AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 1 ಗಂಟೆಗೆ ಉಕ್ರೇನ್ ಮೇಲೆ ರಷ್ಯಾ ದಾಳಿ: ಅಮೆರಿಕ ಗುಪ್ತಚರ ಮೂಲಗಳಿಂದ ಗುಟ್ಟು ರಟ್ಟು

ರಷ್ಯಾದ ಸುಮಾರು 2 ಲಕ್ಷ ಸೈನಿಕರು ಉಕ್ರೇನ್ ಗಡಿ ದಾಟಿ ದಾಳಿ ನಡೆಸಲಿದ್ದಾರೆ. ಈ ವೇಳೆ ದೊಡ್ಡಮಟ್ಟದಲ್ಲಿ ಕ್ಷಿಪಣಿ ದಾಳಿಗೂ ರಷ್ಯಾ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ

ಮಧ್ಯರಾತ್ರಿ 1 ಗಂಟೆಗೆ ಉಕ್ರೇನ್ ಮೇಲೆ ರಷ್ಯಾ ದಾಳಿ: ಅಮೆರಿಕ ಗುಪ್ತಚರ ಮೂಲಗಳಿಂದ ಗುಟ್ಟು ರಟ್ಟು
ಉಕ್ರೇನ್ ಗಡಿಯಲ್ಲಿ ರಷ್ಯಾ ಸೇನೆ
TV9 Web
| Edited By: |

Updated on: Feb 15, 2022 | 9:03 PM

Share

ವಾಷಿಂಗ್​ಟನ್: ಉಕ್ರೇನ್-ರಷ್ಯಾ ಗಡಿ ಸಂಘರ್ಷವು ನಿರ್ಣಾಯಕ ಘಟಕ್ಕೆ ಬಂದಿದ್ದು ಬುಧವಾರ (ಫೆ 16) ನಸುಕಿನ 1 ಗಂಟೆಗೆ ರಷ್ಯಾದ ಸುಮಾರು 2 ಲಕ್ಷ ಸೈನಿಕರು ಉಕ್ರೇನ್ ಗಡಿ ದಾಟಿ ದಾಳಿ ನಡೆಸಲಿದ್ದಾರೆ. ಈ ವೇಳೆ ದೊಡ್ಡಮಟ್ಟದಲ್ಲಿ ಕ್ಷಿಪಣಿ ದಾಳಿಗೂ ರಷ್ಯಾ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಈ ಮೊದಲು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಉಕ್ರೇನ್ ಗಡಿಯಿಂದ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಈ ಹೇಳಿಕೆಯನ್ನು ಅಮೆರಿಕ ನೇತೃತ್ವದ ರಕ್ಷಣಾ ಮೈತ್ರಿಕೂಟ ಸಂಘಟನೆ ನ್ಯಾಟೊ ಸಾರಾಸಗಟಾಗಿ ತಳ್ಳಿ ಹಾಕಿತ್ತು.

‘ಉಕ್ರೇನ್ ಗಡಿಯಿಂ ರಷ್ಯಾ ಸೇನೆ ಹಿಂದಿರುಗುತ್ತಿರುವ ಬಗ್ಗೆ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಬದಲಾಗಿ ರಷ್ಯಾ ವಲಯದಲ್ಲಿ ಸೇನಾ ಚಟುವಟಿಕೆಗಳು ಹೆಚ್ಚಾಗಿವೆ. ಉಕ್ರೇನ್ ಗಡಿಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂಬ ರಷ್ಯಾದ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ’ ಎಂದು ನ್ಯಾಟೊ ಮಹಾಪ್ರಧಾನ ಕಾರ್ಯದಶಿರ್ ಜೆನ್ಸ್​ ಸ್ಟೋಲ್ಟೆನ್​ರ್ಬಗ್​ ಬ್ರಸೆಲ್ಸ್​ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಈ ಹೇಳಿಕೆಯನ್ನು ಬಿಬಿಸಿ ಸುದ್ದಿವಾಹಿನಿ ಪ್ರಸಾರ ಮಾಡಿದೆ.

ಉಕ್ರೇನ್ ವಿಚಾರವಾಗಿ ಪಾಶ್ಚಿಮಾತ್ಯ ದೇಶಗಳೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ರಷ್ಯಾ ಸೋಮವಾರವಷ್ಟೇ (ಫೆ 14) ಘೋಷಿಸಿತ್ತು. ಇದ್ದಕ್ಕಿದ್ದ ಉಕ್ರೇನ್ ಗಡಿಯಲ್ಲಿ ಸೇನಾ ಚಟುವಟಿಕೆ ಹೆಚ್ಚಾದ ಕುರಿತು ಸ್ಪಷ್ಟನೆ ನೀಡಿದ್ದ ರಷ್ಯಾ, ಒಂದಿಷ್ಟು ತುಕಡಿಗಳು ತಮ್ಮ ಮೂಲ ನೆಲೆಗೆ ಹೊರಟಿವೆ. ಉಕ್ರೇನ್ ಮೇಲಿನ ದಾಳಿ ಭೀತಿ ಅನಗತ್ಯ ಎಂದಿತ್ತು. ಮಾಸ್ಕೋದಲ್ಲಿ ರಷ್ಯಾ ಆಡಳಿತದ ಉನ್ನತ ಪ್ರತಿನಿಧಿಗಳು ಈ ಹೇಳಿಕೆ ಹರಿಬಿಟ್ಟ ಬೆನ್ನಿಗೇ ನ್ಯಾಟೊ ಪಡೆಗಳು ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಮುಹೂರ್ತ ನಿಗದಿಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿವೆ.

ಉಕ್ರೇನ್ ಮೇಲೆ ದಾಳಿ ನಡೆಸಿದರೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅಮೆರಿಕ ಮತ್ತು ಅದರ ನ್ಯಾಟೊ ಸಹವರ್ತಿ ದೇಶಗಳು ಹಲವು ಬಾರಿ ಎಚ್ಚರಿಸಿವೆ. ಆದರೆ ಈ ವಿಚಾರದಲ್ಲಿ ನ್ಯಾಟೊದ ಎಲ್ಲ ಸದಸ್ಯ ದೇಶಗಳು ಈವರೆಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಪ್ರತಿ ದೇಶವೂ ರಷ್ಯಾದೊಂದಿಗೆ ವಿಭಿನ್ನ ರೀತಿಯ ಸಂಬಂಧ ಹೊಂದಿವೆ.

ಉಕ್ರೇನ್ ಗಡಿಯಲ್ಲಿ ನಡೆಯುತ್ತಿರುವ ಸೇನಾ ಚಟುವಟಿಕೆಗಳ ಬಗ್ಗೆ ಪಾಶ್ಚಿಮಾತ್ಯ ದೇಶಗಳ ಆಕ್ಷೇಪಗಳು ಮತ್ತು ಆತಂಕಗಳನ್ನು ರಷ್ಯಾ ತಳ್ಳಿ ಹಾಕಿತ್ತು. ತನಗೆ ಸೇರಿದ ಭೂಪ್ರದೇಶದಲ್ಲಿ ಎಲ್ಲಿ ಬೇಕಾದರೂ ಸೇನಾ ತುಕಡಿಗಳನ್ನು ನಿಯೋಜಿಸುವ ಸ್ವಾತಂತ್ರ್ಯ ನನಗಿದೆ ಎಂದು ರಷ್ಯಾ ಹೇಳಿತ್ತು. ಪೂರ್ವ ಉಕ್ರೇನ್​ನಲ್ಲಿ ರಷ್ಯಾ ಪರ ಬಂಡುಕೋರರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಸೇನಾ ಚಟುವಟಿಕೆ ಹೆಚ್ಚಿಸುವ ಮೂಲಕ ಉಕ್ರೇನ್ ಉದ್ವಿಗ್ನ ಸ್ಥಿತಿ ತಲೆದೋರಲು ಕಾರಣವಾಗಿದೆ ಎಂದಿದ್ದರು.

ಇದನ್ನೂ ಓದಿ: Oil Price: ಉಕ್ರೇನ್ ನೆಪದಲ್ಲಿ ಅಮೆರಿಕ ವಿರುದ್ಧ ತೊಡೆತಟ್ಟಿ ನಿಂತ ರಷ್ಯಾ: ಭಾರತಕ್ಕೆ ತೈಲ ಬೆಲೆ ಏರಿಕೆಯ ಜೊತೆಗೆ ಆರ್ಥಿಕ ಕುಸಿತದ ಭೀತಿ

ಇದನ್ನೂ ಓದಿ: ಉಕ್ರೇನ್​ ಮೇಲೆ ಯುದ್ಧದ ಕಾರ್ಮೋಡ; ತಾತ್ಕಾಲಿಕವಾಗಿ ದೇಶ ತೊರೆಯುವಂತೆ ಅಲ್ಲಿರುವ ಭಾರತೀಯರಿಗೆ ಸೂಚನೆ ನೀಡಿದ ರಾಯಭಾರಿ ಕಚೇರಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ