AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

North Korea: ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ

ಪೊಂಗ್ಯಾಂಗ್: ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

North Korea: ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ
Kim Jong Un
TV9 Web
| Edited By: |

Updated on: Dec 07, 2022 | 9:10 AM

Share

ಪೊಂಗ್ಯಾಂಗ್: ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು (South Korean Drama) ವೀಕ್ಷಿಸಿದ ಹಿನ್ನೆಲೆಯಲ್ಲಿ ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ (North Korea) ನಡೆದಿದೆ.

ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. 16-17 ವರ್ಷದ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಕೆ ಡ್ರಾಮಾ ವೀಕ್ಷಿಸಿದ್ದರಿಂದ ಅವರನ್ನು ಬಂಧಿಸಿ ವಾಯುನೆಲೆಯ ಮೈದಾನದಲ್ಲಿ ಸ್ಥಳೀಯರ ಎದುರು ಗಲ್ಲಿಗೇರಿಸಲಾಗಿದೆ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ.

ಉತ್ತರ ಕೊರಿಯಾದ ರಿಯಾಂಗ್‍ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಈ ಭಾಗವು ಚೀನಾದ ಗಡಿ ಭಾಗದ ಸಮೀಪವಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಸುಲಭವಾಗಿ ಸಿಗುತ್ತವೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳಿಗೂ ಕೆ- ಡ್ರಾಮಾ ದೊರೆತಿದಿದ್ದು, ವೀಕ್ಷಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಬಾಲಕರನ್ನು ಗಲ್ಲಿಗೇರಿಸಲಾಗಿತ್ತು, ಈ ಸುದ್ದಿ ಕಳೆದ ವಾರ ಬೆಳಕಿಗೆ ಬಂದಿದೆ. ಬಾಲಕರು ದುಷ್ಕೃತ್ಯವೆಸಗಿದ್ದಾರೆ ಹೀಗಾಗಿ ಅವರನ್ನು ಗಲ್ಲಿಗೇರಿಸಲಾಗಿದೆ ಎಂದು ಉತ್ತರ ಕೊರಿಯಾ ನಿಲುವನ್ನು ಸಮರ್ಥಿಸಿಕೊಂಡಿದೆ.

ತಾವು ವೀಕ್ಷಿಸಿದ ದಕ್ಷಿಣ ಕೊರಿಯಾದ ಕೆ-ಡ್ರಾಮಾವನ್ನು ಈ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರಿಗೂ ನೀಡಿದ್ದಾರೆ. ಆದರೆ ಉತ್ತರ ಕೋರಿಯಾದಲ್ಲಿ ದಕ್ಷಿಣ ಕೋರಿಯಾದ ಸಿನಿಮಾ, ಡ್ರಾಮಾವನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ ಜಾಂಗ್ ಉನ್ ಸರ್ಕಾರವು ಆ ಇಬ್ಬರು ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ .

ಕೊರಿಯನ್ ಡ್ರಾಮಾ ವೀಕ್ಷಿಸಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸಾರ್ವಜನಿಕರ ಮುಂದೆ ದಕ್ಷಿಣ ಕೊರಿಯಾದ ಪೊಲೀಸರು ಕರೆತಂದಿದ್ದಾರೆ. ಅದಾದ ಬಳಿಕ ಅವರಿಗೆ ಮರಣದಂಡನೆ ವಿಧಿಸಿದ್ದಾರೆ. ಅದಾದ ಬಳಿಕ ಏರ್‌ಫೀಲ್ಡ್‌ನಲ್ಲಿ ಅಧಿಕಾರಿಗಳು ಈ ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!