AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾಕ್ಕೆ ಇಸ್ರೇಲ್​​ ಪ್ರಜೆಗಳ ಆಗಮನದ ವದಂತಿ: “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಾ ವಿಮಾನ ನಿಲ್ದಾಣದ ಮೇಲೆ ದಾಳಿ

ಇಸ್ರೇಲ್‌ನಿಂದ ರಷ್ಯಾಕ್ಕೆ ವಿಮಾನವೊಂದು ಆಗಮಿಸುತ್ತಿದೆ ಎಂಬ ವದಂತಿ ಹರಡಿದೆ. ವಿಮಾನವೊಂದು ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದ ಮಖಚ್ಕಲಾ ವಿಮಾನ ನಿಲ್ದಾಣಕ್ಕೆ ಬಂದಿದೆ. ಈ ವಿಮಾನ ಇಸ್ರೇಲ್​​​ನಿಂದ ಬಂದಿದೆ, ವಿಮಾನದಲ್ಲಿ ಇಸ್ರೇಲ್​ ಪ್ರಜೆಗಳು ಹಾಗೂ ಯಹೂದಿಗಳಿದ್ದರೆ ಎಂಬ ಸುದ್ದಿಗಳು ಹರಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಷ್ಯಾದಲ್ಲಿದ್ದ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಪ್ಯಾಲೇಸ್ಟಿನಿಯನ್ ಧ್ವಜವನ್ನು ಹಿಡಿದುಕೊಂಡು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದ್ದಾರೆ.

ರಷ್ಯಾಕ್ಕೆ ಇಸ್ರೇಲ್​​ ಪ್ರಜೆಗಳ ಆಗಮನದ ವದಂತಿ: ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಿಮಾನ ನಿಲ್ದಾಣದ ಮೇಲೆ ದಾಳಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Oct 30, 2023 | 2:20 PM

Share

ಇಸ್ರೇಲ್ ಮತ್ತು ಹಮಾಸ್​​ (Israel and Hamas) ನಡುವಿನ ಯುದ್ಧದ ಪರಿಣಾಮ ಬೇರೆ ದೇಶಗಳಿಗೆ ಬೀರುತ್ತಿದೆ. ಇಸ್ರೇಲ್​​​ ರಾಷ್ಟ್ರದ ಪ್ರಜೆಗಳನ್ನು ಗುರಿಯಾಗಿಸಿ ಅವರನ್ನು ವಿರೋಧಿಸುವ ಕೆಲಸ ನಡೆಯುತ್ತಿದೆ. ಇದೀಗ ಇಂತಹ ಘಟನೆ ರಷ್ಯಾದಲ್ಲಿ ನಡೆದಿದೆ. ರಷ್ಯಾವು ಪ್ಯಾಲೇಸ್ಟಿನಿಯನ್​ಗೆ ಬೆಂಬಲವನ್ನು ನೀಡಿತ್ತು. ಇದರ ಪರಿಣಾಮ ರಷ್ಯಾದ ನೆಲದಲ್ಲಿ ಗಟ್ಟಿಯಾಗಿ ನಿಂತಿದೆ ಎಂಬುದಕ್ಕೆ ಈ ಘಟನೆಯೆ ಸಾಕ್ಷಿ. ಇಸ್ರೇಲ್‌ನಿಂದ ರಷ್ಯಾಕ್ಕೆ ವಿಮಾನವೊಂದು ಆಗಮಿಸುತ್ತಿದೆ ಎಂಬ ವದಂತಿ ಹರಡಿದೆ. ವಿಮಾನವೊಂದು ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದ ಮಖಚ್ಕಲಾ ವಿಮಾನ ನಿಲ್ದಾಣಕ್ಕೆ ಬಂದಿದೆ. ಈ ವಿಮಾನ ಇಸ್ರೇಲ್​​​ನಿಂದ ಬಂದಿದೆ, ವಿಮಾನದಲ್ಲಿ ಇಸ್ರೇಲ್​ ಪ್ರಜೆಗಳು ಹಾಗೂ ಯಹೂದಿಗಳಿದ್ದರೆ ಎಂಬ ಸುದ್ದಿಗಳು ಹರಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಷ್ಯಾದಲ್ಲಿದ್ದ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಪ್ಯಾಲೇಸ್ಟಿನಿಯನ್ ಧ್ವಜವನ್ನು ಹಿಡಿದುಕೊಂಡು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದ್ದಾರೆ.

ಈ ಸಮಯದಲ್ಲಿ ಇಸ್ರೇಲ್​​ ಪ್ರಜೆಗಳು ಎಂದು ಭಾವಿಸಿ ಪ್ರಯಾಣಿಕರನ್ನು ತಡೆದಿದ್ದಾರೆ ಹಾಗೂ ತಮ್ಮ ರಾಷ್ಟ್ರಕ್ಕೆ ವಾಪಸ್ಸು ಹೋಗುವಂತೆ ಹೇಳಿದ್ದಾರೆ. ಈ ಘಟನೆಯ ನಂತರ ಇಸ್ರೇಲ್​​ ತನ್ನ ಪ್ರಜೆಗಳನ್ನು ರಷ್ಯಾ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಷ್ಯಾ ಡಾಗೆಸ್ತಾನ್ ಗವರ್ನರ್ ಘಟನೆಗೆ ಕಾರಣರಾದವರನ್ನು ಶಿಕ್ಷಿಸಲಾಗುವುದು ಎಂದು ಹೇಳಿದೆ. ಈ ವಿಮಾನ ನಿಲ್ದಾಣಕ್ಕೆ ಸುಮಾರು ಜನ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಧಾವಿಸಿದರು ಎಂದು ಹೇಳಲಾಗಿದೆ.

ಇಲ್ಲಿದೆ ವಿಡಿಯೋ

ಪ್ರತಿಭಟನೆ ಮಾಡುವ ವೇಳೆ “ಅಲ್ಲಾಹು ಅಕ್ಬರ್” ಎಂಬ ಘೋಷಣೆ ಹಾಕುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ಎಕ್ಸ್​​ನಲ್ಲಿ (ಈ ಹಿಂದಿನ ಟ್ವಿಟರ್​) ವೈರಲ್​​​ ಆಗಿದೆ. ಈ ವಿಡಿಯೋದಲ್ಲಿ ವಿಮಾನದಲ್ಲಿ ಬಂದ ಪ್ರಯಾಣಿಕರನ್ನು ಪ್ರತಿಭಟನೆಕಾರರು ಪ್ರಶ್ನೆ ಮಾಡಿದ್ದಾರೆ, ನೀವು ಯಾರು? ಎಲ್ಲಿಂದ ಬಂದಿದ್ದು?, ಇನ್ನು ಪಾಸ್​​ಪೋರ್ಟ್​​ಗಳನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಹಮಾಸ್, ಇಸ್ರೇಲ್​ ಯುದ್ಧದ ಬಗ್ಗೆ ಕಳವಳ, ಪ್ರಧಾನಿ ಮೋದಿ ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ನಡುವೆ ಚರ್ಚೆ

ಇನ್ನು ವಿಮಾನ ನಿಲ್ದಾಣಕ್ಕೆ ಹಠತ್​​ ಆಗಿ ಬಂದ ಜನರಲ್ಲಿ ಕೆಲವರು ಮಕ್ಕಳನ್ನು ಕೊಂದವರಿಗೆ ಇಲ್ಲಿ ಜಾಗವಿಲ್ಲ ಎಂಬ ಫಲಕಗಳನ್ನು ಹಿಡಿದುಕೊಂಡಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಇನ್ನೊಂದು ವಿಡಿಯೋದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ನೊಳಗೆ ಗುಂಪೊಂದು ಬಾಗಿಲುಗಳನ್ನು ಹೊಡೆಯಲು ಮುಂದಾಗಿದೆ. ಈ ವಿಮಾನ ನಿರಾಶ್ರಿತ ಪ್ರಯಾಣ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇಲ್ಲಿಗೆ ಯಹೂದಿ ನಿರಾಶಿತರು ಬರಬಾರದು ಎಂದು ಹೇಳಿದ್ದಾರೆ.

ಇನ್ನು ಇಸ್ರೇಲ್​​ ಪ್ರಜೆಗಳು ರಷ್ಯಾಕ್ಕೆ ಬರುತ್ತಿದ್ದರೆ ಎಂಬ ವದಂತಿಯನ್ನು ಟೆಲಿಗ್ರಾಮ್ ಖಾತೆಯಲ್ಲಿ ಹಬ್ಬಿಸಲಾಗಿದೆ. ಇದರಲ್ಲಿ ಇಸ್ರೇಲ್​​​​ನಿಂದ ಬರುತ್ತಿರುವ ಯಹೂದಿ ಪ್ರಜೆಗಳನ್ನು ತಡೆಯುವಂತೆ ಹಾಗೂ ಗಾಜಾದಲ್ಲಿ ಇಸ್ರೇಲಿ ಕ್ರಮಗಳನ್ನು ಖಂಡಿಸುವಂತೆ ಪೋಸ್ಟ್​​ ಮಾಡಲಾಗಿದೆ. ಈ ಘಟನೆಯ ನಂತರ ರಷ್ಯಾ ಏವಿಯೇಷನ್ ​​​​ಏಜೆನ್ಸಿ ರೊಸಾವಿಯಾಟ್ಸಿಯಾ ಮಖಚ್ಕಲಾ ವಿಮಾನ ನಿಲ್ದಾಣದಿಂದ ಒಳಬರುವ ಮತ್ತು ಹೊರಹೋಗುವ ವಿಮಾನಗಳನ್ನು ನಿರ್ಬಂಧಿಸಲಾಗಿದೆ. ಜತೆಗೆ ಸ್ಥಳಕ್ಕೆ ಭದ್ರತಾ ಪಡೆಗಳು ಬಂದಿದೆ ಎಂದು ಹೇಳಲಾಗಿದೆ. ಭಾನುವಾರ ರಾತ್ರಿಯೆ ರೋಸಾವಿಯಾಟ್ಸಿಯಾ ವಿಮಾನ ನಿಲ್ದಾಣದಲ್ಲಿದ್ದ ಜನರನ್ನು ಹೊರಗೆ ಕಳುಹಿಸಲಾಗಿದೆ ಹಾಗೂ ಈ ವಿಮಾನ ನಿಲ್ದಾಣವನ್ನು ನ.6ಎವರಗೆ ಮುಚ್ಚಲಾಗುವುದು ಎಂದು ಹೇಳಿದೆ. ಈ ಘಟನೆಯಿಂದ ಅನೇಕರಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:53 pm, Mon, 30 October 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ