತ್ಸವವನ್ನ ಆಸ್ಟ್ರೇಲಿಯಾದ ಪರ್ಥ್‌ನಲ್ಲಿ ಆಚರಣೆ ಮಾಡಿದ್ದಾರೆ. ಪರ್ಥ್‌ನ ಶ್ರೀ ಗುರು ರಾಘವೇಂದ್ರ ಸೇವ ಸಮಿತಿಯಿಂದ 11 ನೇ ಆರಾಧನ ಮಹೋತ್ಸವ ಜರುಗಿದೆ.

ರಾಯರ ಆರಾಧನ ಮಹೋತ್ಸವದಲ್ಲಿ ಪ್ರಹ್ಲಾದ ರಾಯರು, ರಾಮ ಸೀತೆ, ಲಕ್ಷ್ಮಣ ಹನುಮನ ವಿಗ್ರಹಗಳಿಗೆ ಪೂಜೆ ಮತ್ತು ಅಭಿಷೇಕ ನೇರವೆರಿಸಲಾಗಿದೆ.ಇನ್ನೂ ತುಳಸಿ ಪೂಜೆ ಮಂತ್ರಗೋಷಿಗಳಿಂದ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಕಲಾವಿದರಿಂದ ಭರತನಾಟ್ಯ ಆಯೋಜನೆ ಮಾಡಲಾಗಿತ್ತು.

ರಾಯಚೂರಿನ ವೃಂದಾವನದಲ್ಲಿ ಹಬ್ಬದ ಸಂಭ್ರಮ

ಇನ್ನು ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನ ಮಂತ್ರಾಲಯದಲ್ಲಿ ಉತ್ತರರಾಧನೆಯಾಗಿ ಆಚರಿಸಲಾಗುತ್ತೆ. ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಹಿನ್ನೆಲೆ ರಾಯಚೂರಿನ ರಾಯರ ಮಠದಲ್ಲಿ ಸಂಭ್ರಮ ಮನೆ ಮಾಡಿದೆ. ಪೂರ್ವಾರಾಧನೆ ಅಂಗವಾಗಿ ತಮಿಳುನಾಡಿನ ಶ್ರೀ ಕ್ಷೇತ್ರ ಶ್ರೀರಂಗನ ಶ್ರೀರಂಗನಾಥ ದೇವಸ್ಥಾನ ಹಾಗೂ ಆಂಧ್ರಪ್ರದೇಶದ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ಶೇಷ ವಸ್ತ್ರವನ್ನು ರಾಯರಿಗೆ ಸಮರ್ಪಿಸಿಲಾಗಿದೆ.

ಶ್ರೀ ಮಠದಲ್ಲಿ ಪಾರಾಯಣ, ನೈರ್ಮಲ್ಯ ವಿಸರ್ಜನೆ, ಮೂಲರಾಮದೇವರ ಪೂಜೆಗಳನ್ನ ನೆರವೇರಿಸಲಾಗಿದೆ. ಜೊತೆಗೆ ರಾಯರ ಮೂಲ ಬೃಂದಾವನಕ್ಕೆ ಶ್ರೀಗಳಾದ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದ್ರು. ನಂತ್ರ ಉತ್ತರಾಧನೆ ವೇಳೆ ಆಚರಿಸಲಾಗೋ ವಸಂತೋತ್ಸವದ ಅಂಗವಾಗಿ ಶ್ರೀಗಳು ರಾಯರಿಗೆ ಬಣ್ಣವನ್ನ ಅರ್ಪಿಸಿದ್ರು. ನಂತರ ಶ್ರೀಗಳು ಭಕ್ತರಿಗೆ, ಅರ್ಚಕರಿಗೆ ಬಣ್ಣವನ್ನ ಎರಚಿ ಬಣ್ಣದೋಕುಳಿ ಆಡೋ ಮೂಲಕ ವಸಂತೋತ್ಸವ ಆಚರಣೆ ಮಾಡಿದ್ರು. ಅಪಾರ ಭಕ್ತರು ಈ ವಸಂತೋತ್ಸವದಲ್ಲಿ ಭಾಗಿಯಾಗಿದ್ದರು.

ಉತ್ತರಾಧನೆ ಹಿನ್ನೆಲೆ ರಾಯರು ಪ್ರಹ್ಲಾದ್ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜ ಬೀದಿಯಲ್ಲಿ ದರ್ಶನ ಕೊಡುತ್ತಾರೆ ಅನ್ನೋ ಪ್ರತೀತಿಯಿದೆ. ಹೀಗಾಗಿ ಗುರುರಾಯರನ್ನ ಪ್ರಹ್ಲಾದ್ ರಾಜರ ರೂಪದಲ್ಲಿ ಸಂಸ್ಕೃತ ಪಾಠಶಾಲೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ನಂತರ ಮಠದ ಮದ್ವದ್ವಾರ ಮೂಲಕ ರಾಜಬೀದಿಯಲ್ಲಿ ಮಹಾರಥೋತ್ಸದತ್ತ ಶ್ರೀಗಳು ಆಗಮಿಸಿ ಪೂಜೆ ಸಲ್ಲಿಸಿದ್ರು. ನಂತರ ಶ್ರೀಗಳು ಭಕ್ತರಿಗೆ ಆಶಿರ್ವಚನೆ ಮಾಡಿದ್ರು. ಈ ಬಾರಿ ವಿಶೇಷವಾಗಿ ಚಂದ್ರಯಾನ 3 ಯಶಸ್ವಿಯಾಗಿದ್ದನ್ನ ನೆನೆದ್ರು. ಇದು ವಿಶ್ವದಲ್ಲೇ ಹೆಮ್ಮೆಯ ವಿಷಯ. ಹೀಗಾಗಿ ಚಂದ್ರಯಾನ 3 ರ ಮಾದರಿಯಲ್ಲಿ ಸೂರ್ಯನತ್ತ ಹೊರಟಿರೊ ಆದಿತ್ಯ ಎಲ್​1 ಕೂಡ ಯಶಸ್ವಿಯಾಗ್ಲಿ ಅಂತ ಹಾರೈಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು