AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?
ವ್ಯಾಗ್ನರ್ ಗ್ರೂಪ್Image Credit source: Hindustan Times
ನಯನಾ ರಾಜೀವ್
|

Updated on: Jun 25, 2023 | 3:55 PM

Share

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರ ಆಪ್ತರಾಗಿದ್ದ ಯೆಗ್ವೆನಿ ಪ್ರಿಗೋಷಿನ್, ಪುಟಿನ್ ಬೆಂಬಲದಿಂದಲೇ 2014ರಲ್ಲಿ ವ್ಯಾಗ್ನರ್ ಎಂಬ ಮಿಲಿಟರಿ ಪಡೆ ಕಟ್ಟಿದ್ದರು. ಸೇಂಟ್ ಪೀಟರ್ಸ್​ಬರ್ಗ್​ ಮೇಯರ್ ಆಗಿಯೂ ಕೆಲಸ ನಿರ್ವಹಿಸಿದ್ದರು.

ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ವ್ಯಾಗ್ನರ್ ಗುಂಪು ಮಹತ್ವದ ಪಾತ್ರವಹಿಸಿತ್ತು, ಹಾಗೆಯೇ ಬಖ್ಮಟ್ ನಗರವನ್ನು ವಶಪಡಿಸಿಕೊಳ್ಳುವ ಸಲುವಾಗಿ ನಡೆದ ಯುದ್ಧದಲ್ಲಿ ರಷ್ಯಾ ಪಡೆಗಳು ಯಶ್ವಿಯಾಗುವಲ್ಲಿ ವ್ಯಾಗ್ನರ್ ಪಾತ್ರ ಹೆಚ್ಚಿತ್ತು.

ಮತ್ತಷ್ಟು ಓದಿ: Russia: ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾಕ್ಕೀಗ ದಂಗೆಯ ಬಿಸಿ; ಸೇನೆ ವಿರುದ್ಧವೇ ಶುರುವಾಯ್ತು ಬಂಡಾಯ

ಸರ್ಕಾರ ಹಾಗೂ ಸೇನೆಯ ವಿರುದ್ಧ ಬಂಡಾಯವೆದ್ದಿರುವ ಪ್ರಿಗೋಷಿಸ್ ವಿರುದ್ಧ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಿತಿ ಕಿಡಿಕಾರಿತ್ತು, ಸಶಸ್ತ್ರ ದಂಗೆ ನಡೆಸುವವರಿಗೆ 20 ವರ್ಷಗಳಷ್ಟು ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಸಿತ್ತು.

ಉಕ್ರೇನ್ ವಿರುದ್ಧ ಹೋರಾಡುತ್ತಿರುವ ಯೋಧರಿಗೆ ರಷ್ಯಾ ಸೇನೆಯ ಅಧಿಕಾರಿಗಳು ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಒದಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು ಇದರ ಬೆನ್ನಲ್ಲೇ ಬಂಡಾಯವೆದ್ದಿತ್ತು. ರಷ್ಯಾ ಸೇನೆಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ಸಚಿವಾಲಯದ ಜತೆಗಿನ ಮುಸುಕಿನ ಗುದ್ದಾಟ ಈಗ ದಂಗೆ ರೂಪ ತಳೆದಿದೆ ಎಂದುಋಉ ಹೇಳಲಾಗಿದೆ.

ರಕ್ಷಣಾ ಸಚಿವಾಲಯವು ವ್ಯಾಗ್ನರ್ ಗುಂಪಿನ ಮುಖ್ಯಸ್ಥರ ಮೇಲೆ ಸಶಸ್ತ್ರ ದಂಗೆಯ ಆರೋಪವನ್ನು ಹೊರಿಸಿದೆ. ಅಷ್ಟೇ ಅಲ್ಲದೆ, ಪ್ರಿಗೋಜಿನ್ ಆದೇಶಗಳನ್ನು ಪಾಲಿಸದಂತೆ ವ್ಯಾಗ್ನರ್ ಗುಂಪಿನ ಪಡೆಗಳಿಗೆ ಮನವಿ ಮಾಡಿದೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೂ ಈ ಕುರಿತು ಮಾಹಿತಿ ನೀಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?