Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ

Russia Ukraine war | Russia declares Ceasefire: ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.

Breaking: ಮಾನವೀಯ ಕಾರಿಡಾರ್​ಗಳನ್ನು ತೆರೆಯಲು ಕದನ ವಿರಾಮ ಘೋಷಿಸಿದ ರಷ್ಯಾ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Follow us
| Updated By: shivaprasad.hs

Updated on:Mar 05, 2022 | 12:29 PM

ನಾಗರಿಕರಿಗೆ ಮಾನವೀಯ ಕಾರಿಡಾರ್​ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು (Russia declares ceasefire) ಘೋಷಿಸಿವೆ. ಈ ಕುರಿತು ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್ ವರದಿಯನ್ನು ಎಎನ್​ಐ ಸುದ್ದಿಸಂಸ್ಥೆ ಉಲ್ಲೇಖಿಸಿದೆ. ಗ್ರೀನ್​ವಿಚ್ ಮೀನ್ ಟೈಮ್ ಸಮಯ 6ರಿಂದ (ಭಾರತೀಯ ಕಾಲಮಾನ ಬೆಳಗ್ಗೆ 11.30) ಕದನ ವಿರಾಮ ಘೋಷಿಸುವುದಾಗಿ ರಷ್ಯಾ ತಿಳಿಸಿದೆ. ವರದಿಗಳ ಪ್ರಕಾರ ಉಕ್ರೇನ್‌ನ ಮರಿಯುಪೋಲ್, ವೊಲ್ನೋವಾಖಾ ನಿವಾಸಿಗಳಿಗೆ ಮಾನವೀಯ ಕಾರಿಡಾರ್‌ಗಳನ್ನು ತೆರೆಯಲಾಗುವುದು. ಉಕ್ರೇನ್ ಮೇಲೆ ದಾಳಿ ಮಾಡಿ, ಪ್ರಮುಖ ನಗರಗಳನ್ನು ವಶಪಡಿಸಿಕೊಂಡು ರಾಜಧಾನಿ ಕೀವ್ ನಗರಕ್ಕೆ ಮುತ್ತಿಗೆ ಹಾಕಿರುವ ರಷ್ಯಾ ಸೇನೆ ಇಂದು ಮುಂಜಾನೆ 6 ಗಂಟೆಯಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.

ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ದಾಳಿ ಮಾಡಿದ್ದ ರಷ್ಯಾ ಇದ್ದಕ್ಕಿದ್ದಂತೆ ಕದನ ವಿರಾಮ ಏಕೆ ಘೋಷಿಸಿತು ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ. ಭಾರತೀಯ ಕಾಲಮಾನ ಬೆಳಿಗ್ಗೆ 11.30ರಿಂದ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದಿದೆ. ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ವಿದೇಶಿಯರ ರಕ್ಷಣೆಗಾಗಿ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

ಕೀವ್ ಮತ್ತು ಖಾರ್ಕಿವ್ ಸೇರಿದಂತೆ ಉಕ್ರೇನ್​ನ ಹಲವು ಪ್ರಮುಖ ನಗರಗಳಲ್ಲಿ ಸಿಲುಕಿರುವ ಭಾರತ ಸೇರಿದಂತೆ ವಿವಿಧ ದೇಶಗಳ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ಹಿಂದಿರುಗಲು ಇದರಿಂದ ತುಸು ಅವಕಾಶ ಸಿಕ್ಕಿದೆ. ಆದರೆ ಭಾರತದ ವಿಮಾನಗಳಿಗೆ ಉಕ್ರೇನ್ ವಾಯುಗಡಿ ಪ್ರವೇಶಿಸಲು ಅವಕಾಶ ಸಿಗುತ್ತದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತು ಎಎನ್​ಐ ಮಾಹಿತಿ ಇಲ್ಲಿದೆ:

ಉಕ್ರೇನ್​ನ ವಿವಿಧ ಪ್ರದೇಶಗಳಲ್ಲಿ ಇನ್ನೂ 2000 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಇದೀಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಅಕ್ಕಪಕ್ಕದ ದೇಶಗಳಲ್ಲಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರ ನಿಯೋಜಿಸಲು ಮುಂದಾಗಿದೆ. ರಷ್ಯಾ ಗಡಿಯ ಮೂಲಕ ರಷ್ಯಾದ ದೇಶದ ಸಮೀಪದ ವಿಮಾನ ನಿಲ್ದಾಣಕ್ಕೆ ಭಾರತೀಯರನ್ನು ಅಲ್ಲಿಂದ ಸ್ವದೇಶಕ್ಕೆ ಕರೆತರುವ ಬಗ್ಗೆಯೂ ಪ್ರಯತ್ನಗಳು ತೀವ್ರಗೊಂಡಿವೆ.

ಭಾರತೀಯರಿಗೆ ರಷ್ಯಾ ದೇಶಕ್ಕೆ ಪ್ರವೇಶ ಕಲ್ಪಿಸಲು ರಷ್ಯಾ ಆಡಳಿತ ಸಮ್ಮತಿಸಿದ್ದು, ಸಂಘರ್ಷ ತೀವ್ರವಾಗಿರುವ ಪೂರ್ವ ಗಡಿಗೆ ತನ್ನ ಬಸ್​ಗಳನ್ನು ಕಳಿಸಿಕೊಟ್ಟಿದೆ. ರಷ್ಯಾದ ವಿಮಾನಗಳನ್ನೂ ಇದೀಗ ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲು ಚಿಂತನೆ ನಡೆದಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಇನ್ನೂ ಉಕ್ರೇನ್​ನಲ್ಲಿರುವ ಭಾರತದ ಮಕ್ಕಳು ಶೀಘ್ರ ಸ್ವದೇಶಕ್ಕೆ ಮರಳಲಿದ್ದಾರೆ. ರಷ್ಯಾ ಸಹಕರಿಸಲು ಸಿದ್ಧವಿರುವ ವಿಚಾರದ ಬಗ್ಗೆ ವಿಶ್ವಸಂಸ್ಥೆಯಲ್ಲಿರುವ ರಷ್ಯಾ ರಾಯಭಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Russia Ukraine War Live: ಉ್ರಕೇನ್​ನಲ್ಲಿ ಕದನ ವಿರಾಮ ಘೋಷಣೆ ಮಾಡಿದ ರಷ್ಯಾ

US vs Russia: ಅಮೆರಿಕ ಸೆನೆಟ್​ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್​ಸ್ಕಿ ಭಾಷಣ

Published On - 12:17 pm, Sat, 5 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ