AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ

ಖಲಿಸ್ತಾನಿ ಬೆಂಬಲಿಗರ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರ ವಶಪಡಿಸಿಕೊಂಡಿದೆ. ಬ್ಯಾಂಕ್ ಖಾತೆಗಳು ಸೇರಿದಂತೆ ಇಲ್ಲಿಯವರೆಗೆ 100 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಬ್ಯಾಂಕ್ ಖಾತೆಗಳಿಂದ ಕೆನಡಾ, ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಅನುಮಾನಾಸ್ಪದ ವಹಿವಾಟು ನಡೆಯುತ್ತಿತ್ತು ಎನ್ನಲಾಗಿದೆ.

ಖಲಿಸ್ತಾನಿ ಬೆಂಬಲಿಗರ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ವಶಪಡಿಸಿಕೊಂಡ ರಿಷಿ ಸುನಕ್ ಸರ್ಕಾರ
ರಿಷಿ ಸುನಕ್
ಗಂಗಾಧರ​ ಬ. ಸಾಬೋಜಿ
|

Updated on:Mar 09, 2024 | 10:23 PM

Share

ಖಲಿಸ್ತಾನಿ ಬೆಂಬಲಿಗರ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಸರ್ಕಾರ ವಶಪಡಿಸಿಕೊಂಡಿದೆ. ಇಲ್ಲಿಯವರೆಗೆ 100 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಮತ್ತು ಸಿಖ್​ ಫಾರ್​​​ ಜಸ್ಟಿಸ್​​ ಮುಖ್ಯಸ್ಥ ಗುರುಪತ್ವಂತ್​ ಸಿಂಗ್​​ ಪನ್ನುನ್​ ಅವರ ಎಸ್‌ಎಫ್‌ಜೆ ಖಾತೆಯನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಸದ್ಯ ವಶಪಡಿಸಿಕೊಂಡಿರುವ ಬ್ಯಾಂಕ್ ಖಾತೆಗಳಿಂದ ಕೆನಡಾ, ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಅನುಮಾನಾಸ್ಪದ ವಹಿವಾಟು ನಡೆಯುತ್ತಿತ್ತು ಎನ್ನಲಾಗಿದೆ.

ಈ ವಿಚಾರವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತನಾಡಿದ್ದು, ಯಾವುದೇ ರೀತಿಯ ಹಿಂಸಾಚಾರ ಅಥವಾ ಉಗ್ರವಾದ ದೇಶದಲ್ಲಿ ಸ್ವೀಕಾರಾರ್ಹವಲ್ಲ. ಖಾಲಿಸ್ತಾನಿ ಪರ ಉಗ್ರವಾದವನ್ನು ಎದುರಿಸಲು ಬ್ರಿಟನ್ ಭಾರತ ಸರ್ಕಾರದೊಂದಿಗೆ ಬಹಳ ನಿಟಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಭದ್ರತಾ ಸಚಿವರು ಇತ್ತೀಚೆಗೆ ಭಾರತದಲ್ಲಿ ತಮ್ಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ. ನಾವು ಗುಪ್ತಚರ ಮತ್ತು ಮಾಹಿತಿಯನ್ನು ಹಂಚಿಕೊಳ್ಳಲು ಒಟ್ಟಾಗಿ ಕಾರ್ಯನಿರತ ತಂಡಗಳನ್ನು ಹೊಂದಿದ್ದೇವೆ. ಇದರಿಂದ ನಾವು ಈ ರೀತಿಯ ಹಿಂಸಾತ್ಮಕ ಉಗ್ರವಾದವನ್ನು ಬೇರುಸಹಿತ ಕಿತ್ತು ಹಾಕಲಿದ್ದೇವೆ ಎಂದಿದ್ದಾರೆ.

5ನೇ ಭಾರತ ಮತ್ತು ಯುಕೆ ಗೃಹ ವ್ಯವಹಾರಗಳ ಸಂವಾದದ ಸಂದರ್ಭದಲ್ಲಿ, ಭಾರತೀಯ ಗೃಹ ಸಚಿವಾಲಯವು ಯುಕೆ ಸರ್ಕಾರದೊಂದಿಗೆ ಲಂಡನ್‌ನಲ್ಲಿ ನಡೆಯುತ್ತಿರುವ ಖಲಿಸ್ತಾನಿ ಚಟುವಟಿಕೆಗಳು ಮತ್ತು ಪ್ರತಿಭಟನೆಗಳ ಕುರಿತು ಚರ್ಚೆ ಮಾಡಿದೆ. ಸಭೆಯಲ್ಲಿ ಭಾರತವು ಯುಕೆಗೆ ತಮ್ಮ ದೇಶದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:21 pm, Sat, 9 March 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​