Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್ ಸಚಿವೆ ಸುಯೆಲ್ಲಾ ಬ್ರೆವರ್‌ಮನ್​​ನ್ನು ವಜಾಗೊಳಿಸಿದ ರಿಷಿ ಸುನಕ್

ಬ್ರಿಟನ್​​ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರಿಟನ್​​​ ಆಂತರಿಕ ಸಚಿವೆ ಸುಯೆಲ್ಲಾ ಬ್ರಾವರ್‌ಮನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ಇಂದು (ನ.13) ತಿಳಿಸಿದೆ. ಪ್ಯಾಲೇಸ್ಟಿನಿಯನ್ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದಾರೆ. ಜತೆಗೆ ರಿಷಿ ಸುನಕ್ ವಿರುದ್ಧ ಹೇಳಿಕೆಯನ್ನು ಕೂಡ ನೀಡಿದರು.

ಬ್ರಿಟನ್ ಸಚಿವೆ ಸುಯೆಲ್ಲಾ ಬ್ರೆವರ್‌ಮನ್​​ನ್ನು ವಜಾಗೊಳಿಸಿದ ರಿಷಿ ಸುನಕ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 13, 2023 | 3:12 PM

ಬ್ರಿಟನ್​​ ಪ್ರಧಾನಿ ರಿಷಿ ಸುನಕ್(Rishi Sunak) ಅವರು ತಮ್ಮ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರಿಟನ್​​​ ಆಂತರಿಕ ಸಚಿವೆ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ಇಂದು (ನ.13) ತಿಳಿಸಿದೆ. ಪ್ಯಾಲೇಸ್ಟಿನಿಯನ್ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದಾರೆ. ಜತೆಗೆ ರಿಷಿ ಸುನಕ್ ವಿರುದ್ಧ ಹೇಳಿಕೆಯನ್ನು ಕೂಡ ನೀಡಿದರು. ಶನಿವಾರ ನಡೆದ ಮೆರವಣಿಗೆಯನ್ನು ಪೋಲೀಸರ ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಹೇಳಿಕೊಂಡಿದ್ದರು. ಇದು ಜನರ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತದೆ. ಈ ಹೇಳಿಕೆ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ ಎಂದು ಸಂಪುಟ ಸದಸ್ಯರ ಒತ್ತಡಕ್ಕೆ ಮಣಿದು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಇನ್ನು ಬಿಬಿಸಿ ವರದಿಯ ಪ್ರಕಾರ ಸುನಕ್ ಅವರು ಸೋಮವಾರದಂದು ಕ್ಯಾಬಿನೆಟ್ ಪುನರ್ರಚನೆಯನ್ನು ಮಾಡಲಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಬ್ರೇವರ್‌ಮನ್ ಅವರನ್ನು ಬದಲಾಯಿಸಬಹುದು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಎಲ್ಲ ನಡೆ ರಾಜಕೀಯ ತಂತ್ರವಾಗಿದೆ ಎಂದು ಹೇಳಿದರು. ಮಾಜಿ ಪಿಎಂ ಡೇವಿಡ್ ಕ್ಯಾಮರೂನ್ ಅವರು ಮತ್ತೆ ವಿದೇಶಾಂಗ ಕಾರ್ಯದರ್ಶಿಯಾಗಿ ರಾಜಕೀಯಕ್ಕೆ ಮರಳುಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ:  ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್​ಗೆ ಡಿಕ್ಕಿ ಹೊಡೆದ ಕಾರು, ಚಾಲಕ ಅರೆಸ್ಟ್​

ಇನ್ನು ಸುಯೆಲ್ಲಾ ಬ್ರೆವರ್‌ಮನ್ ಅವರು ಸುನಕ್ ಅವರನ್ನು ವಿರೋಧಿಸಿದ್ದು ಒಂದು ಕಡೆಯಾದರೆ. ಇನ್ನು ಕಡೆ ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಹಾಗೂ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧನವಿದೆ. ಜತೆಗೆ ಮಿತ್ರಪಕ್ಷಗಳಿಗೂ ಅವಕಾಶ ನೀಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Mon, 13 November 23

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ