AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ

ರಷ್ಯಾ ಹಾಗೂ ಉಕ್ರೇನ್ ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ
ಸಾಂದರ್ಭಿಕ ಚಿತ್ರ
TV9 Web
| Updated By: ನಯನಾ ರಾಜೀವ್|

Updated on:Jun 05, 2022 | 10:56 AM

Share

ರಷ್ಯಾ (Russia) ಹಾಗೂ ಉಕ್ರೇನ್(Ukraine) ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ರಾಯ್ಟರ್ಸ್ ವರದಿ ಮಾಡಿದ್ದು, ಸ್ಫೋಟದ ಬಳಿಕ ನಗರದ ತುಂಬಾ ಹೊಗೆ ತುಂಬಿಕೊಂಡಿರುವುದಾಗಿ ತಿಳಿಸಿದೆ.

ಉಕ್ರೇನ್ ಮೇಲಿನ ದಾಳಿಯನ್ನು ನಿಲ್ಲಿಸಬೇಕು ಮತ್ತು ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುಎನ್ ಭದ್ರತಾ ಮಂಡಳಿಯಲ್ಲಿ ಮಾಡಲಾಗಿದೆ.

ಸಭೆಯಲ್ಲಿ ನಿರ್ಣಯದ ಪರವಾಗಿ 11 ಮತಗಳು ಬಂದಿದ್ದವು. ರಷ್ಯಾ ಮತ ಹಾಕದೇ ದೂರ ಉಳಿದರೆ, ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಟಸ್ಥವಾಗಿತ್ತು.

ಪರಿಸ್ಥಿತಿಯು ಚಿಂತಾಜನಕವಾಗಿದೆ. ಆಹಾರ, ಇಂಧನ, ಔಷಧಗಳ ಕೊರತೆ ಇದೆ, ನಮ್ಮ ಸೇನೆಯು ಜನರನ್ನು ಕಾಪಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೇಯರ್ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರಿಂದ ನಡೆಯುತ್ತಿರುವ ಆಕ್ರಮಣಕಾರಿ ಯುದ್ಧದ ವಿರುದ್ಧ ಜಿನೀವಾದಲ್ಲಿನ ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ವಿದೇಶಿ ಸಹೋದ್ಯೋಗಿಗಳಿಗೆ ಕಟುವಾದ ಪತ್ರವನ್ನು ಕಳುಹಿಸುವ ಮೊದಲು ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು.

ನನ್ನ ರಾಜತಾಂತ್ರಿಕ ವೃತ್ತಿಜೀವನದ ಇಪ್ಪತ್ತು ವರ್ಷಗಳ ಕಾಲ ನಾನು ನಮ್ಮ ವಿದೇಶಾಂಗ ನೀತಿಯ ವಿಭಿನ್ನ ತಿರುವುಗಳನ್ನು ನೋಡಿದ್ದೇನೆ, ಆದರೆ ಈ ಸಲದಂತೆ ನಾನು ಎಂದಿಗೂ ನನ್ನ ದೇಶದ ಬಗ್ಗೆ ನಾಚಿಕೆಪಡಲಿಲ್ಲ ಎಂದು ಅವರು ರಷ್ಯಾದ ಆಕ್ರಮಣದ ದಿನಾಂಕವನ್ನು ಉಲ್ಲೇಖಿಸಿದ್ದರು.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಪೇಜ್ ರೀಫ್ರೆಶ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Sun, 5 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ