AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಉಕ್ರೇನ್​ನಲ್ಲಿ ಜನಿಸಿದ ಮಗು
TV9 Web
| Edited By: |

Updated on:Feb 26, 2022 | 6:25 PM

Share

ಕೈವ್: ಉಕ್ರೇನ್‌ನ (Ukraine) ಮೇಲಿನ ರಷ್ಯಾದ ಯುದ್ಧದ ಭೀಕರತೆಯ ನಡುವೆ ಕೈವ್‌ನಲ್ಲಿ ಏರ್ ರೇಡ್ ಶೆಲ್ಟರ್​​ನಲ್ಲಿ ಆಶ್ರಯ ಪಡೆದಿದ್ದ ಕುಟುಂಬವೊಂದರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ನೂರಾರು ಜನರು ಯುದ್ಧದಲ್ಲಿ ಸಾವನ್ನಪ್ಪಿರುವ ನಡುವೆ ಇನ್ನೊಂದೆಡೆ ಹೊಸ ಜೀವವೊಂದು ಭೂಮಿಗೆ ಕಾಲಿಟ್ಟಿದೆ. ಈ ಮೂಲಕ ಪ್ರಾಣಭೀತಿಯ ನಡುವೆಯೂ ಆ ಕುಟುಂಬ ಸಂತಸದಿಂದ ಮಗುವನ್ನು ಸ್ವಾಗತಿಸಿದೆ.

ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ಈ ಸಂತೋಷದ ಸುದ್ದಿಯನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. “ಕೈವ್​ನ ಶೆಲ್ಟರ್​​ನಲ್ಲಿ ಮೊದಲ ಮಗುವೊಂದು ಜನಿಸಿದೆ. ಸುತ್ತಲೂ ಉರಿಯುತ್ತಿರುವ ಕಟ್ಟಡಗಳು ಮತ್ತು ರಷ್ಯಾದ ಟ್ಯಾಂಕ್‌ಗಳ ಪಕ್ಕದಲ್ಲಿ ನಾವು ಆ ಮಗುವನ್ನು ಸ್ವಾತಂತ್ರ್ಯ ಎಂದು ಕರೆಯಬಹುದು!” ಎಂದು ಟ್ವೀಟ್ ಮಾಡಲಾಗಿದೆ.

ಮಗು ಮುದ್ದಾಗಿ ಮಲಗಿರುವ ಫೋಟೋವೊಂದನ್ನು ಟ್ವೀಟ್‌ ಜೊತೆಗೆ ಅಪ್​ಲೋಡ್ ಮಾಡಲಾಗಿದೆ. ಡೈಲಿ ಮೇಲ್ ವರದಿಯ ಪ್ರಕಾರ, ಹೆಣ್ಣು ಮಗುವಿಗೆ ಮಿಯಾ ಎಂದು ಹೆಸರಿಡಲಾಗಿದೆ. ಭೂಗತ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆದ 23 ವರ್ಷದ ಮಹಿಳೆಗೆ ಈ ಮಗು ಜನಿಸಿದೆ.

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

Russia-Ukraine War: ಕೈವ್ ಬಳಿ 14 ಜನರಿದ್ದ ಉಕ್ರೇನ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ರಷ್ಯಾ ಸೇನೆ

Published On - 6:24 pm, Sat, 26 February 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ