AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ

ರಷ್ಯಾ ಹಾಗೂ ಉಕ್ರೇನ್ ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 05, 2022 | 10:56 AM

Share

ರಷ್ಯಾ (Russia) ಹಾಗೂ ಉಕ್ರೇನ್(Ukraine) ನಡುವೆ ಸಮರ ಮುಂದುವರೆದಿದ್ದು, ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್​ ಸ್ಪೋಟದ ಸದ್ದು ಕೇಳಿಬಂದಿದೆ. ಈ ಕುರಿತು ಮೇಯರ್ ವಿಟಾಲಿ ಕ್ಲಿಶ್ಚಿಕೋ ಮಾಹಿತಿ ನೀಡಿದ್ದು, ಡಾರ್ನಿಟ್ಸ್ಕಿ ಹಾಗೂ ಡ್ನಿಪ್ರೋವ್ಸ್ಕಿ ಜಿಲ್ಲೆಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ರಾಯ್ಟರ್ಸ್ ವರದಿ ಮಾಡಿದ್ದು, ಸ್ಫೋಟದ ಬಳಿಕ ನಗರದ ತುಂಬಾ ಹೊಗೆ ತುಂಬಿಕೊಂಡಿರುವುದಾಗಿ ತಿಳಿಸಿದೆ.

ಉಕ್ರೇನ್ ಮೇಲಿನ ದಾಳಿಯನ್ನು ನಿಲ್ಲಿಸಬೇಕು ಮತ್ತು ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುಎನ್ ಭದ್ರತಾ ಮಂಡಳಿಯಲ್ಲಿ ಮಾಡಲಾಗಿದೆ.

ಸಭೆಯಲ್ಲಿ ನಿರ್ಣಯದ ಪರವಾಗಿ 11 ಮತಗಳು ಬಂದಿದ್ದವು. ರಷ್ಯಾ ಮತ ಹಾಕದೇ ದೂರ ಉಳಿದರೆ, ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಟಸ್ಥವಾಗಿತ್ತು.

ಪರಿಸ್ಥಿತಿಯು ಚಿಂತಾಜನಕವಾಗಿದೆ. ಆಹಾರ, ಇಂಧನ, ಔಷಧಗಳ ಕೊರತೆ ಇದೆ, ನಮ್ಮ ಸೇನೆಯು ಜನರನ್ನು ಕಾಪಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೇಯರ್ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರಿಂದ ನಡೆಯುತ್ತಿರುವ ಆಕ್ರಮಣಕಾರಿ ಯುದ್ಧದ ವಿರುದ್ಧ ಜಿನೀವಾದಲ್ಲಿನ ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ವಿದೇಶಿ ಸಹೋದ್ಯೋಗಿಗಳಿಗೆ ಕಟುವಾದ ಪತ್ರವನ್ನು ಕಳುಹಿಸುವ ಮೊದಲು ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು.

ನನ್ನ ರಾಜತಾಂತ್ರಿಕ ವೃತ್ತಿಜೀವನದ ಇಪ್ಪತ್ತು ವರ್ಷಗಳ ಕಾಲ ನಾನು ನಮ್ಮ ವಿದೇಶಾಂಗ ನೀತಿಯ ವಿಭಿನ್ನ ತಿರುವುಗಳನ್ನು ನೋಡಿದ್ದೇನೆ, ಆದರೆ ಈ ಸಲದಂತೆ ನಾನು ಎಂದಿಗೂ ನನ್ನ ದೇಶದ ಬಗ್ಗೆ ನಾಚಿಕೆಪಡಲಿಲ್ಲ ಎಂದು ಅವರು ರಷ್ಯಾದ ಆಕ್ರಮಣದ ದಿನಾಂಕವನ್ನು ಉಲ್ಲೇಖಿಸಿದ್ದರು.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಪೇಜ್ ರೀಫ್ರೆಶ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Sun, 5 June 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್