Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ

Russia Ukraine war | Russia declares Ceasefire: ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.

Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Follow us
TV9 Web
| Updated By: shivaprasad.hs

Updated on:Mar 05, 2022 | 12:29 PM

ನಾಗರಿಕರಿಗೆ ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು (Russia declares ceasefire) ಘೋಷಿಸಿವೆ. ಈ ಕುರಿತು ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್ ವರದಿಯನ್ನು ಎಎನ್​ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ. ಗ್ರೀನ್​ವಿಚ್ ಮೀನ್ ಟೈಮ್ ಸಮಯ 6ರಿಂದ (ಭಾರತೀಯ ಕಾಲಮಾನ ಬೆಳಗ್ಗೆ 11.30) ಕದನ ವಿರಾಮ ಘೋಷಿಸುವುದಾಗಿ ರಷ್ಯಾ ತಿಳಿಸಿದೆ. ವರದಿಗಳ ಪ್ರಕಾರ ಉಕ್ರೇನ್‌ನ ಮರಿಯುಪೋಲ್, ವೊಲ್ನೋವಾಖಾ ನಿವಾಸಿಗಳಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲಾಗುವುದು. ಉಕ್ರೇನ್ ಮೇಲೆ ದಾಳಿ ಮಾಡಿ, ಪ್ರಮುಖ ನಗರಗಳನ್ನು ವಶಪಡಿಸಿಕೊಂಡು ರಾಜಧಾನಿ ಕೀವ್ ನಗರಕ್ಕೆ ಮುತ್ತಿಗೆ ಹಾಕಿರುವ ರಷ್ಯಾ ಸೇನೆ ಇಂದು ಮುಂಜಾನೆ 6 ಗಂಟೆಯಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.

ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ದಾಳಿ ಮಾಡಿದ್ದ ರಷ್ಯಾ ಇದ್ದಕ್ಕಿದ್ದಂತೆ ಕದನ ವಿರಾಮ ಏಕೆ ಘೋಷಿಸಿತು ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ. ಭಾರತೀಯ ಕಾಲಮಾನ ಬೆಳಿಗ್ಗೆ 11.30ರಿಂದ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದಿದೆ. ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ವಿದೇಶಿಯರ ರಕ್ಷಣೆಗಾಗಿ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

ಕೀವ್ ಮತ್ತು ಖಾರ್ಕಿವ್ ಸೇರಿದಂತೆ ಉಕ್ರೇನ್​ನ ಹಲವು ಪ್ರಮುಖ ನಗರಗಳಲ್ಲಿ ಸಿಲುಕಿರುವ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಹಿಂದಿರುಗಲು ಇದರಿಂದ ತುಸು ಅವಕಾಶ ಸಿಕ್ಕಿದೆ. ಆದರೆ ಭಾರತದ ವಿಮಾನಗಳಿಗೆ ಉಕ್ರೇನ್ ವಾಯುಗಡಿ ಪ್ರವೇಶಿಸಲು ಅವಕಾಶ ಸಿಗುತ್ತದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ಎಎನ್​ಐ ಮಾಹಿತಿ ಇಲ್ಲಿದೆ:

ಉಕ್ರೇನ್​ನ ವಿವಿಧ ಪ್ರದೇಶಗಳಲ್ಲಿ ಇನ್ನೂ 2000 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಇದೀಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಅಕ್ಕಪಕ್ಕದ ದೇಶಗಳಲ್ಲಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರ ನಿಯೋಜಿಸಲು ಮುಂದಾಗಿದೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.

ಭಾರತೀಯರಿಗೆ ರಷ್ಯಾ ದೇಶಕ್ಕೆ ಪ್ರವೇಶ ಕಲ್ಪಿಸಲು ರಷ್ಯಾ ಆಡಳಿತ ಸಮ್ಮತಿಸಿದ್ದು, ಸಂಘರ್ಷ ತೀವ್ರವಾಗಿರುವ ಪೂರ್ವ ಗಡಿಗೆ ತನ್ನ ಬಸ್​ಗಳನ್ನು ಕಳಿಸಿಕೊಟ್ಟಿದೆ. ರಷ್ಯಾದ ವಿಮಾನಗಳನ್ನೂ ಇದೀಗ ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲು ಚಿಂತನೆ ನಡೆದಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಇನ್ನೂ ಉಕ್ರೇನ್​ನಲ್ಲಿರುವ ಭಾರತದ ಮಕ್ಕಳು ಶೀಘ್ರ ಸ್ವದೇಶಕ್ಕೆ ಮರಳಲಿದ್ದಾರೆ. ರಷ್ಯಾ ಸಹಕರಿಸಲು ಸಿದ್ಧವಿರುವ ವಿಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿರುವ ರಷ್ಯಾ ರಾಯಭಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Russia Ukraine War Live: ಉ್ರಕೇನ್​ನಲ್ಲಿ ಕದನ ವಿರಾಮ ಘೋಷಣೆ ಮಾಡಿದ ರಷ್ಯಾ

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

Published On - 12:17 pm, Sat, 5 March 22

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್