AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ

ಖಲಿಸ್ತಾನಿ ಬೆಂಬಲಿಗರ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರ ವಶಪಡಿಸಿಕೊಂಡಿದೆ. ಬ್ಯಾಂಕ್ ಖಾತೆಗಳು ಸೇರಿದಂತೆ ಇಲ್ಲಿಯವರೆಗೆ 100 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಬ್ಯಾಂಕ್ ಖಾತೆಗಳಿಂದ ಕೆನಡಾ, ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಅನುಮಾನಾಸ್ಪದ ವಹಿವಾಟು ನಡೆಯುತ್ತಿತ್ತು ಎನ್ನಲಾಗಿದೆ.

ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ
ರಿಷಿ ಸುನಕ್
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 09, 2024 | 10:23 PM

ಖಲಿಸ್ತಾನಿ ಬೆಂಬಲಿಗರ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಸರ್ಕಾರ ವಶಪಡಿಸಿಕೊಂಡಿದೆ. ಇಲ್ಲಿಯವರೆಗೆ 100 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಮತ್ತು ಸಿಖ್​ ಫಾರ್​​​ ಜಸ್ಟಿಸ್​​ ಮುಖ್ಯಸ್ಥ ಗುರುಪತ್ವಂತ್​ ಸಿಂಗ್​​ ಪನ್ನುನ್​ ಅವರ ಎಸ್‌ಎಫ್‌ಜೆ ಖಾತೆಯನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಸದ್ಯ ವಶಪಡಿಸಿಕೊಂಡಿರುವ ಬ್ಯಾಂಕ್ ಖಾತೆಗಳಿಂದ ಕೆನಡಾ, ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಅನುಮಾನಾಸ್ಪದ ವಹಿವಾಟು ನಡೆಯುತ್ತಿತ್ತು ಎನ್ನಲಾಗಿದೆ.

ಈ ವಿಚಾರವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತನಾಡಿದ್ದು, ಯಾವುದೇ ರೀತಿಯ ಹಿಂಸಾಚಾರ ಅಥವಾ ಉಗ್ರವಾದ ದೇಶದಲ್ಲಿ ಸ್ವೀಕಾರಾರ್ಹವಲ್ಲ. ಖಾಲಿಸ್ತಾನಿ ಪರ ಉಗ್ರವಾದವನ್ನು ಎದುರಿಸಲು ಬ್ರಿಟನ್ ಭಾರತ ಸರ್ಕಾರದೊಂದಿಗೆ ಬಹಳ ನಿಟಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಭದ್ರತಾ ಸಚಿವರು ಇತ್ತೀಚೆಗೆ ಭಾರತದಲ್ಲಿ ತಮ್ಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ. ನಾವು ಗುಪ್ತಚರ ಮತ್ತು ಮಾಹಿತಿಯನ್ನು ಹಂಚಿಕೊಳ್ಳಲು ಒಟ್ಟಾಗಿ ಕಾರ್ಯನಿರತ ತಂಡಗಳನ್ನು ಹೊಂದಿದ್ದೇವೆ. ಇದರಿಂದ ನಾವು ಈ ರೀತಿಯ ಹಿಂಸಾತ್ಮಕ ಉಗ್ರವಾದವನ್ನು ಬೇರುಸಹಿತ ಕಿತ್ತು ಹಾಕಲಿದ್ದೇವೆ ಎಂದಿದ್ದಾರೆ.

5ನೇ ಭಾರತ ಮತ್ತು ಯುಕೆ ಗೃಹ ವ್ಯವಹಾರಗಳ ಸಂವಾದದ ಸಂದರ್ಭದಲ್ಲಿ, ಭಾರತೀಯ ಗೃಹ ಸಚಿವಾಲಯವು ಯುಕೆ ಸರ್ಕಾರದೊಂದಿಗೆ ಲಂಡನ್‌ನಲ್ಲಿ ನಡೆಯುತ್ತಿರುವ ಖಲಿಸ್ತಾನಿ ಚಟುವಟಿಕೆಗಳು ಮತ್ತು ಪ್ರತಿಭಟನೆಗಳ ಕುರಿತು ಚರ್ಚೆ ಮಾಡಿದೆ. ಸಭೆಯಲ್ಲಿ ಭಾರತವು ಯುಕೆಗೆ ತಮ್ಮ ದೇಶದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:21 pm, Sat, 9 March 24

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್