AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ
ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿImage Credit source: ANI
TV9 Web
| Edited By: |

Updated on: Jan 16, 2023 | 12:14 PM

Share

ಕೈವ್: ರಷ್ಯಾ ಮತ್ತು ಉಕ್ರೇನ್ ನಡುವಿನ (Russia- Ukraine War) ಯುದ್ಧ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಉಕ್ರೇನ್​ನ ದ್ನಿಪ್ರೋ ನಗರದ 9 ಅಂತಸ್ತಿನ ಅಪಾರ್ಟ್​ಮೆಂಟ್ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ (Missile Strike) ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 12 ಮಂದಿಯ ಸ್ಥಿತಿ ಗಂಭೀರವಾಗಿದೆ.

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

ಅಪಾರ್ಟ್​ಮೆಂಟ್​​ನೊಳಗೆ ಸಿಲುಕಿರುವ ಕೆಲವು ಮಂದಿ ಸಹಾಯಕ್ಕಾಗಿ ಜೋರಾಗಿ ಕೂಗುತ್ತಿರುವ ಧ್ವನಿ ಕೇಳಿಸಿತು. ಅವರು ಎಲ್ಲಿದ್ದಾರೋ ಅಲ್ಲಿಗೆ ನಮಗೆ ತಲುಪಲು ಸಾಧ್ಯವಾಗಲಿಲ್ಲ. ಆದರೂ ಇನ್ನೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಕ್ಷಣಾ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Russia Ukraine War: ಸೈನಿಕರ ಸಾವಿಗೆ ಪ್ರತೀಕಾರ, 600 ಉಕ್ರೇನ್ ಸೈನಿಕರನ್ನು ಕೊಂದ ರಷ್ಯಾ

ಭಾರೀ ಘರ್ಷಣೆಗಳ ನಂತರ ತನ್ನ ಪಡೆಗಳು ಸೊಲೆಡಾರ್ ಅನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾ ಹೇಳಿಕೊಂಡಿದ್ದರೂ ಸಹ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ “ಸೋಲೆಡಾರ್ ಪಟ್ಟಣಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಅಪಾರ್ಟ್​ಮೆಂಟ್ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಹತ್ತಾರು ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?