AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 9ರ ಒಳಗೆ ಉಕ್ರೇನ್ ಯುದ್ಧ ಮುಗಿಸುವ ಆತುರ ರಷ್ಯಾಕ್ಕೆ ಇಲ್ಲ: ಪುಟಿನ್ ಆಪ್ತ ಲಾವ್​ರೊವ್

ಉಕ್ರೇನ್​ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮೇ 9ಕ್ಕೆ ಮುಕ್ತಾಯಗೊಳಿಸುವ ಯಾವುದೇ ಉದ್ದೇಶ ನಮಗಿಲ್ಲ ಎಂದು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವ ಸರ್​ಗೆ ಲಾವ್​ರೊವ್ ಹೇಳಿದ್ದಾರೆ.

ಮೇ 9ರ ಒಳಗೆ ಉಕ್ರೇನ್ ಯುದ್ಧ ಮುಗಿಸುವ ಆತುರ ರಷ್ಯಾಕ್ಕೆ ಇಲ್ಲ: ಪುಟಿನ್ ಆಪ್ತ ಲಾವ್​ರೊವ್
ರಷ್ಯಾ ವಿದೇಶಾಂಗ ಇಲಾಖೆ ಸಚಿವ ಸರ್​ಗೆ ಲ್ಯಾವ್​ರೊವ್
TV9 Web
| Edited By: |

Updated on: May 02, 2022 | 2:59 PM

Share

ಮಾಸ್ಕೊ: ಉಕ್ರೇನ್​ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮೇ 9ಕ್ಕೆ ಮುಕ್ತಾಯಗೊಳಿಸುವ ಯಾವುದೇ ಉದ್ದೇಶ ನಮಗಿಲ್ಲ ಎಂದು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವ ಸರ್​ಗೆ ಲಾವ್​ರೊವ್ ಹೇಳಿದ್ದಾರೆ. ವ್ಲಾದಿಮಿರ್ ಪುಟಿನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವ್ಯಾವ್​ರೊವ್ ಅವರ ಹೇಳಿಕೆಯು ಜಗತ್ತಿನ ಗಮನ ಸೆಳೆದಿದೆ. 1945ರ ಮೇ 9ರಂದು ಹಿಟ್ಲರ್ ಆಡಳಿತದ ಜರ್ಮನಿಯನ್ನು ರಷ್ಯಾ ಸೋಲಿಸಿದ ಕುರುಹಾಗಿ ಪ್ರತಿ ವರ್ಷ ಮೇ 9ರಂದು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಬೃಹತ್ ಮಿಲಿಟರಿ ಪೆರೇಡ್ ನಡೆಯುತ್ತದೆ. ಈ ಪೆರೇಡ್​ನಲ್ಲಿ ರಷ್ಯಾ ತನ್ನ ಜಗತ್ತಿಗೆ ತನ್ನ ತೋಳ್ಬಲ ಪ್ರದರ್ಶಿಸುತ್ತದೆ. ಐತಿಹಾಸಿಕವಾಗಿ ರಷ್ಯಾಕ್ಕೆ ಅತಿಮುಖ್ಯವಾಗಿರುವ ಈ ದಿನದಂದೇ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಜಯಗಳಿಸಿದ್ದಾಗಿ ರಷ್ಯಾ ಘೋಷಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ವಿಶ್ಲೇಷಣೆಯನ್ನು ತಳ್ಳಿ ಹಾಕಿರುವ ಲಾವ್​ರೊವ್, ಯುದ್ಧ ಮತ್ತಷ್ಟು ದಿನಗಳ ಕಾಲ ಮುಂದುವರಿಯಬಹುದು ಎಂಬ ಹೊಸ ವಿಶ್ಲೇಷಣೆಗಳನ್ನು ಹುಟ್ಟುಹಾಕುವುದರೊಂದಿಗೆ ಉಕ್ರೇನ್​ನಲ್ಲಿ ರಷ್ಯಾ ನಿಜಕ್ಕೂ ಸಾಧಿಸಬಯಸಿರುವುದು ಏನು ಎಂಬ ಪ್ರಶ್ನೆಯನ್ನೂ ಚರ್ಚೆಗೆ ತಂದಿದೆ.

ವಿಜಯೋತ್ಸವ ಸೇರಿದಂತೆ ಯಾವುದೇ ದಿನಾಂಕಕ್ಕೆ ಅನುಗುಣವಾಗಿ ನಮ್ಮ ಸೇನೆಯು ತನ್ನ ಕಾರ್ಯಾಚರಣೆಗಳನ್ನು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಉಕ್ರೇನ್ ಕಾರ್ಯಾಚರಣೆಯಲ್ಲಿ ರಷ್ಯಾ ತನ್ನ ಸೇನಾ ಸಿಬ್ಬಂದಿ ಮತ್ತು ನಾಗರಿಕ ಸಾವುನೋವು ಕಡಿಮೆ ಮಾಡಲು ಮೊದಲ ಆದ್ಯತೆ ನೀಡುತ್ತದೆ ಎಂದು ಸ್ಪಷ್ಟಪಡಿಸಿದರು. ಪ್ರತಿ ವರ್ಷವೂ ವಿಜಯೋತ್ಸವ ದಿನದಂದು ರಷ್ಯಾದಲ್ಲಿ ಬೃಹತ್ ಮಿಲಿಟರಿ ಪೆರೇಡ್ ನಂತರ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಭಾಷಣೆ ಇರುತ್ತಿತ್ತು. ಆದರೆ ಈ ವರ್ಷದ ಆಚರಣೆಗಳ ವಿವರಗಳು ಇನ್ನೂ ಅಸ್ಪಷ್ಟವಾಗಿವೆ. ಉಕ್ರೇನ್​ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ರಷ್ಯಾ ವ್ಯಾಪಕ ಹಿನ್ನಡೆ ಅನುಭವಿಸಿದೆ. ಉಕ್ರೇನ್​ನಲ್ಲಿ ನಾಜಿವಾದವನ್ನು ಸಂಪೂರ್ಣವಾಗಿ ಹತ್ತಿಕ್ಕಿದ ನಂತರವೇ ಶಾಂತಿ ಸ್ಥಾಪನೆ ಎಂದು ರಷ್ಯಾ ಇದೀಗ ಹೇಳಿಕೆಗಳನ್ನು ನೀಡುತ್ತಿದೆ.

ಪ್ರತಿ ವರ್ಷದಂತೆ ಈ ವರ್ಷವೂ ರಷ್ಯಾ ಮೇ 9ರ ವಿಜಯೋತ್ಸವವನ್ನು ಉತ್ಸಾಹದಿಂದ ಆಚರಿಸುತ್ತದೆ. ರಷ್ಯಾ ದೇಶವನ್ನು ನಾಜಿಗಳ ಹಿಡಿತದಿಂದ ಬಿಡುಗಡೆಗೊಳಿಸಲು ತ್ಯಾಗ ಮಾಡಿದವರನ್ನು ನೆನೆಯುತ್ತೇವೆ. ಅಣ್ವಸ್ತ್ರ ಯುದ್ಧ ನಡೆಯುವುದನ್ನು ತಡೆಯಲು ರಷ್ಯಾ ಎಲ್ಲ ರೀತಿಯಲ್ಲಿಯೂ ಕಾಳಜಿ ವಹಿಸುತ್ತಿದೆ ಎಂದು ಲ್ಯಾವ್​ರೊವ್ ಹೇಳಿದರು. ಉಕ್ರೇನ್ ಮೇಲೆ ಕಳೆದ ಫೆಬ್ರುವರಿ 24ರಂದು ರಷ್ಯಾ ದಾಳಿ ನಡೆಸಿತು. ಅಂದಿನಿಂದ ಇಂದಿನವರೆಗೂ ಮುಂದುವರೆದಿರುವ ಸಂಘರ್ಷದಲ್ಲಿ ಸಾವಿರಾರು ನಾಗರಿಕರು ಮೃತಪಟ್ಟಿದ್ದಾರೆ. ರಷ್ಯಾದ ಹಲವು ಜನರಲ್​ಗಳೂ ಸೇರಿ ದೊಡ್ಡ ಸಂಖ್ಯೆಯಲ್ಲಿ ಸೈನಿಕರು ಸಾವನ್ನಪ್ಪಿದ್ದಾರೆ. ರಷ್ಯಾ ದಾಳಿಯ ನಂತರ ಉಕ್ರೇನ್​ನ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದು, ನೆರೆ ದೇಶಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಶ್ವಸಂಸ್ಥೆ ಮುಖ್ಯಸ್ಥರ ಭೇಟಿಯ ದಿನವೇ ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾದಿಂದ ತೀವ್ರ ದಾಳಿ

ಇದನ್ನೂ ಓದಿ: ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ