AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಉಕ್ರೇನ್​ನಲ್ಲಿ ಜನಿಸಿದ ಮಗು
TV9 Web
| Updated By: ಸುಷ್ಮಾ ಚಕ್ರೆ|

Updated on:Feb 26, 2022 | 6:25 PM

Share

ಕೈವ್: ಉಕ್ರೇನ್‌ನ (Ukraine) ಮೇಲಿನ ರಷ್ಯಾದ ಯುದ್ಧದ ಭೀಕರತೆಯ ನಡುವೆ ಕೈವ್‌ನಲ್ಲಿ ಏರ್ ರೇಡ್ ಶೆಲ್ಟರ್​​ನಲ್ಲಿ ಆಶ್ರಯ ಪಡೆದಿದ್ದ ಕುಟುಂಬವೊಂದರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ನೂರಾರು ಜನರು ಯುದ್ಧದಲ್ಲಿ ಸಾವನ್ನಪ್ಪಿರುವ ನಡುವೆ ಇನ್ನೊಂದೆಡೆ ಹೊಸ ಜೀವವೊಂದು ಭೂಮಿಗೆ ಕಾಲಿಟ್ಟಿದೆ. ಈ ಮೂಲಕ ಪ್ರಾಣಭೀತಿಯ ನಡುವೆಯೂ ಆ ಕುಟುಂಬ ಸಂತಸದಿಂದ ಮಗುವನ್ನು ಸ್ವಾಗತಿಸಿದೆ.

ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ಈ ಸಂತೋಷದ ಸುದ್ದಿಯನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. “ಕೈವ್​ನ ಶೆಲ್ಟರ್​​ನಲ್ಲಿ ಮೊದಲ ಮಗುವೊಂದು ಜನಿಸಿದೆ. ಸುತ್ತಲೂ ಉರಿಯುತ್ತಿರುವ ಕಟ್ಟಡಗಳು ಮತ್ತು ರಷ್ಯಾದ ಟ್ಯಾಂಕ್‌ಗಳ ಪಕ್ಕದಲ್ಲಿ ನಾವು ಆ ಮಗುವನ್ನು ಸ್ವಾತಂತ್ರ್ಯ ಎಂದು ಕರೆಯಬಹುದು!” ಎಂದು ಟ್ವೀಟ್ ಮಾಡಲಾಗಿದೆ.

ಮಗು ಮುದ್ದಾಗಿ ಮಲಗಿರುವ ಫೋಟೋವೊಂದನ್ನು ಟ್ವೀಟ್‌ ಜೊತೆಗೆ ಅಪ್​ಲೋಡ್ ಮಾಡಲಾಗಿದೆ. ಡೈಲಿ ಮೇಲ್ ವರದಿಯ ಪ್ರಕಾರ, ಹೆಣ್ಣು ಮಗುವಿಗೆ ಮಿಯಾ ಎಂದು ಹೆಸರಿಡಲಾಗಿದೆ. ಭೂಗತ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆದ 23 ವರ್ಷದ ಮಹಿಳೆಗೆ ಈ ಮಗು ಜನಿಸಿದೆ.

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

Russia-Ukraine War: ಕೈವ್ ಬಳಿ 14 ಜನರಿದ್ದ ಉಕ್ರೇನ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ರಷ್ಯಾ ಸೇನೆ

Published On - 6:24 pm, Sat, 26 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ