ರಷ್ಯಾಕ್ಕೆ ಇಸ್ರೇಲ್​​ ಪ್ರಜೆಗಳ ಆಗಮನದ ವದಂತಿ: “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗುತ್ತಾ ವಿಮಾನ ನಿಲ್ದಾಣದ ಮೇಲೆ ದಾಳಿ

ಇಸ್ರೇಲ್‌ನಿಂದ ರಷ್ಯಾಕ್ಕೆ ವಿಮಾನವೊಂದು ಆಗಮಿಸುತ್ತಿದೆ ಎಂಬ ವದಂತಿ ಹರಡಿದೆ. ವಿಮಾನವೊಂದು ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದ ಮಖಚ್ಕಲಾ ವಿಮಾನ ನಿಲ್ದಾಣಕ್ಕೆ ಬಂದಿದೆ. ಈ ವಿಮಾನ ಇಸ್ರೇಲ್​​​ನಿಂದ ಬಂದಿದೆ, ವಿಮಾನದಲ್ಲಿ ಇಸ್ರೇಲ್​ ಪ್ರಜೆಗಳು ಹಾಗೂ ಯಹೂದಿಗಳಿದ್ದರೆ ಎಂಬ ಸುದ್ದಿಗಳು ಹರಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಷ್ಯಾದಲ್ಲಿದ್ದ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಪ್ಯಾಲೇಸ್ಟಿನಿಯನ್ ಧ್ವಜವನ್ನು ಹಿಡಿದುಕೊಂಡು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದ್ದಾರೆ.

ರಷ್ಯಾಕ್ಕೆ ಇಸ್ರೇಲ್​​ ಪ್ರಜೆಗಳ ಆಗಮನದ ವದಂತಿ: ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಿಮಾನ ನಿಲ್ದಾಣದ ಮೇಲೆ ದಾಳಿ
ವೈರಲ್​​ ವಿಡಿಯೋ
Follow us
|

Updated on:Oct 30, 2023 | 2:20 PM

ಇಸ್ರೇಲ್ ಮತ್ತು ಹಮಾಸ್​​ (Israel and Hamas) ನಡುವಿನ ಯುದ್ಧದ ಪರಿಣಾಮ ಬೇರೆ ದೇಶಗಳಿಗೆ ಬೀರುತ್ತಿದೆ. ಇಸ್ರೇಲ್​​​ ರಾಷ್ಟ್ರದ ಪ್ರಜೆಗಳನ್ನು ಗುರಿಯಾಗಿಸಿ ಅವರನ್ನು ವಿರೋಧಿಸುವ ಕೆಲಸ ನಡೆಯುತ್ತಿದೆ. ಇದೀಗ ಇಂತಹ ಘಟನೆ ರಷ್ಯಾದಲ್ಲಿ ನಡೆದಿದೆ. ರಷ್ಯಾವು ಪ್ಯಾಲೇಸ್ಟಿನಿಯನ್​ಗೆ ಬೆಂಬಲವನ್ನು ನೀಡಿತ್ತು. ಇದರ ಪರಿಣಾಮ ರಷ್ಯಾದ ನೆಲದಲ್ಲಿ ಗಟ್ಟಿಯಾಗಿ ನಿಂತಿದೆ ಎಂಬುದಕ್ಕೆ ಈ ಘಟನೆಯೆ ಸಾಕ್ಷಿ. ಇಸ್ರೇಲ್‌ನಿಂದ ರಷ್ಯಾಕ್ಕೆ ವಿಮಾನವೊಂದು ಆಗಮಿಸುತ್ತಿದೆ ಎಂಬ ವದಂತಿ ಹರಡಿದೆ. ವಿಮಾನವೊಂದು ರಷ್ಯಾದ ಡಾಗೆಸ್ತಾನ್ ಪ್ರಾಂತ್ಯದ ಮಖಚ್ಕಲಾ ವಿಮಾನ ನಿಲ್ದಾಣಕ್ಕೆ ಬಂದಿದೆ. ಈ ವಿಮಾನ ಇಸ್ರೇಲ್​​​ನಿಂದ ಬಂದಿದೆ, ವಿಮಾನದಲ್ಲಿ ಇಸ್ರೇಲ್​ ಪ್ರಜೆಗಳು ಹಾಗೂ ಯಹೂದಿಗಳಿದ್ದರೆ ಎಂಬ ಸುದ್ದಿಗಳು ಹರಡಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ರಷ್ಯಾದಲ್ಲಿದ್ದ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಪ್ಯಾಲೇಸ್ಟಿನಿಯನ್ ಧ್ವಜವನ್ನು ಹಿಡಿದುಕೊಂಡು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದ್ದಾರೆ.

ಈ ಸಮಯದಲ್ಲಿ ಇಸ್ರೇಲ್​​ ಪ್ರಜೆಗಳು ಎಂದು ಭಾವಿಸಿ ಪ್ರಯಾಣಿಕರನ್ನು ತಡೆದಿದ್ದಾರೆ ಹಾಗೂ ತಮ್ಮ ರಾಷ್ಟ್ರಕ್ಕೆ ವಾಪಸ್ಸು ಹೋಗುವಂತೆ ಹೇಳಿದ್ದಾರೆ. ಈ ಘಟನೆಯ ನಂತರ ಇಸ್ರೇಲ್​​ ತನ್ನ ಪ್ರಜೆಗಳನ್ನು ರಷ್ಯಾ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಷ್ಯಾ ಡಾಗೆಸ್ತಾನ್ ಗವರ್ನರ್ ಘಟನೆಗೆ ಕಾರಣರಾದವರನ್ನು ಶಿಕ್ಷಿಸಲಾಗುವುದು ಎಂದು ಹೇಳಿದೆ. ಈ ವಿಮಾನ ನಿಲ್ದಾಣಕ್ಕೆ ಸುಮಾರು ಜನ ಪ್ಯಾಲೇಸ್ಟಿನಿಯನ್ ಬೆಂಬಲಿಗರು ಧಾವಿಸಿದರು ಎಂದು ಹೇಳಲಾಗಿದೆ.

ಇಲ್ಲಿದೆ ವಿಡಿಯೋ

ಪ್ರತಿಭಟನೆ ಮಾಡುವ ವೇಳೆ “ಅಲ್ಲಾಹು ಅಕ್ಬರ್” ಎಂಬ ಘೋಷಣೆ ಹಾಕುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ಎಕ್ಸ್​​ನಲ್ಲಿ (ಈ ಹಿಂದಿನ ಟ್ವಿಟರ್​) ವೈರಲ್​​​ ಆಗಿದೆ. ಈ ವಿಡಿಯೋದಲ್ಲಿ ವಿಮಾನದಲ್ಲಿ ಬಂದ ಪ್ರಯಾಣಿಕರನ್ನು ಪ್ರತಿಭಟನೆಕಾರರು ಪ್ರಶ್ನೆ ಮಾಡಿದ್ದಾರೆ, ನೀವು ಯಾರು? ಎಲ್ಲಿಂದ ಬಂದಿದ್ದು?, ಇನ್ನು ಪಾಸ್​​ಪೋರ್ಟ್​​ಗಳನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಹಮಾಸ್, ಇಸ್ರೇಲ್​ ಯುದ್ಧದ ಬಗ್ಗೆ ಕಳವಳ, ಪ್ರಧಾನಿ ಮೋದಿ ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ನಡುವೆ ಚರ್ಚೆ

ಇನ್ನು ವಿಮಾನ ನಿಲ್ದಾಣಕ್ಕೆ ಹಠತ್​​ ಆಗಿ ಬಂದ ಜನರಲ್ಲಿ ಕೆಲವರು ಮಕ್ಕಳನ್ನು ಕೊಂದವರಿಗೆ ಇಲ್ಲಿ ಜಾಗವಿಲ್ಲ ಎಂಬ ಫಲಕಗಳನ್ನು ಹಿಡಿದುಕೊಂಡಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಇನ್ನೊಂದು ವಿಡಿಯೋದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ನೊಳಗೆ ಗುಂಪೊಂದು ಬಾಗಿಲುಗಳನ್ನು ಹೊಡೆಯಲು ಮುಂದಾಗಿದೆ. ಈ ವಿಮಾನ ನಿರಾಶ್ರಿತ ಪ್ರಯಾಣ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇಲ್ಲಿಗೆ ಯಹೂದಿ ನಿರಾಶಿತರು ಬರಬಾರದು ಎಂದು ಹೇಳಿದ್ದಾರೆ.

ಇನ್ನು ಇಸ್ರೇಲ್​​ ಪ್ರಜೆಗಳು ರಷ್ಯಾಕ್ಕೆ ಬರುತ್ತಿದ್ದರೆ ಎಂಬ ವದಂತಿಯನ್ನು ಟೆಲಿಗ್ರಾಮ್ ಖಾತೆಯಲ್ಲಿ ಹಬ್ಬಿಸಲಾಗಿದೆ. ಇದರಲ್ಲಿ ಇಸ್ರೇಲ್​​​​ನಿಂದ ಬರುತ್ತಿರುವ ಯಹೂದಿ ಪ್ರಜೆಗಳನ್ನು ತಡೆಯುವಂತೆ ಹಾಗೂ ಗಾಜಾದಲ್ಲಿ ಇಸ್ರೇಲಿ ಕ್ರಮಗಳನ್ನು ಖಂಡಿಸುವಂತೆ ಪೋಸ್ಟ್​​ ಮಾಡಲಾಗಿದೆ. ಈ ಘಟನೆಯ ನಂತರ ರಷ್ಯಾ ಏವಿಯೇಷನ್ ​​​​ಏಜೆನ್ಸಿ ರೊಸಾವಿಯಾಟ್ಸಿಯಾ ಮಖಚ್ಕಲಾ ವಿಮಾನ ನಿಲ್ದಾಣದಿಂದ ಒಳಬರುವ ಮತ್ತು ಹೊರಹೋಗುವ ವಿಮಾನಗಳನ್ನು ನಿರ್ಬಂಧಿಸಲಾಗಿದೆ. ಜತೆಗೆ ಸ್ಥಳಕ್ಕೆ ಭದ್ರತಾ ಪಡೆಗಳು ಬಂದಿದೆ ಎಂದು ಹೇಳಲಾಗಿದೆ. ಭಾನುವಾರ ರಾತ್ರಿಯೆ ರೋಸಾವಿಯಾಟ್ಸಿಯಾ ವಿಮಾನ ನಿಲ್ದಾಣದಲ್ಲಿದ್ದ ಜನರನ್ನು ಹೊರಗೆ ಕಳುಹಿಸಲಾಗಿದೆ ಹಾಗೂ ಈ ವಿಮಾನ ನಿಲ್ದಾಣವನ್ನು ನ.6ಎವರಗೆ ಮುಚ್ಚಲಾಗುವುದು ಎಂದು ಹೇಳಿದೆ. ಈ ಘಟನೆಯಿಂದ ಅನೇಕರಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:53 pm, Mon, 30 October 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ