AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕಾಶ್ಮೀರದ ನದಿ, ಡ್ಯಾಂಗಳು ನಮ್ಮದಾಗಲಿವೆ; ಭಾರತಕ್ಕೆ ಲಷ್ಕರ್ ನಾಯಕ ಸವಾಲು

ಮುರಿಡ್ಕೆ ಪ್ರಧಾನ ಕಚೇರಿಯ ಮರುರ್ನಿರ್ಮಾಣದಲ್ಲಿ ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ನೆರವು ನೀಡುತ್ತಿದೆ ಎಂದು ಲಷ್ಕರ್ ಉಪ ಮುಖ್ಯಸ್ಥ ಒಪ್ಪಿಕೊಂಡಿದ್ದಾನೆ. ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಗುಂಪಿನ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಪಾಕಿಸ್ತಾನ ಸರ್ಕಾರ ಮತ್ತು ಮಿಲಿಟರಿ ಮುರಿಡ್ಕೆಯಲ್ಲಿರುವ ಎಲ್‌ಇಟಿಯ ಪ್ರಧಾನ ಕಚೇರಿಯ ಪುನರ್ನಿರ್ಮಾಣಕ್ಕೆ ಹಣಕಾಸು ಒದಗಿಸುತ್ತಿದೆ ಎಂದು ಕಸೂರಿ ಹೇಳುವ ಮೂಲಕ ಪಾಕಿಸ್ತಾನದ ಅಸಲಿ ಮುಖವನ್ನು ಬಯಲು ಮಾಡಿದ್ದಾನೆ.

ಶೀಘ್ರದಲ್ಲೇ ಕಾಶ್ಮೀರದ ನದಿ, ಡ್ಯಾಂಗಳು ನಮ್ಮದಾಗಲಿವೆ; ಭಾರತಕ್ಕೆ ಲಷ್ಕರ್ ನಾಯಕ ಸವಾಲು
Lashkar Chief
ಸುಷ್ಮಾ ಚಕ್ರೆ
|

Updated on: Sep 17, 2025 | 10:01 PM

Share

ನವದೆಹಲಿ, ಸೆಪ್ಟೆಂಬರ್ 17: ಭಯೋತ್ಪಾದನಾ ಸಂಘಟನೆಗಳು ಮತ್ತು ಪಾಕಿಸ್ತಾನದ (Pakistan) ನಡುವಿನ ನಂಟಿನ ಒಂದೊಂದೇ ಅಸಲಿ ಸತ್ಯಗಳು ಇದೀಗ ಬಯಲಿಗೆ ಬರುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡ ವೀಡಿಯೊವೊಂದರಲ್ಲಿ, ಲಷ್ಕರ್-ಎ-ತೈಬಾ (LeT)ದ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಭಯೋತ್ಪಾದಕ ಸಂಘಟನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ದಿಟ್ಟ ಹೇಳಿಕೆಗಳನ್ನು ನೀಡಿದ್ದಾನೆ. ಈ ವಿಡಿಯೋದಲ್ಲಿ ಭಾರತದ ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ನಾಶವಾದ ಸ್ಥಳವಾದ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಪುನರ್ನಿರ್ಮಿಸಲು ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಹಣವನ್ನು ಒದಗಿಸಿದೆ ಎಂದು ಕಸೂರಿ ಹೇಳಿದ್ದಾನೆ.

ಸುಮಾರು 2 ನಿಮಿಷಗಳ ವೀಡಿಯೊದಲ್ಲಿ, ಕಸೂರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತಕ್ಕೆ ಕಟು ಎಚ್ಚರಿಕೆ ನೀಡಿದ್ದಾರೆ. ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ನದಿಗಳು ಹಾಗೂ ಅಣೆಕಟ್ಟುಗಳು ನಮಗೆ ಸೇರುತ್ತವೆ ಎಂದು ಆತ ಹೇಳಿದ್ದಾನೆ. ವಿವಿಧ ಮಾಧ್ಯಮ ವರದಿಗಳ ಪ್ರಕಾರ, ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಆಗಿರುವ ಕಸೂರಿ, ಎಲ್‌ಇಟಿಯ ನಿರಂತರ ಕಾರ್ಯಾಚರಣೆಗಳ ಬಗ್ಗೆ ಹೆಮ್ಮೆಪಡಲು ಈ ವೀಡಿಯೊವನ್ನು ಬಳಸಿದ್ದಾರೆ. ಆದರೆ, ಈ ವಿಡಿಯೋ ಇದೀಗ ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ತೆರೆದಿಟ್ಟಿದೆ.

ಇದನ್ನೂ ಓದಿ: ದೆಹಲಿ ಸಂಸತ್ ದಾಳಿ, ಮುಂಬೈ ದಾಳಿ ಹಿಂದೆ ಮಸೂದ್ ಅಜರ್ ಕೈವಾಡ ಬಯಲು; ಪಾಕಿಸ್ತಾನಕ್ಕೆ ಮುಖಭಂಗ

ಈ ವಿಡಿಯೋದಲ್ಲಿ ಕಸೂರಿ ಎಲ್‌ಇಟಿಯ ಕಾರ್ಯಾಚರಣೆಗಳನ್ನು ಹೊಸ ಸಂಪನ್ಮೂಲಗಳೊಂದಿಗೆ ಬಲಪಡಿಸಲಾಗಿದೆ ಎಂದು ಸುಳಿವು ನೀಡಿದ್ದಾನೆ. ಎಲ್​ಇಟಿಗೆ ಪಾಕಿಸ್ತಾನದ ಬೆಂಬಲವನ್ನು ಇದು ಸೂಚಿಸುತ್ತದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಮುರಿಡ್ಕೆ ಹಲವು ವರ್ಷಗಳಿಂದ ಎಲ್‌ಇಟಿಯ ಕಾರ್ಯಾಚರಣೆಗಳ ಕೇಂದ್ರವಾಗಿದೆ. ಕಸೂರಿಯ ಈ ಹೇಳಿಕೆಗಳು ಈಗ ಆ ಗುಂಪು ತನ್ನ ಕಳೆದುಹೋದ ನೆಲೆಯನ್ನು ಮರಳಿ ಪಡೆಯಲು ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಸೂಚಿಸುತ್ತವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!