AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಹೇಟ್ ಇಂಡಿಯಾ ಪ್ರವಾಸ ಮುಂದುವರೆಸಿ; ಪ್ರಧಾನಿ ಮೋದಿ ಕುರಿತ ಹೇಳಿಕೆಗೆ ರಾಹುಲ್ ಗಾಂಧಿಯನ್ನು ಟ್ರೋಲ್ ಮಾಡಿದ ಯುಎಸ್ ಗಾಯಕಿ

ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್ ಪ್ರಧಾನಿ ನರೇಂದ್ರ ಮೋದಿಯನ್ನು ಸಮರ್ಥಿಸಿಕೊಂಡಿದ್ದು, ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹೆದರುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಟೀಕಿಸಿದ್ದಾರೆ. ಪ್ರಧಾನಿ ಮೋದಿ ಭಾರತದ ರಷ್ಯಾದ ತೈಲ ನೀತಿಯನ್ನು ನಿರ್ದೇಶಿಸಲು ಅಮೆರಿಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳ ನಡುವೆ ಅಮೆರಿಕನ್ ಗಾಯಕಿ ಮೇರಿ ಅವರು ರಾಹುಲ್ ಗಾಂಧಿಗೆ "ನಿಮ್ಮ ಐ ಹೇಟ್ ಇಂಡಿಯಾ ಪ್ರವಾಸಕ್ಕೆ ಹಿಂತಿರುಗಿ" ಎಂದು ಹೇಳುವ ಮೂಲಕ ಲೇವಡಿ ಮಾಡಿದ್ದಾರೆ.

ಐ ಹೇಟ್ ಇಂಡಿಯಾ ಪ್ರವಾಸ ಮುಂದುವರೆಸಿ; ಪ್ರಧಾನಿ ಮೋದಿ ಕುರಿತ ಹೇಳಿಕೆಗೆ ರಾಹುಲ್ ಗಾಂಧಿಯನ್ನು ಟ್ರೋಲ್ ಮಾಡಿದ ಯುಎಸ್ ಗಾಯಕಿ
Modi With Mary
ಸುಷ್ಮಾ ಚಕ್ರೆ
|

Updated on: Oct 17, 2025 | 3:17 PM

Share

ನವದೆಹಲಿ, ಅಕ್ಟೋಬರ್ 17: ಡೊನಾಲ್ಡ್ ಟ್ರಂಪ್ ಕುರಿತು ಪ್ರಧಾನಿ ನರೇಂದ್ರ ಮೋದಿಯವರ (PM Modi) ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿದ್ದ ಹೇಳಿಕೆಗಳ ವಿರುದ್ಧ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್ ಇಂದು ವಾಗ್ದಾಳಿ ನಡೆಸಿದ್ದಾರೆ. “ನಿಮ್ಮ ಐ ಹೇಟ್ ಇಂಡಿಯಾ ಪ್ರವಾಸಕ್ಕೆ ಹಿಂತಿರುಗಿ” ಎಂದು ಆಕೆ ರಾಹುಲ್ ಗಾಂಧಿಗೆ ಸೂಚಿಸಿ ಟ್ರೋಲ್ ಮಾಡಿದ್ದಾರೆ. ಪ್ರಧಾನಿ ಮೋದಿಯನ್ನು ಆಗಾಗ ಹೊಗಳುವ ಗಾಯಕಿ ಮೇರಿ ಮಿಲ್ಬೆನ್ ಈ ಬಾರಿಯೂ ಮೋದಿಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ನಿನ್ನೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಗ್ಗೆ ಪ್ರಧಾನಿ ಮೋದಿ ಭಯಗೊಂಡಿದ್ದಾರೆ. ಪ್ರಧಾನಿ ಮೋದಿ ಟ್ರಂಪ್‌ಗೆ ಹೆದರುತ್ತಾರೆ. ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ಟ್ರಂಪ್ ನಿರ್ಧರಿಸಲು ಮತ್ತು ಘೋಷಿಸಲು ಮೋದಿ ಏಕೆ ಅವಕಾಶ ಮಾಡಿ ಕೊಡುತ್ತಾರೆ? ಪದೇ ಪದೇ ಭಾರತವನ್ನು ನಿಂದಿಸುತ್ತಿದ್ದರೂ ಟ್ರಂಪ್ ಅವರೊಂದಿಗೆ ಮೋದಿ ಮಾತನಾಡಿ ಅಭಿನಂದನೆ ಹೇಳುತ್ತಿರುತ್ತಾರೆ. ನಮ್ಮ ದೇಶದ ಹಣಕಾಸು ಸಚಿವರ ಅಮೆರಿಕ ಭೇಟಿಯನ್ನು ರದ್ದುಗೊಳಿಸಲಾಗಿದೆ. ಶರ್ಮ್ ಎಲ್-ಶೇಖ್ ಶೃಂಗಸಭೆಗೆ ಮೋದಿ ಹೋಗಲಿಲ್ಲ. ಇದರ ಅರ್ಥವೇನು? ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ನಿನ್ನೆ ಪ್ರಧಾನಿ ಮೋದಿ- ಟ್ರಂಪ್ ನಡುವೆ ಫೋನ್ ಮಾತುಕತೆ ನಡೆದಿಲ್ಲ; ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಭಾರತ ಸ್ಪಷ್ಟನೆ

ಇದರ ಬೆನ್ನಲ್ಲೇ ಮೋದಿಯನ್ನು ಸಮರ್ಥಿಸಿಕೊಂಡಿರುವ ಅಮೆರಿಕನ್ ಗಾಯಕಿ ಮೇರಿ, “ನೀವು ಹೇಳಿರುವುದು ತಪ್ಪು ರಾಹುಲ್ ಗಾಂಧಿಯವರೇ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧ್ಯಕ್ಷ ಟ್ರಂಪ್‌ಗೆ ಹೆದರುವುದಿಲ್ಲ. ಪ್ರಧಾನಿ ಮೋದಿ ದೀರ್ಘ ಆಟವನ್ನು ಅರ್ಥಮಾಡಿಕೊಂಡಿದ್ದಾರೆ. ಇದು ಅಮೆರಿಕದೊಂದಿಗಿನ ಅವರ ರಾಜತಾಂತ್ರಿಕತೆಯ ಕಾರ್ಯತಂತ್ರವಾಗಿದೆ. ನಮ್ಮ ಸರ್ಕಾರ ಯಾವಾಗಲೂ ಅಮೆರಿಕದ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆಯೇ, ಪ್ರಧಾನಿ ಮೋದಿಯೂ ಭಾರತಕ್ಕೆ ಉತ್ತಮವಾದದ್ದನ್ನು ಮಾಡುತ್ತಾರೆ. ನಾನು ಅದನ್ನು ಶ್ಲಾಘಿಸುತ್ತೇನೆ, ” ಎಂದು ಹೇಳಿದ್ದಾರೆ.

ಇದಿಷ್ಟೇ ಅಲ್ಲದೆ, “ನೀವು ಈ ರೀತಿಯ ನಾಯಕತ್ವವನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನಾನು ನಿರೀಕ್ಷಿಸುವುದಿಲ್ಲ. ಏಕೆಂದರೆ ನೀವು ಭಾರತದ ಪ್ರಧಾನಿಯಾಗುವ ಕುಶಾಗ್ರಮತಿ ಹೊಂದಿಲ್ಲ. ನೀವೊಬ್ಬರೇ ಇರುವ ನಿಮ್ಮ “ಐ ಹೇಟ್ ಇಂಡಿಯಾ” ಪ್ರವಾಸಕ್ಕೆ ಹಿಂತಿರುಗುವುದು ಉತ್ತಮ” ಎಂದು ಮೇರಿ ಟೀಕಿಸಿದ್ದಾರೆ.

ಇದನ್ನೂ ಓದಿ: ರಷ್ಯನ್ ತೈಲ ಖರೀದಿಸಲ್ಲ ಅಂತ ಟ್ರಂಪ್​ಗೆ ಮೋದಿ ಭರವಸೆ ಕೊಟ್ಟರಾ? ಇಲ್ಲಿದೆ ಭಾರತದ ನಿಲುವು

ನಟಿ ಮತ್ತು ಸಾಂಸ್ಕೃತಿಕ ರಾಯಭಾರಿಯೂ ಆಗಿರುವ ಮೇರಿ ಮಿಲ್ಬೆನ್ ಜೂನ್ 2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ಆಗ ಅವರು ರೊನಾಲ್ಡ್ ರೇಗನ್ ಕಟ್ಟಡದಲ್ಲಿ ಭಾರತದ ರಾಷ್ಟ್ರಗೀತೆಯನ್ನು ಹಾಡಿದ್ದರು. ನಂತರ ಅವರು ಪ್ರಧಾನಿ ಮೋದಿ ಅವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದಿದ್ದರು. ಈ ಕ್ಷಣವು ವಿಶ್ವದಾದ್ಯಂತ ಗಮನ ಸೆಳೆದಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ