AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್

ಕಳೆದ 4 ವರ್ಷಗಳಿಂದ ಜಗತ್ತನ್ನೇ ನಡುಗಿಸಿರುವ ರಷ್ಯಾ-ಉಕ್ರೇನ್ ಯುದ್ಧಕ್ಕೆ ಶೀಘ್ರದಲ್ಲೇ ಪೂರ್ಣವಿರಾಮ ಬೀಳುವ ಸಾಧ್ಯತೆ ದಟ್ಟವಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಡಿಸಿರುವ ಶಾಂತಿ ಸೂತ್ರದ ಆಧಾರದ ಮೇಲೆ ಯುದ್ಧವನ್ನು ನಿಲ್ಲಿಸಲು ರಷ್ಯಾ ಸಿದ್ಧವಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಕದನವಿರಾಮಕ್ಕೆ ಟ್ರಂಪ್ ಮಧ್ಯಸ್ಥಿಕೆ ಫಲ ಕೊಡುವ ಸಾಧ್ಯತೆ ಹೆಚ್ಚಾಗಿದೆ.

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್
Putin And ZelenskyyImage Credit source: AP
ಸುಷ್ಮಾ ಚಕ್ರೆ
|

Updated on:Jun 05, 2026 | 7:21 PM

Share

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ ಪ್ರಸ್ತಾಪಗಳನ್ನು ನಾವು ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ಯುದ್ಧ ನಿಲ್ಲಿಸಲು ರಷ್ಯಾ ತನ್ನದೇ ಆದ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಸ್ತುತ ಯುದ್ಧಭೂಮಿಯಲ್ಲಿನ ವಾಸ್ತವ ಸ್ಥಿತಿ ಮತ್ತು ಈ ಹಿಂದೆ ಇಸ್ತಾನ್‌ಬುಲ್‌ನಲ್ಲಿ ನಡೆದ ಮಾತುಕತೆಯ ನಿಯಮಗಳನ್ನು ಆಧರಿಸಿ ಶಾಂತಿ ಒಪ್ಪಂದ ನಡೆಯಬೇಕು ಎಂದು ಪುಟಿನ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಡೊನಾಲ್ಡ್ ಟ್ರಂಪ್ ರಷ್ಯಾ-ಉಕ್ರೇನ್ ಯುದ್ಧವನ್ನು 24 ಗಂಟೆಗಳಲ್ಲಿ ನಿಲ್ಲಿಸುವುದಾಗಿ ಹೇಳುತ್ತಾ ಬಂದಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಈ ಹಿಂದೆ ತಮ್ಮ ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡುವ ಒಪ್ಪಂದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅಮೆರಿಕದಿಂದ ಸಿಗುತ್ತಿರುವ ಮಿಲಿಟರಿ ಧನಸಹಾಯದ ಕೊರತೆ ಮತ್ತು ಜಾಗತಿಕ ಒತ್ತಡದಿಂದಾಗಿ ಉಕ್ರೇನ್ ಕೂಡ ಈಗ ಮಣಿಯುವ ಪರಿಸ್ಥಿತಿಗೆ ಬಂದು ತಲುಪಿದೆ ಎನ್ನಲಾಗಿದೆ.

ಇದನ್ನೂ ಓದಿ: Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ

ಕಳೆದ ವರ್ಷ ಅಲಾಸ್ಕಾದ ಆಂಕರೇಜ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆದ ಭೇಟಿಯನ್ನು ನೆನಪಿಸಿಕೊಂಡ ಪುಟಿನ್, ಆ ಮಾತುಕತೆಯೇ ಯುದ್ಧದ ಅಂತ್ಯಕ್ಕೆ ದಾರಿಯಾಗಬಲ್ಲದು ಎಂದಿದ್ದಾರೆ. “ಆಂಕರೇಜ್ ಸಭೆಯಲ್ಲಿ ಚರ್ಚಿಸಲಾದ ರಾಜಿ ಸೂತ್ರಗಳಿಗೆ ರಷ್ಯಾ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಈಗ ಉಕ್ರೇನ್ ಕೂಡ ಅದಕ್ಕೆ ಸಮ್ಮತಿಸಿದರೆ, ಈ ಸಂಘರ್ಷವು ಅತ್ಯಂತ ಸಹಜವಾಗಿ ಮತ್ತು ಶೀಘ್ರವಾಗಿ ಕೊನೆಗೊಳ್ಳುತ್ತದೆ” ಎಂದು ಪುಟಿನ್ ಹೇಳಿದ್ದಾರೆ. ಆದರೆ ಆ ರಾಜಿ ಸೂತ್ರಗಳು ಯಾವುವು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

ಮತ್ತೊಂದೆಡೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ಅಧ್ಯಕ್ಷರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ನೇರ ಮಾತುಕತೆಗೆ ಪ್ರಸ್ತಾಪ ಇಟ್ಟಿದ್ದಾರೆ. “ಈ ಯುದ್ಧವನ್ನು ಕೊನೆಗೊಳಿಸಲು ನಾವು ಮತ್ತು ನೀವು ಮುಖಾಮುಖಿ ಭೇಟಿಯಾಗುವುದು ಅಗತ್ಯ” ಎಂದು ಝೆಲೆನ್ಸ್ಕಿ ಕೋರಿದ್ದಾರೆ. ಅಲ್ಲದೆ, ಯಾವುದೇ ಪ್ರಮುಖ ಮಾತುಕತೆಗೂ ಮುನ್ನ ಸಂಪೂರ್ಣ ಕದನ ವಿರಾಮ ಘೋಷಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 

2022ರಲ್ಲಿ ರಷ್ಯಾದ ಆಕ್ರಮಣದೊಂದಿಗೆ ಆರಂಭವಾದ ಈ ಯುದ್ಧವನ್ನು ನಿಲ್ಲಿಸಲು ಈ ಹಿಂದೆ ಜಿನೀವಾ, ಅಬುಧಾಬಿ ಮತ್ತು ಇಸ್ತಾನ್‌ಬುಲ್‌ನಲ್ಲಿ ನಡೆದ ಮಾತುಕತೆಗಳು ವಿಫಲವಾಗಿದ್ದವು. ಸದ್ಯ ಪುಟಿನ್ ಮತ್ತು ಝೆಲೆನ್ಸ್ಕಿ ಇಬ್ಬರೂ ಮಾತುಕತೆಯ ಸೂಚನೆ ನೀಡಿದ್ದರೂ, ಭೂಪ್ರದೇಶದ ಹಕ್ಕು ಮತ್ತು ಭದ್ರತೆಯ ವಿಚಾರದಲ್ಲಿ ಇಬ್ಬರ ನಡುವೆ ಇರುವ ಭಿನ್ನಾಭಿಪ್ರಾಯಗಳ ಕಾರಣದಿಂದ ಈ ಮಾತುಕತೆ ಫಲಪ್ರದವಾಗಲಿದೆಯೇ ಎಂಬ ಅನುಮಾನ ಮಾತ್ರ ಹಾಗೆಯೇ ಉಳಿದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Fri, 5 June 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!