AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರ್ಯ ದಾನಿಯಿಂದ ಆನುವಂಶಿಕವಾಗಿ ಸಿಕ್ಕಿದ್ದು ‘ಡೆತ್ ಜೀನ್’ ಹಲವು ಮಕ್ಕಳಲ್ಲಿ ಕ್ಯಾನ್ಸರ್ ದೃಢ

ಇತ್ತೀಚೆಗೆ ಯುರೋಪ್​ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 2005ರಲ್ಲಿ ವಿದ್ಯಾರ್ಥಿಯೊಬ್ಬ ವೀರ್ಯ(Sperm)ವನ್ನು ದಾನ ಮಾಡಿದ್ದ. 17 ವರ್ಷಗಳಲ್ಲಿ ಅವನ ವೀರ್ಯ 197ಕ್ಕೂ ಹೆಚ್ಚು ಮಕ್ಕಳ ಹುಟ್ಟಿಗೆ ಕಾರಣವಾಗಿದೆ. ಆದರೆ ಅಪಾಯವೊಂದು ಎದುರಾಗಿದೆ, ಆತನ ವೀರ್ಯದಿಂದ ಹುಟ್ಟಿರುವ ಮಕ್ಕಳಲ್ಲಿ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಅಪಾಯಕಾರಿ TP53 ರೂಪಾಂತರ ಹೊಂದಿರುವ ಕಾರಣ ಇದು ಲಿ-ಫ್ರಾಮೇನಿ ಸಿಂಡ್ರೋಮ್‌ಗೆ ಕಾರಣವಾಗುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಶೇ. 90 ವರೆಗೆ ಹೆಚ್ಚಿಸುತ್ತದೆ ಎಂಬುದು ಸಾಬೀತಾಗಿದೆ.

ವೀರ್ಯ ದಾನಿಯಿಂದ ಆನುವಂಶಿಕವಾಗಿ ಸಿಕ್ಕಿದ್ದು ‘ಡೆತ್ ಜೀನ್’ ಹಲವು ಮಕ್ಕಳಲ್ಲಿ ಕ್ಯಾನ್ಸರ್ ದೃಢ
ವೀರ್ಯ
ನಯನಾ ರಾಜೀವ್
|

Updated on: Dec 12, 2025 | 1:07 PM

Share

ಯುರೋಪ್, ಡಿಸೆಂಬರ್ 12: ಇತ್ತೀಚೆಗೆ ಯುರೋಪ್​ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 2005ರಲ್ಲಿ ವಿದ್ಯಾರ್ಥಿಯೊಬ್ಬ ವೀರ್ಯ(Sperm)ವನ್ನು ದಾನ ಮಾಡಿದ್ದ. 17 ವರ್ಷಗಳಲ್ಲಿ ಅವನ ವೀರ್ಯ 197ಕ್ಕೂ ಹೆಚ್ಚು ಮಕ್ಕಳ ಹುಟ್ಟಿಗೆ ಕಾರಣವಾಗಿದೆ. ಆದರೆ ಅಪಾಯವೊಂದು ಎದುರಾಗಿದೆ, ಆತನ ವೀರ್ಯದಿಂದ ಹುಟ್ಟಿರುವ ಮಕ್ಕಳಲ್ಲಿ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಅಪಾಯಕಾರಿ TP53 ರೂಪಾಂತರ ಹೊಂದಿರುವ ಕಾರಣ ಇದು ಲಿ-ಫ್ರಾಮೇನಿ ಸಿಂಡ್ರೋಮ್‌ಗೆ ಕಾರಣವಾಗುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಶೇ. 90 ವರೆಗೆ ಹೆಚ್ಚಿಸುತ್ತದೆ ಎಂಬುದು ಸಾಬೀತಾಗಿದೆ.

ಬಾಲ್ಯದಿಂದಲೇ ಅನೇಕ ಮಕ್ಕಳಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿರುವುದನ್ನು ವೈದ್ಯರು ಗಮನಿಸಿದ್ದರು.ಈ ಎಲ್ಲಾ ಮಕ್ಕಳು ಒಂದೇ ದಾನಿಯ ವೀರ್ಯದಿಂದ ಜನಿಸಿದ್ದಾರೆ ಎಂದು ತನಿಖೆಗಳು ಬಹಿರಂಗಪಡಿಸಿದವು. 67 ಮಕ್ಕಳಲ್ಲಿ 23 ಮಕ್ಕಳಲ್ಲಿ ಅಪಾಯಕಾರಿ ರೂಪಾಂತರ ಇರುವುದು ಕಂಡುಬಂದಿದೆ. ಹತ್ತು ಮಕ್ಕಳಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು ಮತ್ತು ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪಿದ್ದಾರೆ.

ಫ್ರಾನ್ಸ್, ಬೆಲ್ಜಿಯಂ ಮತ್ತು ಇತರ ದೇಶಗಳ ವೈದ್ಯರು ಈ ಆನುವಂಶಿಕ ಅಪಾಯವು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ.ಈ ವೀರ್ಯ ದಾನವು 2005 ರಲ್ಲಿ ಪ್ರಾರಂಭವಾಯಿತು. ದಾನಿ ವಿದ್ಯಾರ್ಥಿಯಾಗಿದ್ದಾಗ ಮತ್ತು ಹಣಕ್ಕೆ ಬದಲಾಗಿ ವೀರ್ಯ ದಾನ ಮಾಡಿದರು. ಮುಂದಿನ 17 ವರ್ಷಗಳಲ್ಲಿ, ವಿವಿಧ ದೇಶಗಳ ಮಹಿಳೆಯರು ವೀರ್ಯವನ್ನು ಬಳಸಿದರು. 14 ದೇಶಗಳಲ್ಲಿ 67 ಫಲವತ್ತತೆ ಚಿಕಿತ್ಸಾಲಯಗಳು ವೀರ್ಯವನ್ನು ಬಳಸಿದ್ದವು.

ಮತ್ತಷ್ಟು ಓದಿ: ವೀರ್ಯ ಅಥವಾ ಅಂಡಾಣು ದಾನಿಗೆ ಮಗುವಿನ ಮೇಲೆ ಯಾವುದೇ ಕಾನೂನಾತ್ಮಕ ಹಕ್ಕಿಲ್ಲ: ಬಾಂಬೆ ಹೈಕೋರ್ಟ್​

ಈ ರೀತಿಯ ರೂಪಾಂತರವನ್ನು ಹೊಂದಿರುವ ಕೆಲವೇ ಜನರು ಕ್ಯಾನ್ಸರ್‌ನಿಂದ ಬದುಕುಳಿಯುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳನ್ನು ತಡೆಗಟ್ಟಲು ದಾನಿಗಳ ಸ್ಕ್ರೀನಿಂಗ್ ಪ್ರಕ್ರಿಯೆಗಳಲ್ಲಿ ಪ್ರಮುಖ ಬದಲಾವಣೆಗಳು ಅಗತ್ಯವಿದೆ ಎಂದು ಯುರೋಪಿಯನ್ ಆರೋಗ್ಯ ತಜ್ಞರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ