AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ಹೇಳಿದ್ದಾರೆ.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ
ರಷ್ಯಾ ದಾಳಿಗೆ ಮನೆಯೊಂದು ಅಸ್ತವ್ಯಸ್ಯ
TV9 Web
| Edited By: |

Updated on: Feb 27, 2022 | 7:17 PM

Share

ಕೀವ್​: ಉಕ್ರೇನ್​​ನಲ್ಲಿ ರಷ್ಯಾ ದಾಳಿ (Ukraine-Russia War) ಮುಂದುವರಿಸಿದೆ. ನಾವು ಯಾವ ಕಾರಣಕ್ಕೂ ರಷ್ಯಾಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿರುವ ಉಕ್ರೇನಿಯನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ತಮಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವಂತೆ ವಿಶ್ವದ ವಿವಿಧ ದೇಶಗಳ ಬಳಿ ಮನವಿ ಮಾಡುತ್ತಿದ್ದಾರೆ. ಹಾಗೇ, ತಾವೇ ಟ್ವೀಟ್ ಮತ್ತು ವಿಡಿಯೋ ಮೂಲಕ ಅಲ್ಲಿನ ಅಪ್​ಡೇಟ್​ ಕೂಡ ಕೊಡುತ್ತಿದ್ದಾರೆ. ರಷ್ಯಾ ಈಗ ಜನವಸತಿ ಪ್ರದೇಶಗಳಲ್ಲೂ ದಾಳಿ ನಡೆಸುತ್ತಿದೆ. ಶನಿವಾರ ರಾತ್ರಿ ಭಯಾನಕವಾಗಿತ್ತು. ವಸತಿ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟಿಸುತ್ತಿತ್ತು..ಎಲ್ಲಿ ನೋಡಿದರೂ ಗುಂಡಿನ ಶಬ್ದ ಕೇಳುತ್ತಿತ್ತು ಎಂದು ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ. ಅವರೀಗ ವಸತಿ ಪ್ರದೇಶಗಳು, ಶಾಲೆಗಳು, ಶಿಶುವಿಹಾರಗಳ ಮೇಲೆ ಕೂಡ ದಾಳಿ ಮಾಡುತ್ತಿದ್ದಾರೆ. ಆಂಬುಲೆನ್ಸ್​​ಗಳನ್ನೂ ಕೂಡ ಬಿಡುತ್ತಿಲ್ಲ. ಒಂದೇ ಒಂದು ಮಿಲಿಟರಿ ವ್ಯವಸ್ಥೆ, ಉಪಕರಣಗಳು ಇಲ್ಲದ ನಗರಗಳು, ಜಿಲ್ಲೆಗಳಲ್ಲಿ ಕೂಡ ರಷ್ಯಾ ಸೇನೆ ರಾಕೆಟ್​, ಕ್ಷಿಪಣಿಗಳನ್ನು ಹಾರಿಸುತ್ತಿದೆ ಎಂದು ಆರೋಪಿಸಿದ್ದಾರೆ.  ವಾಸಿಲ್ಕಿವ್, ಕೀವ್​, ಚೆರ್ನಿಗಿವ್, ಸುಮಿ, ಖಾರ್ಕಿವ್ ಮತ್ತು ಉಕ್ರೇನ್‌ನ ಇತರ ಅನೇಕ ಪಟ್ಟಣಗಳಲ್ಲಿ ಎರಡನೇ ಮಹಾಯುದ್ಧದ ನಂತರ ಇಂಥ ಸ್ಥಿತಿ ಎದುರಾಗಿರಲಿಲ್ಲ ಎಂದೂ ಉಕ್ರೇನ್ ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಅಚ್ಚರಿ ಮೂಡಿಸಿದ ಹೊಸ ಧಾರಾವಾಹಿ; ನಾಲ್ಕೇ ಎಪಿಸೋಡ್​ನಲ್ಲಿ ಆಯ್ತು ಮೋಡಿ

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ