AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಉಕ್ರೇನ್​ನಲ್ಲಿ ಜನಿಸಿದ ಮಗು
TV9 Web
| Edited By: |

Updated on:Feb 26, 2022 | 6:25 PM

Share

ಕೈವ್: ಉಕ್ರೇನ್‌ನ (Ukraine) ಮೇಲಿನ ರಷ್ಯಾದ ಯುದ್ಧದ ಭೀಕರತೆಯ ನಡುವೆ ಕೈವ್‌ನಲ್ಲಿ ಏರ್ ರೇಡ್ ಶೆಲ್ಟರ್​​ನಲ್ಲಿ ಆಶ್ರಯ ಪಡೆದಿದ್ದ ಕುಟುಂಬವೊಂದರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ನೂರಾರು ಜನರು ಯುದ್ಧದಲ್ಲಿ ಸಾವನ್ನಪ್ಪಿರುವ ನಡುವೆ ಇನ್ನೊಂದೆಡೆ ಹೊಸ ಜೀವವೊಂದು ಭೂಮಿಗೆ ಕಾಲಿಟ್ಟಿದೆ. ಈ ಮೂಲಕ ಪ್ರಾಣಭೀತಿಯ ನಡುವೆಯೂ ಆ ಕುಟುಂಬ ಸಂತಸದಿಂದ ಮಗುವನ್ನು ಸ್ವಾಗತಿಸಿದೆ.

ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ಈ ಸಂತೋಷದ ಸುದ್ದಿಯನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. “ಕೈವ್​ನ ಶೆಲ್ಟರ್​​ನಲ್ಲಿ ಮೊದಲ ಮಗುವೊಂದು ಜನಿಸಿದೆ. ಸುತ್ತಲೂ ಉರಿಯುತ್ತಿರುವ ಕಟ್ಟಡಗಳು ಮತ್ತು ರಷ್ಯಾದ ಟ್ಯಾಂಕ್‌ಗಳ ಪಕ್ಕದಲ್ಲಿ ನಾವು ಆ ಮಗುವನ್ನು ಸ್ವಾತಂತ್ರ್ಯ ಎಂದು ಕರೆಯಬಹುದು!” ಎಂದು ಟ್ವೀಟ್ ಮಾಡಲಾಗಿದೆ.

ಮಗು ಮುದ್ದಾಗಿ ಮಲಗಿರುವ ಫೋಟೋವೊಂದನ್ನು ಟ್ವೀಟ್‌ ಜೊತೆಗೆ ಅಪ್​ಲೋಡ್ ಮಾಡಲಾಗಿದೆ. ಡೈಲಿ ಮೇಲ್ ವರದಿಯ ಪ್ರಕಾರ, ಹೆಣ್ಣು ಮಗುವಿಗೆ ಮಿಯಾ ಎಂದು ಹೆಸರಿಡಲಾಗಿದೆ. ಭೂಗತ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆದ 23 ವರ್ಷದ ಮಹಿಳೆಗೆ ಈ ಮಗು ಜನಿಸಿದೆ.

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

Russia-Ukraine War: ಕೈವ್ ಬಳಿ 14 ಜನರಿದ್ದ ಉಕ್ರೇನ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ರಷ್ಯಾ ಸೇನೆ

Published On - 6:24 pm, Sat, 26 February 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ