AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ವೆಸ್ಟ್‌ಮಿನಿಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ II ಪಾರ್ಥಿವ ಶರೀರವನ್ನಿರಿಸಿದ್ದ ವೇಳೆ ಕುಸಿದು ಬಿದ್ದ ರಾಯಲ್ ಗಾರ್ಡ್

ಸ್ಥಿರತೆ ಇಲ್ಲದಂತೆ ವಾಲಿಕೊಂಡ ಆತ ಥಟ್ಟನೆ ಮುಂದಕ್ಕೆ ಮುಗ್ಗಿರಿಸಿ ಬೀಳುತ್ತಿರುವುದು ವಿಡಿಯೊದಲ್ಲಿದೆ. ಆತ ಬಿದ್ದಾಗ ಆತನಿಗೆ ಸಹಾಯ ಮಾಡಲು ಇಬ್ಬರು ತಕ್ಷಣವೇ ಧಾವಿಸಿದ್ದಾರೆ.

Watch ವೆಸ್ಟ್‌ಮಿನಿಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ II ಪಾರ್ಥಿವ ಶರೀರವನ್ನಿರಿಸಿದ್ದ ವೇಳೆ ಕುಸಿದು ಬಿದ್ದ ರಾಯಲ್ ಗಾರ್ಡ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 15, 2022 | 3:52 PM

Share

ರಾಣಿ ಎಲಿಜಬೆತ್ II (Queen Elizabeth II) ಪಾರ್ಥಿವ ಶರೀರವನ್ನು ಬುಧವಾರ ವೆಸ್ಟ್‌ಮಿನಿಸ್ಟರ್ (Westminster Hall) ಹಾಲ್‌ನಲ್ಲಿರಿಸಿದಾಗ ಅಲ್ಲೇ ಸಮೀಪದಲ್ಲಿಯೇ ನಿಂತಿದ್ದ ರಾಯಲ್ ಗಾರ್ಡ್ ಕುಸಿದು ಬಿದ್ದ ಘಟನೆ ನಡೆದಿದೆ. ಕಪ್ಪು ಸಮವಸ್ತ್ರವನ್ನು ಧರಿಸಿರುವ ಗಾರ್ಡ್ ಮೊದಲಿಗೆ ರಾಣಿಯ ಶವಪೆಟ್ಟಿಗೆಯನ್ನು ಇರಿಸಲಾಗಿರುವ ಎತ್ತರದ ವೇದಿಕೆಯಾದ ಕ್ಯಾಟಫಾಲ್ಕ್‌ನಲ್ಲಿ ಮುಗ್ಗಿರಿಸಿ ಬೀಳುತ್ತಿರುವ ವಿಡಿಯೊ ವೈರಲ್ ಆಗಿದೆ. ಸ್ಥಿರತೆ ಇಲ್ಲದಂತೆ ವಾಲಿಕೊಂಡ ಆತ ಥಟ್ಟನೆ ಮುಂದಕ್ಕೆ ಮುಗ್ಗಿರಿಸಿ ಬೀಳುತ್ತಿರುವುದು ವಿಡಿಯೊದಲ್ಲಿದೆ. ಆತ ಬಿದ್ದಾಗ ಆತನಿಗೆ ಸಹಾಯ ಮಾಡಲು ಇಬ್ಬರು ತಕ್ಷಣವೇ ಧಾವಿಸಿದ್ದಾರೆ, ಪೊಲೀಸರು ಮತ್ತು ಇತರರು ಆತನಿಗೆ ಸಹಾಯ ಮಾಡುತ್ತಿದ್ದಂತೆ ಸಮಾರಂಭವನ್ನು ಲೈವ್-ಸ್ಟ್ರೀಮ್ ಮಾಡುತ್ತಿದ್ದ ಬಿಬಿಸಿ ಅದರ ಪ್ರಸಾರವನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿದೆ.

ಅಂಗರಕ್ಷಕ, ಹೌಸ್‌ಹೋಲ್ಡ್ ಡಿವಿಷನ್ ಅಥವಾ ಲಂಡನ್ ಗೋಪುರದ ಯೋಮನ್ ವಾರ್ಡರ್‌ಗಳ ಸಿಬ್ಬಂದಿ ರಾಣಿಯ ಶವಪೆಟ್ಟಿಗೆಯನ್ನು ರಕ್ಷಿಸಲು ನಿರಂತರವಾಗಿ ಕರ್ತವ್ಯದಲ್ಲಿರುತ್ತಾರೆ.

ಸೋಮವಾರ (ಸೆಪ್ಟೆಂಬರ್ 19) ವೆಸ್ಟ್‌ಮಿನಿಸ್ಟರ್ ಅಬೆಯಲ್ಲಿ ನಡೆಯುವ ಸರ್ಕಾರಿ ಅಂತ್ಯಕ್ರಿಯೆಯ ಮೊದಲು ರಾಣಿ ಪಾರ್ಥಿವ ಶರೀರವನ್ನು ರಾಜಧಾನಿಯ ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ಇರಿಸಲಾಗಿದೆ. 70 ವರ್ಷಗಳ ಕಾಲ ಅಧಿಕಾರದಲ್ಲಿದ್ದ  ರಾಣಿ ತಮ್ಮ 96 ನೇ ವಯಸ್ಸಿನಲ್ಲಿ ಸೆಪ್ಟೆಂಬರ್ 8 ರಂದು ನಿಧನರಾದರು.

ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ 48 ಗಂಟೆಗಳಿಗೂ ಹೆಚ್ಚು ಕಾಲ ಕಾದ ನಂತರ  ಹತ್ತಾರು ಜನರ ಸಮ್ಮುಖದಲ್ಲಿ ಶವಪೆಟ್ಟಿಗೆಯನ್ನು ಬುಧವಾರ ಅಂತಿಮ ಬಾರಿಗೆ ಬಕಿಂಗ್ಹ್ಯಾಮ್ ಅರಮನೆಯಿಂದ ಹೊರತೆಗೆಯಲಾಯಿತು. ರಾಣಿ ಎಲಿಜಬೆತ್ II ಅವರಿಗೆ ಗುರುವಾರವಿಡೀ ಅಂತಿಮ ವಿದಾಯ ಹೇಳುವ ಅವಕಾಶ ಇಲ್ಲಿನ ಜನರಿಗೆ ನೀಡಲಾಗಿದೆ.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್