Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ

ರಷ್ಯಾ ಹಾಗೂ ಉಕ್ರೇನ್ ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ನಯನಾ ರಾಜೀವ್

Updated on:Jun 05, 2022 | 10:56 AM

ರಷ್ಯಾ (Russia) ಹಾಗೂ ಉಕ್ರೇನ್(Ukraine) ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ರಾಯ್ಟರ್ಸ್ ವರದಿ ಮಾಡಿದ್ದು, ಸ್ಫೋಟದ ಬಳಿಕ ನಗರದ ತುಂಬಾ ಹೊಗೆ ತುಂಬಿಕೊಂಡಿರುವುದಾಗಿ ತಿಳಿಸಿದೆ.

ಉಕ್ರೇನ್ ಮೇಲಿನ ದಾಳಿಯನ್ನು ನಿಲ್ಲಿಸಬೇಕು ಮತ್ತು ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುಎನ್ ಭದ್ರತಾ ಮಂಡಳಿಯಲ್ಲಿ ಮಾಡಲಾಗಿದೆ.

ಸಭೆಯಲ್ಲಿ ನಿರ್ಣಯದ ಪರವಾಗಿ 11 ಮತಗಳು ಬಂದಿದ್ದವು. ರಷ್ಯಾ ಮತ ಹಾಕದೇ ದೂರ ಉಳಿದರೆ, ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಟಸ್ಥವಾಗಿತ್ತು.

ಪರಿಸ್ಥಿತಿಯು ಚಿಂತಾಜನಕವಾಗಿದೆ. ಆಹಾರ, ಇಂಧನ, ಔಷಧಗಳ ಕೊರತೆ ಇದೆ, ನಮ್ಮ ಸೇನೆಯು ಜನರನ್ನು ಕಾಪಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೇಯರ್ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರಿಂದ ನಡೆಯುತ್ತಿರುವ ಆಕ್ರಮಣಕಾರಿ ಯುದ್ಧದ ವಿರುದ್ಧ ಜಿನೀವಾದಲ್ಲಿನ ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ವಿದೇಶಿ ಸಹೋದ್ಯೋಗಿಗಳಿಗೆ ಕಟುವಾದ ಪತ್ರವನ್ನು ಕಳುಹಿಸುವ ಮೊದಲು ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು.

ನನ್ನ ರಾಜತಾಂತ್ರಿಕ ವೃತ್ತಿಜೀವನದ ಇಪ್ಪತ್ತು ವರ್ಷಗಳ ಕಾಲ ನಾನು ನಮ್ಮ ವಿದೇಶಾಂಗ ನೀತಿಯ ವಿಭಿನ್ನ ತಿರುವುಗಳನ್ನು ನೋಡಿದ್ದೇನೆ, ಆದರೆ ಈ ಸಲದಂತೆ ನಾನು ಎಂದಿಗೂ ನನ್ನ ದೇಶದ ಬಗ್ಗೆ ನಾಚಿಕೆಪಡಲಿಲ್ಲ ಎಂದು ಅವರು ರಷ್ಯಾದ ಆಕ್ರಮಣದ ದಿನಾಂಕವನ್ನು ಉಲ್ಲೇಖಿಸಿದ್ದರು.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಪೇಜ್ ರೀಫ್ರೆಶ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Sun, 5 June 22

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ