AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

Russia-Ukraine War: ರಷ್ಯಾದ ದಾಳಿಯ ನಡುವೆ ಶೆಲ್ಟರ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಉಕ್ರೇನ್​ನಲ್ಲಿ ಜನಿಸಿದ ಮಗು
TV9 Web
| Edited By: |

Updated on:Feb 26, 2022 | 6:25 PM

Share

ಕೈವ್: ಉಕ್ರೇನ್‌ನ (Ukraine) ಮೇಲಿನ ರಷ್ಯಾದ ಯುದ್ಧದ ಭೀಕರತೆಯ ನಡುವೆ ಕೈವ್‌ನಲ್ಲಿ ಏರ್ ರೇಡ್ ಶೆಲ್ಟರ್​​ನಲ್ಲಿ ಆಶ್ರಯ ಪಡೆದಿದ್ದ ಕುಟುಂಬವೊಂದರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ನೂರಾರು ಜನರು ಯುದ್ಧದಲ್ಲಿ ಸಾವನ್ನಪ್ಪಿರುವ ನಡುವೆ ಇನ್ನೊಂದೆಡೆ ಹೊಸ ಜೀವವೊಂದು ಭೂಮಿಗೆ ಕಾಲಿಟ್ಟಿದೆ. ಈ ಮೂಲಕ ಪ್ರಾಣಭೀತಿಯ ನಡುವೆಯೂ ಆ ಕುಟುಂಬ ಸಂತಸದಿಂದ ಮಗುವನ್ನು ಸ್ವಾಗತಿಸಿದೆ.

ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇಂದು ಈ ಸಂತೋಷದ ಸುದ್ದಿಯನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. “ಕೈವ್​ನ ಶೆಲ್ಟರ್​​ನಲ್ಲಿ ಮೊದಲ ಮಗುವೊಂದು ಜನಿಸಿದೆ. ಸುತ್ತಲೂ ಉರಿಯುತ್ತಿರುವ ಕಟ್ಟಡಗಳು ಮತ್ತು ರಷ್ಯಾದ ಟ್ಯಾಂಕ್‌ಗಳ ಪಕ್ಕದಲ್ಲಿ ನಾವು ಆ ಮಗುವನ್ನು ಸ್ವಾತಂತ್ರ್ಯ ಎಂದು ಕರೆಯಬಹುದು!” ಎಂದು ಟ್ವೀಟ್ ಮಾಡಲಾಗಿದೆ.

ಮಗು ಮುದ್ದಾಗಿ ಮಲಗಿರುವ ಫೋಟೋವೊಂದನ್ನು ಟ್ವೀಟ್‌ ಜೊತೆಗೆ ಅಪ್​ಲೋಡ್ ಮಾಡಲಾಗಿದೆ. ಡೈಲಿ ಮೇಲ್ ವರದಿಯ ಪ್ರಕಾರ, ಹೆಣ್ಣು ಮಗುವಿಗೆ ಮಿಯಾ ಎಂದು ಹೆಸರಿಡಲಾಗಿದೆ. ಭೂಗತ ಮೆಟ್ರೋ ನಿಲ್ದಾಣದಲ್ಲಿ ಆಶ್ರಯ ಪಡೆದ 23 ವರ್ಷದ ಮಹಿಳೆಗೆ ಈ ಮಗು ಜನಿಸಿದೆ.

ಉಕ್ರೇನಿಯನ್ ಪೊಲೀಸ್ ಅಧಿಕಾರಿಗಳೇ ಹೆರಿಗೆ ಮಾಡಿ, ಮಿಯಾಳನ್ನು ಆಕೆಯ ಅಮ್ಮನ ಕೈಗೆ ಇಟ್ಟಿದ್ದಾರೆ. ತಾಯಿ ಮತ್ತು ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

Russia-Ukraine War: ಕೈವ್ ಬಳಿ 14 ಜನರಿದ್ದ ಉಕ್ರೇನ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ರಷ್ಯಾ ಸೇನೆ

Published On - 6:24 pm, Sat, 26 February 22

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ