AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ಹೇಳಿದ್ದಾರೆ.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ
ರಷ್ಯಾ ದಾಳಿಗೆ ಮನೆಯೊಂದು ಅಸ್ತವ್ಯಸ್ಯ
TV9 Web
| Edited By: |

Updated on: Feb 27, 2022 | 7:17 PM

Share

ಕೀವ್​: ಉಕ್ರೇನ್​​ನಲ್ಲಿ ರಷ್ಯಾ ದಾಳಿ (Ukraine-Russia War) ಮುಂದುವರಿಸಿದೆ. ನಾವು ಯಾವ ಕಾರಣಕ್ಕೂ ರಷ್ಯಾಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿರುವ ಉಕ್ರೇನಿಯನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ತಮಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವಂತೆ ವಿಶ್ವದ ವಿವಿಧ ದೇಶಗಳ ಬಳಿ ಮನವಿ ಮಾಡುತ್ತಿದ್ದಾರೆ. ಹಾಗೇ, ತಾವೇ ಟ್ವೀಟ್ ಮತ್ತು ವಿಡಿಯೋ ಮೂಲಕ ಅಲ್ಲಿನ ಅಪ್​ಡೇಟ್​ ಕೂಡ ಕೊಡುತ್ತಿದ್ದಾರೆ. ರಷ್ಯಾ ಈಗ ಜನವಸತಿ ಪ್ರದೇಶಗಳಲ್ಲೂ ದಾಳಿ ನಡೆಸುತ್ತಿದೆ. ಶನಿವಾರ ರಾತ್ರಿ ಭಯಾನಕವಾಗಿತ್ತು. ವಸತಿ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟಿಸುತ್ತಿತ್ತು..ಎಲ್ಲಿ ನೋಡಿದರೂ ಗುಂಡಿನ ಶಬ್ದ ಕೇಳುತ್ತಿತ್ತು ಎಂದು ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ. ಅವರೀಗ ವಸತಿ ಪ್ರದೇಶಗಳು, ಶಾಲೆಗಳು, ಶಿಶುವಿಹಾರಗಳ ಮೇಲೆ ಕೂಡ ದಾಳಿ ಮಾಡುತ್ತಿದ್ದಾರೆ. ಆಂಬುಲೆನ್ಸ್​​ಗಳನ್ನೂ ಕೂಡ ಬಿಡುತ್ತಿಲ್ಲ. ಒಂದೇ ಒಂದು ಮಿಲಿಟರಿ ವ್ಯವಸ್ಥೆ, ಉಪಕರಣಗಳು ಇಲ್ಲದ ನಗರಗಳು, ಜಿಲ್ಲೆಗಳಲ್ಲಿ ಕೂಡ ರಷ್ಯಾ ಸೇನೆ ರಾಕೆಟ್​, ಕ್ಷಿಪಣಿಗಳನ್ನು ಹಾರಿಸುತ್ತಿದೆ ಎಂದು ಆರೋಪಿಸಿದ್ದಾರೆ.  ವಾಸಿಲ್ಕಿವ್, ಕೀವ್​, ಚೆರ್ನಿಗಿವ್, ಸುಮಿ, ಖಾರ್ಕಿವ್ ಮತ್ತು ಉಕ್ರೇನ್‌ನ ಇತರ ಅನೇಕ ಪಟ್ಟಣಗಳಲ್ಲಿ ಎರಡನೇ ಮಹಾಯುದ್ಧದ ನಂತರ ಇಂಥ ಸ್ಥಿತಿ ಎದುರಾಗಿರಲಿಲ್ಲ ಎಂದೂ ಉಕ್ರೇನ್ ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಅಚ್ಚರಿ ಮೂಡಿಸಿದ ಹೊಸ ಧಾರಾವಾಹಿ; ನಾಲ್ಕೇ ಎಪಿಸೋಡ್​ನಲ್ಲಿ ಆಯ್ತು ಮೋಡಿ

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ