AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine Conflict: ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ ಎಂದ ಝೆಲೆನ್​ಸ್ಕಿ: ರಷ್ಯಾ ಉಕ್ರೇನ್ ಸಂಘರ್ಷದ 10 ಪ್ರಮುಖ ಬೆಳವಣಿಗೆಗಳಿವು

ರಷ್ಯಾ ಪಡೆಗಳು ಏಕಾಏಕಿ ಗ್ರೆನೇಡ್ ಮತ್ತು ಗುಂಡಿನ ದಾಳಿ ಆರಂಭಿಸಿದ್ದರಿಂದ ಪ್ರತಿಭಟನಾಕಾರರು ಹೆದರಿ ಓಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

Russia Ukraine Conflict: ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ ಎಂದ ಝೆಲೆನ್​ಸ್ಕಿ: ರಷ್ಯಾ ಉಕ್ರೇನ್ ಸಂಘರ್ಷದ 10 ಪ್ರಮುಖ ಬೆಳವಣಿಗೆಗಳಿವು
ಉಕ್ರೇನ್ ರಾಜಧಾನಿ ಕೀವ್ ನಗರದ ಮಾಲ್ ಮೇಲೆ ರಷ್ಯಾದ ಕ್ಷಿಪಣಿಗಳು ಅಪ್ಪಳಿಸಿವೆ.
TV9 Web
| Edited By: |

Updated on:Mar 22, 2022 | 8:54 AM

Share

ರಷ್ಯಾ ಆಕ್ರಮಿತ ನಗರ ಖೆರ್​ಸೊನ್​ನಲ್ಲಿ ಆಯುಧವೇ ಇಲ್ಲದೆ ಬೀದಿಗಿಳಿದು ಪ್ರತಿಭಟಿಸುತ್ತಿರುವ ಜನರ ಮೇಲೆ ರಷ್ಯಾ ಪಡೆಗಳು ಗುಂಡು ಹಾರಿಸಿವೆ ಎಂದು ಉಕ್ರೇನ್ ನಾಯಕರು ಹೇಳಿದ್ದಾರೆ. ಪ್ರತಿಭಟನಾಕಾರರ ಮೇಲೆ ರಷ್ಯಾ ಪಡೆಗಳು ಏಕಾಏಕಿ ಗ್ರೆನೇಡ್ ಮತ್ತು ಗುಂಡಿನ ದಾಳಿ ಆರಂಭಿಸಿದ್ದರಿಂದ ಪ್ರತಿಭಟನಾಕಾರರು ಹೆದರಿ ಓಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮರಿಯುಪೋಲ್ ಮತ್ತು ಕೀವ್ ನಗರಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ರಷ್ಯಾ ಅವಿರತ ಪ್ರಯತ್ನಿಸುತ್ತಿದೆ. ವಾಯುದಾಳಿ ತೀವ್ರಗೊಂಡಿದೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಈವರೆಗಿನ ಬೆಳವಣಿಗಳ 10 ಅಂಶಗಳು ಇಲ್ಲಿದೆ.

  1. ನಾಗರಿಕರ ಮೇಲೆ ರಷ್ಯಾ ದಾಳಿ: ನಾಗರಿಕರನ್ನು ನಗರಗಳಿಂದ ತೆರವುಗೊಳಿಸಲು ರೂಪಿಸಿರುವ ಮಾನವೀಯ ಕಾರಿಡಾರ್‌ಗಳ ಮೇಲೆಯೂ ರಷ್ಯಾ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ನಾಗರಿಕರು, ಮಕ್ಕಳಿಗೆ ಗಾಯವಾಗಿದೆ. ದಾಳಿಯ ನಡುವೆಯೂ 3 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಉಕ್ರೇನ್ ಸರ್ಕಾರ ಮಾಹಿತಿ ನೀಡಿದೆ.
  2. ರಾಸಾಯನಿಕ ಅಸ್ತ್ರ ಬಳಕೆ ಆತಂಕ: ಉಕ್ರೇನ್ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಕೆ ಮಾಡಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕಾಯುತ್ತಿದ್ದಾರೆ ಎಂದು ರಷ್ಯಾ ಅಧ್ಯಕ್ಷರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗಂಭೀರ ಆರೋಪ ಮಾಡಿದ್ದಾರೆ.
  3. ನ್ಯಾಟೊಗೆ ರಷ್ಯಾ ಕಂಡರೆ ಭಯ: ರಷ್ಯಾ ದೇಶವನ್ನು ನೋಡಿದರೆ ನ್ಯಾಟೊಗೆ ಭಯ. ಉಕ್ರೇನ್ ದೇಶವನ್ನು ನ್ಯಾಟೊದ ಸದಸ್ಯ ದೇಶವೆಂದು ಸ್ವೀಕರಿಸಿ ಅಥವಾ ಉಕ್ರೇನ್ ಸದಸ್ಯ ರಾಷ್ಟ್ರವಲ್ಲ ಎಂದು ಬಹಿರಂಗವಾಗಿ ಘೋಷಿಸಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಸವಾಲು ಹಾಕಿದ್ದಾರೆ.
  4. ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ: ಯುದ್ಧ ವಿರೋಧಿಸಿ ನಾಗರಿಕರು ನಡೆಸುತ್ತಿರುವ ಪ್ರತಿಭಟನೆಗಳನ್ನು ರಷ್ಯಾ ಸೇನೆ ಉಗ್ರವಾಗಿ ಹತ್ತಿಕ್ಕುತ್ತಿದೆ. ಖೆರ್ಸನ್ ನಗರದಲ್ಲಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ಸ್ಟೆನ್ ಗನ್, ಗ್ರೆನೇಡ್, ಗುಂಡಿನ ದಾಳಿ ನಡೆದಿದೆ.
  5. ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯ: ರಷ್ಯಾ ವಿಚಾರದಲ್ಲಿ ಉಕ್ರೇನ್​ನ ಮುಂದಿನ ನಡೆ ಹೇಗಿರಬೇಕು ಎನ್ನುವ ಬಗ್ಗೆ ಸ್ಪಷ್ಟ ನಿಲುವು ತಳೆಯಲು ಜನಾಭಿಪ್ರಾಯ ಸಂಗ್ರಹ ಅಗತ್ಯ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಹೇಳಿದ್ದಾರೆ. ಈ ನಡುವೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ನೇರ ಭೇಟಿ ಮಾಡುವ ಇಚ್ಛೆಯನ್ನು ಝೆಲೆನ್​ಸ್ಕಿ ವ್ಯಕ್ತಪಡಿಸಿದ್ದಾರೆ.
  6. ವಿಮೋಚನೆಯೋ ದೌರ್ಜನ್ಯವೋ: ಸುಮಾರು 3 ಲಕ್ಷ ಜನಸಂಖ್ಯೆಯ ಖೆರ್ಸೊನ್ ನಗರವು ರಷ್ಯಾ ದಾಳಿಯ ಆರಂಭದ ದಿನಗಳಲ್ಲಿಯೇ ಸೋತು ಶರಣಾಗಿತ್ತು. ಮಿಲಿಟರಿ ಗೆಲುವನ್ನು ರಷ್ಯಾ ವಿಮೋಚನೆ ಎಂದು ಬಣ್ಣಿಸಿತ್ತು. ಆದರೆ ಈ ನಗರದಲ್ಲಿ ಆರಂಭವಾಗಿದ್ದ ಯುದ್ಧವಿರೋಧಿ ಪ್ರತಿಭಟನೆಗಳು ರಷ್ಯಾದ ಹಚ್ಚುತ್ತಿದ್ದ ವಿಮೋಚನೆಯ ಹಣೆಪಟ್ಟಿಯನ್ನು ಜಗತ್ತಿನ ಕಣ್ಣಿನಲ್ಲಿ ಪ್ರಶ್ನಿಸಿತ್ತು.
  7. ಶರಣಾಗತಿ ಸಾಧ್ಯವಿಲ್ಲ: ಉಕ್ರೇನ್ ಎಂದಿಗೂ ರಷ್ಯಾಕ್ಕೆ ಸೋತು ಶರಣಾಗುವುದಿಲ್ಲ. ಬೇಕಿದ್ದರೆ ನಮ್ಮ ದೇಶವನ್ನು ಸಂಪರ್ಣ ನಾಶಪಡಿಸಿ. ಎಂದಿಗೂ ನಮ್ಮ ರಾಜಧಾನಿ ಕೀವ್ ನಗರವನ್ನು ರಷ್ಯಾಕ್ಕೆ ಒಪ್ಪಿಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ ಸ್ಪಷ್ಟಪಡಿಸಿದ್ದಾರೆ.
  8. ರಾಜಧಾನಿ ಮೇಲೆ ತೀವ್ರ ದಾಳಿ: ಕೀವ್ ನಗರದ ಹೊಸಿಲಲ್ಲಿರುವ ರಷ್ಯಾ ಪಡೆಗಳು ದಾಳಿಯನ್ನು ತೀವ್ರಗೊಳಿಸಿವೆ. ನಗರದ ಕಟ್ಟಡಗಳ ಮೇಲೆ ಕ್ಷಿಪಣಿಗಳು ಅಪ್ಪಳಿಸುತ್ತಿವೆ. ವಾಣಿಜ್ಯ ಸಂಕೀರ್ಣ (ಮಾಲ್) ಒಂದನ್ನು ಕ್ಷಿಪಣಿ ದಾಳಿಯಲ್ಲಿ ಧ್ವಂಸ ಮಾಡಲಾಗಿದೆ. ಈ ಕಟ್ಟಡದಲ್ಲಿ ಯುದ್ಧೋಪಕರಣಗಳನ್ನು ಸಂಗ್ರಹಿಸಿ ಇರಿಸಲಾಗಿತ್ತು ಎಂದು ರಷ್ಯಾ ಆರೋಪಿಸಿದೆ.
  9. ದಿಗ್ಬಂಧನದಲ್ಲಿ ಮಾರಿಯುಪೋಲ್: ದಕ್ಷಿಣ ಉಕ್ರೇನ್​ನ ಬಂದರು ನಗರಿ ಮಾರಿಯುಪೋಲ್​ ಮೇಲೆ ರಷ್ಯಾ ದಾಳಿಯನ್ನು ತೀವ್ರಗೊಳಿಸಿದೆ. ನೀರು, ವಿದ್ಯುತ್ ಇಲ್ಲದ ಸಂಕಷ್ಟ ಸ್ಥಿತಿಯಲ್ಲಿರುವ ಅಲ್ಲಿನ ನಾಗರಿಕರಿಗೆ ಇದೀಗ ಆಹಾರದ ಕೊರತೆ ಎದುರಾಗಿದೆ. ನಗರವನ್ನು ದಿಗ್ಬಂಧನದಲ್ಲಿ ಇರಿಸುವ ರಷ್ಯಾದ ಕ್ರಮವನ್ನು ಐರೋಪ್ಯ ಒಕ್ಕೂಟವು ‘ಯುದ್ಧಾಪರಾಧ’ ಎಂದು ಘೋಷಿಸಿದೆ. ಉಕ್ರೇನ್​ ದೇಶವನ್ನು ಅಂಕೆಯಲ್ಲಿ ಇಡಬೇಕು ಎನ್ನುವ ರಷ್ಯಾದ ಉದ್ದೇಶ ಈಡೇರಬೇಕಾದರೆ ಮಾರಿಯುಪೋಲ್ ನಗರವನ್ನು ವಶಪಡಿಸಿಕೊಳ್ಳುವುದು ಅತ್ಯಂತ ಅಗತ್ಯ. ಇದು ಕ್ರಿಮಿಯಾದಲ್ಲಿರುವ ರಷ್ಯಾದ ಪಡೆಗಳು ಮತ್ತು ಸೇನಾ ನೆಲೆಗಳಿಂದ ಉಕ್ರೇನ್​ನಲ್ಲಿರುವ ಸೈನಿಕರಿಗೆ ಯುದ್ಧೋಪಕರಣಗಳು ಮತ್ತು ಇತರ ಅತ್ಯಗತ್ಯ ವಸ್ತುಗಳನ್ನು ಪೂರೈಸಲು ನೆರವಾಗುತ್ತದೆ.
  10. ಮಾತುಕತೆ ವಿಫಲ: ರಷ್ಯಾ ಮತ್ತು ಉಕ್ರೆನ್ ನಡುವೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಲವು ಸುತ್ತುಗಳ ಶಾಂತಿ ಮಾತುಕತೆಗಳು ನಡೆದಿವೆ. ಆದರೆ ಈವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. ರಷ್ಯಾ ಅಧ್ಯಕ್ಷರು ನನ್ನೊಂದಿಗೆ ನೇರ ಮಾತುಕತೆಗೆ ಮುಂದಾಗಬೇಕು. ಅದು ಈ ಹೊತ್ತಿನ ತುರ್ತು ಎಂದು ಝೆಲೆನ್​ಸ್ಕಿ ಹೇಳುತ್ತಿದ್ದಾರೆ. ಅಧ್ಯಕ್ಷರ ಮಟ್ಟದಲ್ಲಿ ನೇರ ಮಾತುಕತೆ ನಡೆಯದೇ ಯುದ್ಧ ನಿಲ್ಲುವುದಿಲ್ಲ ಎಂದು ಝೆಲೆನ್​ಸ್ಕಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Russia Ukraine War: ಪುಟಿನ್ ಕೆಟ್ಟೋನು ಅಂತ್ಲೇ ಅಂದ್ಕೊಳಿ: ರಷ್ಯಾ ಉಕ್ರೇನ್ ಯುದ್ಧ ನೋಡುವ ಮೂರು ಕ್ರಮಗಳಿವು

ಇದನ್ನೂ ಓದಿ: ಉಕ್ರೇನ್​ ಮೇಲಿನ ರಷ್ಯಾ ದಾಳಿ ಪಕ್ಕಾ ಪ್ಲಾನ್​ನಂತೆ ನಡೀತಿದೆ: ಅಂದು ಸಿರಿಯಾದಲ್ಲಿಯೂ ಇದೆಲ್ಲಾ ಆಗಿತ್ತು

Published On - 8:52 am, Tue, 22 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?