Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?
ವ್ಯಾಗ್ನರ್ ಗ್ರೂಪ್Image Credit source: Hindustan Times
Follow us
ನಯನಾ ರಾಜೀವ್
|

Updated on: Jun 25, 2023 | 3:55 PM

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಷ್ಯಾದ ಅಧ್ಯಕ್ಷ ಪುಟಿನ್ ಅವರ ಆಪ್ತರಾಗಿದ್ದ ಯೆಗ್ವೆನಿ ಪ್ರಿಗೋಷಿನ್, ಪುಟಿನ್ ಬೆಂಬಲದಿಂದಲೇ 2014ರಲ್ಲಿ ವ್ಯಾಗ್ನರ್ ಎಂಬ ಮಿಲಿಟರಿ ಪಡೆ ಕಟ್ಟಿದ್ದರು. ಸೇಂಟ್ ಪೀಟರ್ಸ್​ಬರ್ಗ್​ ಮೇಯರ್ ಆಗಿಯೂ ಕೆಲಸ ನಿರ್ವಹಿಸಿದ್ದರು.

ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ವ್ಯಾಗ್ನರ್ ಗುಂಪು ಮಹತ್ವದ ಪಾತ್ರವಹಿಸಿತ್ತು, ಹಾಗೆಯೇ ಬಖ್ಮಟ್ ನಗರವನ್ನು ವಶಪಡಿಸಿಕೊಳ್ಳುವ ಸಲುವಾಗಿ ನಡೆದ ಯುದ್ಧದಲ್ಲಿ ರಷ್ಯಾ ಪಡೆಗಳು ಯಶ್ವಿಯಾಗುವಲ್ಲಿ ವ್ಯಾಗ್ನರ್ ಪಾತ್ರ ಹೆಚ್ಚಿತ್ತು.

ಮತ್ತಷ್ಟು ಓದಿ: Russia: ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾಕ್ಕೀಗ ದಂಗೆಯ ಬಿಸಿ; ಸೇನೆ ವಿರುದ್ಧವೇ ಶುರುವಾಯ್ತು ಬಂಡಾಯ

ಸರ್ಕಾರ ಹಾಗೂ ಸೇನೆಯ ವಿರುದ್ಧ ಬಂಡಾಯವೆದ್ದಿರುವ ಪ್ರಿಗೋಷಿಸ್ ವಿರುದ್ಧ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮಿತಿ ಕಿಡಿಕಾರಿತ್ತು, ಸಶಸ್ತ್ರ ದಂಗೆ ನಡೆಸುವವರಿಗೆ 20 ವರ್ಷಗಳಷ್ಟು ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಸಿತ್ತು.

ಉಕ್ರೇನ್ ವಿರುದ್ಧ ಹೋರಾಡುತ್ತಿರುವ ಯೋಧರಿಗೆ ರಷ್ಯಾ ಸೇನೆಯ ಅಧಿಕಾರಿಗಳು ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಒದಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು ಇದರ ಬೆನ್ನಲ್ಲೇ ಬಂಡಾಯವೆದ್ದಿತ್ತು. ರಷ್ಯಾ ಸೇನೆಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ಸಚಿವಾಲಯದ ಜತೆಗಿನ ಮುಸುಕಿನ ಗುದ್ದಾಟ ಈಗ ದಂಗೆ ರೂಪ ತಳೆದಿದೆ ಎಂದುಋಉ ಹೇಳಲಾಗಿದೆ.

ರಕ್ಷಣಾ ಸಚಿವಾಲಯವು ವ್ಯಾಗ್ನರ್ ಗುಂಪಿನ ಮುಖ್ಯಸ್ಥರ ಮೇಲೆ ಸಶಸ್ತ್ರ ದಂಗೆಯ ಆರೋಪವನ್ನು ಹೊರಿಸಿದೆ. ಅಷ್ಟೇ ಅಲ್ಲದೆ, ಪ್ರಿಗೋಜಿನ್ ಆದೇಶಗಳನ್ನು ಪಾಲಿಸದಂತೆ ವ್ಯಾಗ್ನರ್ ಗುಂಪಿನ ಪಡೆಗಳಿಗೆ ಮನವಿ ಮಾಡಿದೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೂ ಈ ಕುರಿತು ಮಾಹಿತಿ ನೀಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ