AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 1 ಗಂಟೆಗೆ ಉಕ್ರೇನ್ ಮೇಲೆ ರಷ್ಯಾ ದಾಳಿ: ಅಮೆರಿಕ ಗುಪ್ತಚರ ಮೂಲಗಳಿಂದ ಗುಟ್ಟು ರಟ್ಟು

ರಷ್ಯಾದ ಸುಮಾರು 2 ಲಕ್ಷ ಸೈನಿಕರು ಉಕ್ರೇನ್ ಗಡಿ ದಾಟಿ ದಾಳಿ ನಡೆಸಲಿದ್ದಾರೆ. ಈ ವೇಳೆ ದೊಡ್ಡಮಟ್ಟದಲ್ಲಿ ಕ್ಷಿಪಣಿ ದಾಳಿಗೂ ರಷ್ಯಾ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ

ಮಧ್ಯರಾತ್ರಿ 1 ಗಂಟೆಗೆ ಉಕ್ರೇನ್ ಮೇಲೆ ರಷ್ಯಾ ದಾಳಿ: ಅಮೆರಿಕ ಗುಪ್ತಚರ ಮೂಲಗಳಿಂದ ಗುಟ್ಟು ರಟ್ಟು
ಉಕ್ರೇನ್ ಗಡಿಯಲ್ಲಿ ರಷ್ಯಾ ಸೇನೆ
TV9 Web
| Edited By: |

Updated on: Feb 15, 2022 | 9:03 PM

Share

ವಾಷಿಂಗ್​ಟನ್: ಉಕ್ರೇನ್-ರಷ್ಯಾ ಗಡಿ ಸಂಘರ್ಷವು ನಿರ್ಣಾಯಕ ಘಟಕ್ಕೆ ಬಂದಿದ್ದು ಬುಧವಾರ (ಫೆ 16) ನಸುಕಿನ 1 ಗಂಟೆಗೆ ರಷ್ಯಾದ ಸುಮಾರು 2 ಲಕ್ಷ ಸೈನಿಕರು ಉಕ್ರೇನ್ ಗಡಿ ದಾಟಿ ದಾಳಿ ನಡೆಸಲಿದ್ದಾರೆ. ಈ ವೇಳೆ ದೊಡ್ಡಮಟ್ಟದಲ್ಲಿ ಕ್ಷಿಪಣಿ ದಾಳಿಗೂ ರಷ್ಯಾ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಈ ಮೊದಲು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಉಕ್ರೇನ್ ಗಡಿಯಿಂದ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಈ ಹೇಳಿಕೆಯನ್ನು ಅಮೆರಿಕ ನೇತೃತ್ವದ ರಕ್ಷಣಾ ಮೈತ್ರಿಕೂಟ ಸಂಘಟನೆ ನ್ಯಾಟೊ ಸಾರಾಸಗಟಾಗಿ ತಳ್ಳಿ ಹಾಕಿತ್ತು.

‘ಉಕ್ರೇನ್ ಗಡಿಯಿಂ ರಷ್ಯಾ ಸೇನೆ ಹಿಂದಿರುಗುತ್ತಿರುವ ಬಗ್ಗೆ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಬದಲಾಗಿ ರಷ್ಯಾ ವಲಯದಲ್ಲಿ ಸೇನಾ ಚಟುವಟಿಕೆಗಳು ಹೆಚ್ಚಾಗಿವೆ. ಉಕ್ರೇನ್ ಗಡಿಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂಬ ರಷ್ಯಾದ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ’ ಎಂದು ನ್ಯಾಟೊ ಮಹಾಪ್ರಧಾನ ಕಾರ್ಯದಶಿರ್ ಜೆನ್ಸ್​ ಸ್ಟೋಲ್ಟೆನ್​ರ್ಬಗ್​ ಬ್ರಸೆಲ್ಸ್​ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಈ ಹೇಳಿಕೆಯನ್ನು ಬಿಬಿಸಿ ಸುದ್ದಿವಾಹಿನಿ ಪ್ರಸಾರ ಮಾಡಿದೆ.

ಉಕ್ರೇನ್ ವಿಚಾರವಾಗಿ ಪಾಶ್ಚಿಮಾತ್ಯ ದೇಶಗಳೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ರಷ್ಯಾ ಸೋಮವಾರವಷ್ಟೇ (ಫೆ 14) ಘೋಷಿಸಿತ್ತು. ಇದ್ದಕ್ಕಿದ್ದ ಉಕ್ರೇನ್ ಗಡಿಯಲ್ಲಿ ಸೇನಾ ಚಟುವಟಿಕೆ ಹೆಚ್ಚಾದ ಕುರಿತು ಸ್ಪಷ್ಟನೆ ನೀಡಿದ್ದ ರಷ್ಯಾ, ಒಂದಿಷ್ಟು ತುಕಡಿಗಳು ತಮ್ಮ ಮೂಲ ನೆಲೆಗೆ ಹೊರಟಿವೆ. ಉಕ್ರೇನ್ ಮೇಲಿನ ದಾಳಿ ಭೀತಿ ಅನಗತ್ಯ ಎಂದಿತ್ತು. ಮಾಸ್ಕೋದಲ್ಲಿ ರಷ್ಯಾ ಆಡಳಿತದ ಉನ್ನತ ಪ್ರತಿನಿಧಿಗಳು ಈ ಹೇಳಿಕೆ ಹರಿಬಿಟ್ಟ ಬೆನ್ನಿಗೇ ನ್ಯಾಟೊ ಪಡೆಗಳು ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಮುಹೂರ್ತ ನಿಗದಿಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿವೆ.

ಉಕ್ರೇನ್ ಮೇಲೆ ದಾಳಿ ನಡೆಸಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅಮೆರಿಕ ಮತ್ತು ಅದರ ನ್ಯಾಟೊ ಸಹವರ್ತಿ ದೇಶಗಳು ಹಲವು ಬಾರಿ ಎಚ್ಚರಿಸಿವೆ. ಆದರೆ ಈ ವಿಚಾರದಲ್ಲಿ ನ್ಯಾಟೊದ ಎಲ್ಲ ಸದಸ್ಯ ದೇಶಗಳು ಈವರೆಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಪ್ರತಿ ದೇಶವೂ ರಷ್ಯಾದೊಂದಿಗೆ ವಿಭಿನ್ನ ರೀತಿಯ ಸಂಬಂಧ ಹೊಂದಿವೆ.

ಉಕ್ರೇನ್ ಗಡಿಯಲ್ಲಿ ನಡೆಯುತ್ತಿರುವ ಸೇನಾ ಚಟುವಟಿಕೆಗಳ ಬಗ್ಗೆ ಪಾಶ್ಚಿಮಾತ್ಯ ದೇಶಗಳ ಆಕ್ಷೇಪಗಳು ಮತ್ತು ಆತಂಕಗಳನ್ನು ರಷ್ಯಾ ತಳ್ಳಿ ಹಾಕಿತ್ತು. ತನಗೆ ಸೇರಿದ ಭೂಪ್ರದೇಶದಲ್ಲಿ ಎಲ್ಲಿ ಬೇಕಾದರೂ ಸೇನಾ ತುಕಡಿಗಳನ್ನು ನಿಯೋಜಿಸುವ ಸ್ವಾತಂತ್ರ್ಯ ನನಗಿದೆ ಎಂದು ರಷ್ಯಾ ಹೇಳಿತ್ತು. ಪೂರ್ವ ಉಕ್ರೇನ್​ನಲ್ಲಿ ರಷ್ಯಾ ಪರ ಬಂಡುಕೋರರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಸೇನಾ ಚಟುವಟಿಕೆ ಹೆಚ್ಚಿಸುವ ಮೂಲಕ ಉಕ್ರೇನ್ ಉದ್ವಿಗ್ನ ಸ್ಥಿತಿ ತಲೆದೋರಲು ಕಾರಣವಾಗಿದೆ ಎಂದಿದ್ದರು.

ಇದನ್ನೂ ಓದಿ: Oil Price: ಉಕ್ರೇನ್ ನೆಪದಲ್ಲಿ ಅಮೆರಿಕ ವಿರುದ್ಧ ತೊಡೆತಟ್ಟಿ ನಿಂತ ರಷ್ಯಾ: ಭಾರತಕ್ಕೆ ತೈಲ ಬೆಲೆ ಏರಿಕೆಯ ಜೊತೆಗೆ ಆರ್ಥಿಕ ಕುಸಿತದ ಭೀತಿ

ಇದನ್ನೂ ಓದಿ: ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ