AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ವಿರುದ್ಧ ಹೋರಾಡಲು ನಿರಾಕರಿಸಿದ ಎಂದ ಸೈನಿಕರನ್ನು ಜೈಲಿಗೆ ಹಾಕಿ, ದೈಹಿಕ ಹಿಂಸೆ ನೀಡಿದ ರಷ್ಯಾ: ವರದಿ

ಉಕ್ರೇನ್ ಮೇಲೆ ಅತಿಕ್ರಮಣ ಆರಂಭವಾದಾಗ ಸೇನಾ ಪಡೆಗೆ ಸಿಕ್ಕಿದ ಕಡಿಮೆ ಬೆಂಬಲದಿಂದಾಗಿ ನಾನು ಯುದ್ಧದಲ್ಲಿ ಭಾಗಿಯಾಗಲು ನಿರಾಕರಿಸಿದೆ. ನನ್ನ ಈ ನಿಲುವಿನಿಂದಾಗಿ ನನಗೂ ಇತರ ಸೈನಿಕರನ್ನೂ ಬಂಧನದಲ್ಲಿಡಲಾಯಿತು.

ಉಕ್ರೇನ್ ವಿರುದ್ಧ ಹೋರಾಡಲು ನಿರಾಕರಿಸಿದ ಎಂದ ಸೈನಿಕರನ್ನು ಜೈಲಿಗೆ ಹಾಕಿ, ದೈಹಿಕ ಹಿಂಸೆ ನೀಡಿದ ರಷ್ಯಾ: ವರದಿ
ವ್ಲಾಡಿಮಿರ್ ಪುಟಿನ್
TV9 Web
| Edited By: |

Updated on: Dec 13, 2022 | 1:11 PM

Share

ಉಕ್ರೇನ್ (Ukraine) ವಿರುದ್ಧ ಯುದ್ಧ ಮಾಡಲು ನಿರಾಕರಿಸಿದ ತನ್ನ ಸೇನೆಯ ಸೈನಿಕರಿಗೆ ರಷ್ಯಾ (Russia) ದೈಹಿಕ ಹಿಂಸೆ ನೀಡುತ್ತಿದೆ ಎಂದು ಬಿಬಿಸಿ ವರದಿ ಮಾಡಿದೆ. ಸೈನಿಕರನ್ನು ಜೈಲಿಗೆ ನೂಕಿ, ಥಳಿಸಲಾಗುತ್ತಿದೆ ಎಂದು ಬಿಬಿಸಿ ತಮ್ಮ ವರದಿಯಲ್ಲಿ ಹೇಳಿದೆ. ಯುದ್ಧಕ್ಕೆ ಬೇಕಾದ ಸರಿಯಾದ ಸಿದ್ಧತೆ ಅಥವಾ ಯೋಜನೆಗಳನ್ನು ರಷ್ಯಾ ಮಾಡಿಕೊಂಡಿಲ್ಲ ಎಂದು ರಷ್ಯಾದ ಯೋಧರು ಮತ್ತು ಅವರ ಕುಟುಂಬಗಳು ವಿವರಿಸಿವೆ. ಯೋಧರಿಗೆ ಸ್ವಲ್ಪವೇ ಮಾಹಿತಿ ನೀಡಿ ಯುದ್ಧಕ್ಕೆ ಅಣಿಯಾಗುವಂತೆ ಆದೇಶ ನೀಡಲಾಗುತ್ತಿದೆ ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಇಬ್ಬರು ರಷ್ಯಾ ಯೋಧರ ಹೇಳಿಕೆಯನ್ನು ವರದಿ ಉಲ್ಲೇಖಿಸಿದ್ದು, ಇದರಲ್ಲಿ ಒಬ್ಬರು ಯೋಧರು, ಯೋಧರನ್ನು ಸಾವಿನೆಡೆಗೆ ಮುನ್ನಡೆಸಲು ನಿರಾಕರಿಸಿರುವುದಾಗಿ ಹೇಳಿದ್ದಾರೆ. ಉಕ್ರೇನ್ ಮೇಲೆ ಅತಿಕ್ರಮಣ ಆರಂಭವಾದಾಗ ಸೇನಾ ಪಡೆಗೆ ಸಿಕ್ಕಿದ ಕಡಿಮೆ ಬೆಂಬಲದಿಂದಾಗಿ ನಾನು ಯುದ್ಧದಲ್ಲಿ ಭಾಗಿಯಾಗಲು ನಿರಾಕರಿಸಿದೆ. ನನ್ನ ಈ ನಿಲುವಿನಿಂದಾಗಿ ನನಗೂ ಇತರ ಸೈನಿಕರನ್ನೂ ಬಂಧನದಲ್ಲಿಡಲಾಯಿತು. ನನಗೆ ಹೊಡೆದು, ನನ್ನ ಮೇಲೆ ಇನ್ನೇನು ಗುಂಡು ಹಾರಿಸುತ್ತಾರೆ ಎಂಬಂತೆ ಹೊರಗೆ ಎಳೆದುಕೊಂಡು ಹೋಗಲಾಯಿತು. ನೆಲದಲ್ಲಿ ಮಲಗಿ 10ರ ವರೆಗೆ ಎಣಿಸುವಂತೆ ಹೇಳಿದರು. ನಾನು ನಿರಾಕರಿಸಿದೆ. ಅವರು ಪಿಸ್ತೂಲ್​​ನಿಂದ ಹಲವು ಬಾರಿ ನನಗೆ ಹೊಡೆದರು. ನನ್ನ ಮುಖ ರಕ್ತಸಿಕ್ತವಾಗಿತ್ತು ಎಂದು ಯೋಧ ಹೇಳಿರುವುದಾಗಿ ಬಿಬಿಸಿ ವರದಿ ಹೇಳಿದೆ.

ನಾನು ನನ್ನ ಜತೆಗಿರುವ ಯೋಧರನ್ನು ಸಾವಿನೆಡೆಗೆ ಕರೆದೊಯ್ಯಲು ನಿರಾಕರಿಸಿದ್ದಕ್ಕಾಗಿ ನನ್ನ ಜತೆ ನಾಲ್ವರು ಸೇನಾ ಅಧಿಕಾರಿಗಳನ್ನು ಕಟ್ಟಡದ ಕೆಳಮಹಡಿಯಲ್ಲಿರಿಸಲಾಗಿತ್ತು. ಆ ಕಟ್ಟಡ ಶೆಲ್ ದಾಳಿಗೊಳಗಾಗಿದ್ದು, ಅವರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ರಷ್ಯಾದ ಪಡೆ ಯೋಧನ ಅಮ್ಮನಲ್ಲಿ ಹೇಳಿತ್ತು.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತನ್ನ ದೇಶಕ್ಕೆ ಶಾಂತಿಯನ್ನು ತರಲು ಮೀಸಲಾಗಿರುವ ಚಳಿಗಾಲದಲ್ಲಿ ವಿಶೇಷ ಜಾಗತಿಕ ಶಾಂತಿ ಶೃಂಗಸಭೆಯನ್ನು ಕರೆಯುವ ತನ್ನ ಕಲ್ಪನೆಯನ್ನು ಬೆಂಬಲಿಸುವಂತೆ ಏಳು ರಾಷ್ಟ್ರಗಳ ಗುಂಪಿನ ನಾಯಕರನ್ನು ಒತ್ತಾಯಿಸಿರುವ ಬೆನ್ನಲ್ಲೇ ಈ ವರದಿ ಪ್ರಕಟವಾಗಿದೆ. ಉಕ್ರೇನಿಯನ್ ಶಾಂತಿ ಸೂತ್ರದ ಅಂಶಗಳನ್ನು ನಾವು ಹೇಗೆ ಮತ್ತು ಯಾವಾಗ ಕಾರ್ಯಗತಗೊಳಿಸಬಹುದು ಎಂಬುದನ್ನು ನಿರ್ಧರಿಸಲು ವಿಶೇಷ ಶೃಂಗಸಭೆ ಗ್ಲೋಬಲ್ ಪೀಸ್ ಫಾರ್ಮುಲಾ ಶೃಂಗಸಭೆಯನ್ನು ಕರೆಯಲು ನಾನು ಪ್ರಸ್ತಾಪಿಸುತ್ತೇನೆ ಎಂದು ವೊಲೊಡಿಮಿರ್ ಝೆಲೆನ್ಸ್ಕಿ G7 ಮುಖ್ಯಸ್ಥರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಜಾಗತಿಕ ಮಟ್ಟದ ಶಾಂತಿ ಸೂತ್ರ ಶೃಂಗಸಭೆಗೆ ಕರೆ ನೀಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ