AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terror Attack: ರಷ್ಯಾದ ಸೇನಾ ತರಬೇತಿ ಮೈದಾನದಲ್ಲಿ ಉಗ್ರ ದಾಳಿ, ಕನಿಷ್ಠ 11 ಸಾವು

ಪಶ್ಚಿಮ ರಷ್ಯಾದ ಬೆಲ್ಗೊರೊಡ್ ಪ್ರದೇಶದ ಸೇನಾ ತರಬೇತಿ ಮೈದಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಜನ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಇದೊಂದು ಭಯೋತ್ಪಾದಕ ದಾಳಿ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಹೇಳಿದೆ.

Terror Attack: ರಷ್ಯಾದ ಸೇನಾ ತರಬೇತಿ ಮೈದಾನದಲ್ಲಿ ಉಗ್ರ ದಾಳಿ, ಕನಿಷ್ಠ 11 ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 16, 2022 | 12:04 PM

Share

ಮಾಸ್ಕೊ: ಪಶ್ಚಿಮ ರಷ್ಯಾ(Russia) ಬೆಲ್ಗೊರೊಡ್ ಪ್ರದೇಶದ ಸೇನಾ ತರಬೇತಿ ಮೈದಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಜನ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ತರಬೇತಿ ವೇಳೆ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿದ್ದಾರೆ. ಇದೊಂದು ಭಯೋತ್ಪಾದಕ ದಾಳಿ (Terror Attack) ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಹೇಳಿಕೆ ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಉಕ್ರೇನ್ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಉತ್ಸಾಹ ತೋರಿದ ಸಾರ್ವಜನಿಕರಿಗೆ ಗುಂಡಿನ ದಾಳಿ ತರಬೇತಿ ನೀಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಸಚಿವಾಲಯ ತಿಳಿಸಿದೆ.

‘ಉಕ್ರೇನ್ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಉತ್ಸಾಹ ತೋರಿದವರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ, ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೋರರು ಸೋವಿಯತ್ ರಿಪಬ್ಲಿಕ್​ನವರು. ಅವರಿಬ್ಬರನ್ನೂ ಹತ್ಯೆ ಮಾಡಲಾಗಿದೆ’ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: Russia and Ukraine War: ಉಕ್ರೇನ್‌ಗೆ 5,975 ಕೋಟಿ ಮಿಲಿಟರಿ ನೆರವು ಘೋಷಿಸಿದ ಅಮೆರಿಕ

ಇದನ್ನೂ ಓದಿ
Image
Global Recession: ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಹೆಚ್ಚಿನ ತೊಂದರೆಯಾಗದೆಂದ ಎಸ್​ಬಿಐ ಅಧ್ಯಕ್ಷ, ಕಾರಣವೇನು?
Image
Gold Price Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ; ಬೆಳ್ಳಿ ದರವೆಷ್ಟು?
Image
E-Passbook ಸೌಲಭ್ಯ ಬಿಡುಗಡೆ: ಆನ್​ಲೈನ್​ನಲ್ಲಿ ನಿಮ್ಮ ಪಾಸ್‌ಬುಕ್ ಅನ್ನು ಹೀಗೆ ಪರಿಶೀಲಿಸಿ
Image
HDFC Bank: ನಿಮ್ಮ ಖಾತೆಗೆ 13 ಕೋಟಿ ಜಮೆ ಆಗಿದೆ; ಎಚ್​ಡಿಎಫ್​ಸಿ ಬ್ಯಾಂಕ್​​ನಿಂದ 100 ಖಾತೆಗೆ ತಪ್ಪಾಗಿ ಹೋಗಿದ್ದು 1300 ಕೋಟಿ ರೂ.

ಈ ದಾಳಿಯು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗಾದ ಮತ್ತೊಂದು ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ. ಉಕ್ರೇನ್ ವಿರುದ್ಧದ ಕಾರ್ಯಾಚರಣೆಯಲ್ಲಿ ರಷ್ಯಾ ಹಲವು ಬಾರಿ ಹಿನ್ನಡೆ ಕಂಡಿದೆ. ಇದೀಗ ಸಾರ್ವಜನಿಕರಿಗೆ ಸೇನಾ ತರಬೇತಿ ನೀಡುತ್ತಿರುವಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಪುಟಿನ್ ಅವರಿಗೆ ಮುಜುಗರ ಉಂಟುಮಾಡಲಿದೆ ಎಂದು ಕೆಲವು ಮಾಧ್ಯಮಗಳು ವಿಶ್ಲೇಷಿಸಿವೆ.

ಜನರನ್ನು ಯುದ್ಧಕ್ಕೆ ಸಜ್ಜುಗೊಳಿಸುವಂತೆ ಪುಟಿನ್ ಮಾಡಿದ್ದ ಆದೇಶಕ್ಕೆ ಸಾವಿರಾರು ಜನರಿಂದ ವಿರೋಧ ವ್ಯಕ್ತವಾಗಿತ್ತು. ಈ ಮಧ್ಯೆಯ ಸಾವಿರಾರು ಸಂಖ್ಯೆಯಲ್ಲಿ ರಷ್ಯಾ ಜನರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ಕಳುಹಿಸಿಕೊಡಲಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಯುದ್ಧದಲ್ಲಿ ಭಾಗವಹಿಸಲು ಸ್ವಯಂಸ್ವೇವಕರಾಗಿ ಬಂದವರ ಮೇಲೆ ದಾಳಿ ನಡೆದಿದೆ ಎಂದು ‘ಆರ್​ಐಎ’ ಸುದ್ದಿಸಂಸ್ಥೆಯ ವರದಿ ಉಲ್ಲೇಖಿಸಿದೆ.

ಬೆಲ್ಗೊರೊಡ್ ನಗರ ಪ್ರದೇಶದ ವಿದ್ಯುತ್ ತಂತಿಗಳು, ಇಂಧನ ಮತ್ತು ಶಸ್ತ್ರಾಸ್ತ್ರ ಸಂಗ್ರಹಾಗಾರಗಳ ಮೇಲೆ ಉಕ್ರೇನ್ ದಾಳಿ ಮಾಡುತ್ತಿದೆ ಎಂದು ಅಧಿಕಾರಿಗಳು ಇತ್ತೀಚೆಗೆ ಆರೋಪಿಸಿದ್ದರು.

ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಸದಾ ಉಕ್ರೇನ್ ಪರ ನಿಂತಿರುವ ಅಮೆರಿಕ ಕೆಲವು ದಿನಗಳ ಹಿಂದಷ್ಟೇ ಹೆಚ್ಚುವರಿ ಸೇನಾ ಸಹಾಯವನ್ನು ಘೋಷಿಸಿತ್ತು. ಉಕ್ರೇನ್‌ಗೆ ಹೆಚ್ಚುವರಿ 725 ದಶಲಕ್ಷ ಅಮೆರಿಕನ್ ಡಾಲರ್ ಹೊಸ ನೆರವನ್ನು ನೀಡುವುದಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿದ್ದರು.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​