AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತ ತಪ್ಪು ಮಾಡಿದರೆ ಬುದ್ಧಿ ಹೇಳಬೇಕು; ರಷ್ಯಾ ಕುರಿತು ವಿಶ್ವ ಸಂಸ್ಥೆ ನಿರ್ಣಯದಿಂದ ಭಾರತ ದೂರ ಉಳಿದಿದ್ದಕ್ಕೆ ಕಾಂಗ್ರೆಸ್ ಅಸಮಾಧಾನ

ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ ಎಂಬುದು ಸತ್ಯ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಅವರನ್ನು ಸರಿಪಡಿಸಬೇಕು ಎಂದು ಮನೀಶ್ ತಿವಾರಿ ಹೇಳಿದ್ದಾರೆ.

ಸ್ನೇಹಿತ ತಪ್ಪು ಮಾಡಿದರೆ ಬುದ್ಧಿ ಹೇಳಬೇಕು; ರಷ್ಯಾ ಕುರಿತು ವಿಶ್ವ ಸಂಸ್ಥೆ ನಿರ್ಣಯದಿಂದ ಭಾರತ ದೂರ ಉಳಿದಿದ್ದಕ್ಕೆ ಕಾಂಗ್ರೆಸ್ ಅಸಮಾಧಾನ
ಮನೀಶ್ ತಿವಾರಿ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 26, 2022 | 4:14 PM

Share

ನವದೆಹಲಿ: ಉಕ್ರೇನ್ (Ukraine) ವಿರುದ್ಧ ರಷ್ಯಾದ ದಾಳಿಯನ್ನು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC)  ನಿರ್ಣಯದಿಂದ ದೂರವಿರಲು ಭಾರತ ನಿರ್ಧರಿಸಿರುವುದನ್ನು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಟೀಕಿಸಿದ್ದಾರೆ. “ಸ್ನೇಹಿತರು ತಪ್ಪು ಮಾಡಿದರೆ, ನಾವು ಅವರನ್ನು ಸರಿಪಡಿಸಬೇಕು” ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ಇತರ ಎರಡು ದೇಶಗಳು ಶುಕ್ರವಾರ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ವಿರುದ್ಧದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ನಿರ್ಣಯದಿಂದ ದೂರವಿದ್ದವು. ಕೌನ್ಸಿಲ್‌ನ 15 ಸದಸ್ಯರಲ್ಲಿ, ಹನ್ನೊಂದು ಮಂದಿ ನಿರ್ಣಯದ ಪರವಾಗಿ ಮತ ಚಲಾಯಿಸಿದರು ಮತ್ತು ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಈ ನಿರ್ಣಯದಿಂದ ದೂರ ಉಳಿದವು. ಐದು ರಾಷ್ಟ್ರಗಳಾದ ಅಮೆರಿಕಾ, ಇಂಗ್ಲೆಂಡ್, ರಷ್ಯಾ, ಚೀನಾ ಮತ್ತು ಫ್ರಾನ್ಸ್ ಕೌನ್ಸಿಲ್‌ನ ಖಾಯಂ ಸದಸ್ಯರಾಗಿದ್ದಾರೆ ಮತ್ತು ಈ ರಾಷ್ಟ್ರಗಳು ವೀಟೋ ಅಧಿಕಾರವನ್ನು ಹೊಂದಿವೆ. ಭಾರತವು ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿದೆ ಮತ್ತು ಅದರ ಎರಡು ವರ್ಷಗಳ ಅವಧಿಯು ಈ ವರ್ಷ ಮುಕ್ತಾಯಗೊಳ್ಳುತ್ತದೆ.

ಭಾರತದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮನೀಶ್ ತಿವಾರಿ, “ಭಾರತದ ಅಲಿಪ್ತ ಚಳವಳಿ (NAM) ನೀತಿಯನ್ನು 1991ರಿಂದ ಕ್ರಮೇಣ ಕೊನೆಗೊಳಿಸಲಾಗಿದೆ. ಇಂದು ಭಾರತವು ಅದೇ ನೀತಿಗೆ ಮರಳಲು ಯೋಚಿಸಿದರೆ ಅದು ತಪ್ಪಾಗುತ್ತದೆ” ಎಂದು ಹೇಳಿದ್ದಾರೆ.

ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ ಎಂಬುದು ಸತ್ಯ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಅವರನ್ನು ಸರಿಪಡಿಸಬೇಕು. ಅದು ಬಿಟ್ಟು ತಪ್ಪು ಮಾಡಿದಾಗಲೂ ಸ್ನೇಹಿತನ ಪರವಾಗಿ ನಿಂತರು ಅದು ಮತ್ತೊಂದು ತಪ್ಪಾಗುತ್ತದೆ. ಯುಎನ್​ಎಸ್​ಸಿ ನಿರ್ಣಯದಲ್ಲಿ ಭಾರತ ಉಕ್ರೇನ್ ಪರವಾಗಿ ಮತ ಹಾಕಬೇಕಿತ್ತು ಎಂದು ಮನೀಶ್ ತಿವಾರಿ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಲ್ಲಿ ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗಡಿಯೊಳಗೆ ಉಕ್ರೇನ್‌ನ ಸಾರ್ವಭೌಮತ್ವ, ಸ್ವಾತಂತ್ರ್ಯ, ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಸದಸ್ಯರ ಬದ್ಧತೆಯನ್ನು ಪುನರುಚ್ಚರಿಸಲಾಗಿತ್ತು ಮತ್ತು ಮಿನ್ಸ್ಕ್ ಒಪ್ಪಂದಗಳಿಗೆ ಬದ್ಧವಾಗಿರಲು ಪಕ್ಷಗಳಿಗೆ ಕರೆ ನೀಡಲಾಗಿತ್ತು.

ನಿರ್ಣಯದ ಪರ ಮತ ಹಾಕಿದ ದೇಶಗಳು: ಫ್ರಾನ್ಸ್, ಬ್ರಿಟನ್, ಅಮೇರಿಕಾ, ಅಲ್ಬೇನಿಯಾ, ಬ್ರೆಜಿಲ್, ಗ್ಯಾಬೊನ್, ಘಾನಾ, ಐರ್ಲೆಂಡ್, ಕೀನ್ಯಾ, ಮೆಕ್ಸಿಕೋ ಮತ್ತು ನಾರ್ವೆ ಈ ನಿರ್ಣಯವನ್ನು ಅಂಗೀಕರಿಸಲು ಮತ ಹಾಕಿದ ದೇಶಗಳಾಗಿವೆ.

ಮತದಾನದಿಂದ ದೂರ ಉಳಿದ ದೇಶಗಳು: ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಮತದಾನದಿಂದ ದೂರವುಳಿದವು. ವಿಶ್ವಸಂಸ್ಥೆಯ ಚೀನಾದ ಖಾಯಂ ಪ್ರತಿನಿಧಿ ಜಾಂಗ್ ಜುನ್ ಅವರು ಕೌನ್ಸಿಲ್‌ಗೆ ತಿಳಿಸುತ್ತಾ, ‘‘ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು. ಮತ್ತು ವಿಶ್ವಸಂಸ್ಥೆಯ ಚಾರ್ಟರ್‌ನ ಉದ್ದೇಶಗಳು ಮತ್ತು ತತ್ವಗಳನ್ನು ಎತ್ತಿಹಿಡಿಯಬೇಕು’’ ಎಂದು ಹೇಳಿದರು.

ಇದನ್ನೂ ಓದಿ: ನಿಮಗಿದು ಗೊತ್ತೇ?; ಭಾರತದ ಸಹಾಯ ಬೇಡುತ್ತಿರುವ ಇದೇ ಉಕ್ರೇನ್ ವಿಶ್ವಸಂಸ್ಥೆಯಲ್ಲಿ 1998ರ ಅಣ್ವಸ್ತ್ರ ಪರೀಕ್ಷೆಯನ್ನು ಖಂಡಿಸಿತ್ತು

Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?