AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Crisis: ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿದ ರನಿಲ್ ವಿಕ್ರಮಸಿಂಘೆ

ಶ್ರೀಲಂಕಾದ ಪ್ರಧಾನಿ ಹುದ್ದೆಗೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ ನೀಡಿದ್ದಾರೆ. 

Sri Lanka Crisis: ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿದ ರನಿಲ್ ವಿಕ್ರಮಸಿಂಘೆ
ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ರನಿಲ್ ವಿಕ್ರಮಸಿಂಘೆ
TV9 Web
| Edited By: |

Updated on:Jul 09, 2022 | 8:06 PM

Share

ಶ್ರೀಲಂಕಾ: ಶ್ರೀಲಂಕಾದ ಪ್ರಧಾನಿ ಹುದ್ದೆಗೆ ಇಂದು (ಜುಲೈ 9) ರನಿಲ್ ವಿಕ್ರಮಸಿಂಘೆ ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸಿತ್ತಿರುವ ಹಿನ್ನೆಲೆ ಅಲ್ಲಿನ ಪ್ರಜೆಗಳು ಉಗ್ರ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ  ರಾಜೀನಾಮೆ ನೀಡಲು ತೀರ್ಮಾನಿಸಿದ್ದರು. ಈ ಸಂಬಂಧ ಸಂಸದರ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಕೂಡ ಘೋಷಣೆ ಮಾಡಿದ್ದರು. ಸಂಸದರ ಸಭೆ ನಂತರ ರನಿಲ್ ವಿಕ್ರಮಸಿಂಘೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಅವರು ಹೊಸ ಸರ್ಕಾರ ಬರುವವರೆಗೆ ಹಾಲಿ ಸರ್ಕಾರ ಮುಂದುವರಿಯುತ್ತೆ. ಲಂಕಾ ಜನರ ಸುರಕ್ಷತೆಗೆ ಮೊದಲ ಆದ್ಯತೆಯಾಗಿದೆ. ಪಕ್ಷದ ನಾಯಕರ ಶಿಫಾರಸ್ಸನ್ನು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳು ಸೇರಿ ಸರ್ಕಾರ ರಚಿಸಲು ಅನುವು ಮಾಡಿಕೊಡಲು ನಾನು ರಾಜಿನಾಮೆ ನೀಡುತ್ತೀದ್ದೇನೆ ಎಂದು ಹೇಳಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಗೋತಬಯ ರಾಜಪಕ್ಸೆ ಮನೆಯನ್ನು ಸುತ್ತುವರೆದ್ದಿದ್ದರು. ಆಗ  ಅಧ್ಯಕ್ಷ ಗೋತಬಯ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದರು  ಎಂದು ಖಾಸಗಿ ಸುದ್ದಿ ಸಂಸ್ಥೆ AFP ವರದಿ ಮಾಡಿತ್ತು.

ಗೋತಬಯ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಅವರ ನಿವಾಸದೊಳಗೆ ನುಗ್ಗುತ್ತಿರುವುದನ್ನು ಶ್ರೀಲಂಕಾದ ದೂರದರ್ಶನದಲ್ಲಿ ಪ್ರಸಾರಗೊಳ್ಳುತ್ತಿವೆ.  ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಬೇರೆ ಕಡೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.  ಪ್ರತಿಭಟನಾಕಾರರು ಅಧ್ಯಕ್ಷರ ಭವನವನ್ನು ಪ್ರವೇಶಿಸದಂತೆ ಸೈನಿಕರು ಅಶ್ರುವಾಯು ಸಿಡಿಸಿದರು.

ಪ್ರತಿಭಟನೆಯನ್ನು ಹತ್ತಿಕ್ಕಲು  ಶ್ರೀಲಂಕಾದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಮಧ್ಯಾಹ್ನ 3.30ರಿಂದ ನಿಷೇಧಾಜ್ಞೆ ಜಾರಿಯಾಗಿದ್ದು, ಜನರು ಮನೆಯೊಳಗೇ ಇರಲು ಆದೇಶಿಸಲಾಗಿದೆ.

Published On - 7:09 pm, Sat, 9 July 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?